ಟಿಎಂಸಿ ಮುಖಂಡನ ಹತ್ಯೆ; ಗ್ರಾಮಸ್ಥರಿಂದ ಮನೆಗಳಿಗೆ ಬೆಂಕಿ, ಏಳು ಮಂದಿ ಸಜೀವ ದಹನ
ಪಶ್ಚಿಮಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಾಗಿ ರಾಜ್ಯಪಾಲರಾದ ಜಗ್ ದೀಪ್ ಧಾನ್ಖಾರ್ ಆರೋಪಿಸಿದ್ದಾರೆ.
Team Udayavani, Mar 22, 2022, 5:48 PM IST
ಕೋಲ್ಕತಾ: ಪಂಚಾಯತ್ ಉಪಾಧ್ಯಕ್ಷರನ್ನು ಬಾಂಬ್ ದಾಳಿ ನಡೆಸಿ ಹತ್ಯೆಗೈದ ಘಟನೆಯ ನಂತರ ಆಕ್ರೋಶಗೊಂಡ ಗ್ರಾಮಸ್ಥರು ಮನೆಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಏಳು ಮಂದಿ ಸಜೀವವಾಗಿ ದಹನವಾಗಿದ್ದು, ಮೂವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಭೀಕರ ಘಟನೆ ಪಶ್ಚಿಮಬಂಗಾಳದ ಬಿರ್ಭ್ಯೂಮ್ ಜಿಲ್ಲೆಯಲ್ಲಿ ಮಂಗಳವಾರ (ಮಾರ್ಚ್ 22) ನಡೆದಿದೆ.
ಇದನ್ನೂ ಓದಿ:ಚಡಚಣ ಸಹೋದರರ ಹತ್ಯಾ ಪ್ರಕರಣ : ನ್ಯಾಯಾಲಯಕ್ಕೆ ಹಾಜರಾದ ಭೈರಗೊಂಡ – ಸಹಚರರಿಗೆ ಭಾರಿ ಭದ್ರತೆ
ಏನಿದು ಹಿಂಸಾಚಾರ?
ಸೋಮವಾರ ಪಶ್ಚಿಮಬಂಗಾಳದ ಬಿರ್ಭ್ಯೂಮ್ ಜಿಲ್ಲೆಯಲ್ಲಿನ ತೃಣಮೂಲ ಕಾಂಗ್ರೆಸ್ ಆಡಳಿತದ ಪಂಚಾಯತ್ ನ ಉಪ ಪ್ರಧಾನ್ ಭಾದು ಶೇಖ್ ಅವರನ್ನು ದುಷ್ಕರ್ಮಿಗಳು ಬಾಂಬ್ ದಾಳಿ ನಡೆಸಿ ಹತ್ಯೆಗೈದಿದ್ದರು. ಈ ಘಟನೆ ಬಳಿಕ ಉದ್ರಿಕ್ತ ಗ್ರಾಮಸ್ಥರು ಸುತ್ತಮುತ್ತಲಿನ ಮನೆಗಳ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಿದ್ದರು.
ಬೆಂಕಿ ಹಚ್ಚಿದ ಘಟನೆಯಲ್ಲಿ ಒಂದೇ ಮನೆಯ ಏಳು ಮಂದಿ ಸಜೀವವಾಗಿ ದಹನವಾಗಿದ್ದು, ಮೂವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಪ್ರಕರಣದ ನಂತರ ಹಿಂಸಾಚಾರ ಭುಗಿಲೆದ್ದಿದ್ದು, ಪಶ್ಚಿಮಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಾಗಿ ರಾಜ್ಯಪಾಲರಾದ ಜಗ್ ದೀಪ್ ಧಾನ್ಖಾರ್ ಆರೋಪಿಸಿದ್ದಾರೆ.
ಹಿಂಸಾಚಾರ ಪ್ರಕರಣದಲ್ಲಿ ಈಗಾಗಲೇ 11 ಮಂದಿಯನ್ನು ಬಂಧಿಸಿದ್ದು, ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ನಿಯೋಗ ಕೂಡಾ ಪ್ರದೇಶದಲ್ಲಿ ಬೀಡುಬಿಟ್ಟಿದೆ. ಘಟನೆ ಬಗ್ಗೆ ವಿಶೇಷ ತಂಡದಿಂದ ತನಿಖೆ ನಡೆಸುವುದಾಗಿ ಪಶ್ಚಿಮಬಂಗಾಳ ಸರ್ಕಾರ ಘೋಷಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು