ಸಿಜೆಐಗೆ ಪತ್ರ ಬರೆದ ಬಳಿಕ ಬಸ್ ಬಂತು!
Team Udayavani, Nov 5, 2021, 7:30 AM IST
ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚಿಡೇಡು ಗ್ರಾಮದ ವಿದ್ಯಾರ್ಥಿನಿಯೊಬ್ಬಳು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರಿಗೇ ಪತ್ರ ಬರೆದು ತನ್ನೂರಿಗೆ ಬಸ್ ಸಂಚಾರ ಪುನರಾರಂಭಕ್ಕೆ ಕಾರಣಳಾಗಿದ್ದಾಳೆ.
ಕೊರೊನಾ ಸೋಂಕು ಹೆಚ್ಚಿದ್ದ ಸಮಯದಲ್ಲಿ ತೆಲಂಗಾಣ ರಾಜ್ಯ ಸಾರಿಗೆ ಸಂಸ್ಥೆ ಗ್ರಾಮಕ್ಕೆ ಬರುತ್ತಿದ್ದ ಬಸ್ನ ಸಂಚಾರ ಸ್ಥಗಿತಗೊಳಿಸಿತ್ತು. ಸದ್ಯ ಪರಿಸ್ಥಿತಿ ಸಹಜತೆಗೆ ಬಂದಿದ್ದರೂ ಬಸ್ ವ್ಯವಸ್ಥೆ ಪುನರಾರಂಭವಾಗಿರಲಿಲ್ಲ. ಈ ನಡುವೆ ಶಾಲೆಗಳೂ ಪುನಾರಂಭವಾಗಿದ್ದರಿಂದ 8ನೇ ತರಗತಿ ವಿದ್ಯಾರ್ಥಿನಿ ಪಿ.ವೈಷ್ಣವಿ ಮತ್ತು ಆಕೆಯ ಸ್ನೇಹಿತರಿಗೆ ಸೂಕ್ತ ಸಮಯದಲ್ಲಿ ಶಾಲೆಗೆ ತೆರಳಲು ಸಾಧ್ಯವಾಗುತ್ತಿಲ್ಲ. ದಿನವೂ ಆಟೋ ರಿಕ್ಷಾದಲ್ಲಿಯೇ ಪ್ರಯಾಣಿಸಲು ಆರ್ಥಿಕವಾಗಿ ಸಾಧ್ಯವಿಲ್ಲ. ಹೀಗಾಗಿ, ಬಸ್ ಸಂಚಾರವನ್ನು ಪುನರಾರಂಭಿಸಲು ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರಿಗೆ ಪತ್ರ ಬರೆದಿದ್ದಳು.
ಅದನ್ನು ಗಂಭೀರವಾಗಿ ಪರಿಗಣಿಸಿದ್ದ ಮುಖ್ಯ ನ್ಯಾಯಮೂರ್ತಿಗಳು ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ವಿ.ಸಿ.ಸಜ್ಜನರ್ ಅವರಿಗೆ ಪತ್ರ ಬರೆದಿದ್ದರು. ಎಚ್ಚೆತ್ತುಕೊಂಡು ಸಾರಿಗೆ ಸಂಸ್ಥೆ ಗ್ರಾಮಕ್ಕೆ ಬಸ್ ಶುರುವಾಗುವಂತೆ ಮಾಡಿದೆ. ಸೂಕ್ತ ಸಮಯದಲ್ಲಿ ಮಾಹಿತಿ ನೀಡಿದ್ದಕ್ಕಾಗಿ ಮುಖ್ಯ ನ್ಯಾಯಮೂರ್ತಿಗಳಿಗೆ ಸಜ್ಜನರ್ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ