ತಿರುವನಂತಪುರ: ಶಾಲಾ ಕಟ್ಟಡದಿಂದ ಕೆಳ ಹಾರಿದ್ದ ಬಾಲಕಿ ಸಾವು
Team Udayavani, Oct 23, 2017, 12:06 PM IST
ತಿರುವನಂತಪುರ : ಶಿಕ್ಷಕರು ನೀಡಿದ್ದ ಕಿರುಕುಳ, ಮಾನಸಿಕ ಹಿಂಸೆಯಿಂದ ಬೇಸತ್ತು, ಎರಡು ದಿನಗಳ ಹಿಂದೆ ತನ್ನ ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಕೆಳಕ್ಕೆ ಹಾರಿದ್ದ ಕೇರಳದ ಖಾಸಗಿ ಶಾಲೆಯೊಂದರ 10ನೇ ತರಗತಿಯ ವಿದ್ಯಾರ್ಥಿನಿ ಇಂದು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಶಾಲೆಯ ಶಿಕ್ಷಕರು ನೀಡುತ್ತಿದ್ದ ಕಿರುಕುಳ, ಮಾನಸಿಕ ಹಿಂಸೆಯಿಂದಾಗಿಯೇ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ಮನೆವರು ದೂರು ನೀಡಿದ್ದು ಪೊಲೀಸರು ಕೊಲ್ಲಂ ನಗರದ ತಂಗಶೆರಿ ಪ್ರದೇಶದಲ್ಲಿರುವ ಟ್ರಿನಿಟಿ ಲೀಸಿಯಂ ಶಾಲೆಯ ಇಬ್ಬರು ಶಿಕ್ಷಕರ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ.
ಇದೇ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿರುವ ತನ್ನ ಸಹೋದರಿ ತರಗತಿಯಲ್ಲಿ ಮಾತನಾಡಿದಳೆಂಬ ಕಾರಣಕ್ಕೆ ಆಕೆಗೆ ಶಿಕ್ಷಕರು ನೀಡಿದ್ದ ಶಿಕ್ಷೆಯನ್ನು ಈಕೆ ಪ್ರಶ್ನಿಸಿದ್ದಳು ಎನ್ನಲಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿಯ ಚಿಕ್ಕಪ್ಪ ಪೊಲೀಸರಿಗೆ ಕೊಟ್ಟಿರುವ ದೂರಿನ ಪ್ರಕಾರ, “ಶಾಲೆಯ ಶಿಕ್ಷಕರು ಆಕೆಗೆ ಮಧ್ಯಾಹ್ನ ಊಟಕ್ಕೂ ಬಿಡುವು ಕೊಡುತ್ತಿರಲಿಲ್ಲ; ನಿನ್ನನ್ನು ಬೋರ್ಡ್ ಪರೀಕ್ಷೆಗೆ ಕೂರಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದರು’ ಎಂದು ತಿಳಿದು ಬಂದಿದೆ.
ಕಳೆದ ಶುಕ್ರವಾರ ಮಧ್ಯಾಹ್ನ 1.30ರ ಹೊತ್ತಿಗೆ ಬಾಲಕಿಯು ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಳು. ಗಂಭೀರ ಸ್ಥಿತಿಯಲ್ಲಿದ್ದ ಆಕೆಯ ಹೇಳಿಕೆಯನ್ನು ಪಡೆದುಕೊಳ್ಳಲು ಪೊಲೀಸರು ವಿಫಲರಾಗಿದ್ದರು. ಆದರೆ ಆಕೆಯ ತಂದೆಯ ಹೇಳಿಕೆಯನ್ನು ಪಡೆದುಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ