“ಕಾರಣ ಯಾರೆಂದು ಹೇಳಲು ಭಯವಾಗ್ತಿದೆ..”: ಮನಕಲಕುವ ಡೆತ್ ನೋಟ್ ಬರೆದಿಟ್ಟು ಬಾಲಕಿ ಆತ್ಮಹತ್ಯೆ!
Team Udayavani, Nov 20, 2021, 2:59 PM IST
ಕರೂರು: ಲೈಂಗಿಕ ಶೋಷಣೆಯಿಂದ ನೊಂದ 17 ವರ್ಷ ಪ್ರಾಯದ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ತಮಿಳುನಾಡು ರಾಜ್ಯದ ಕರೂರಿನಲ್ಲಿ ನಡೆದಿದೆ. ಶುಕ್ರವಾರ ಸಂಜೆ ಈ ಘಟನೆ ನಡೆದಿದೆ.
12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಶುಕ್ರವಾರ ಸಂಜೆ ಮನೆಗೆ ಬಂದ ಬಳಿಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬಾಲಕಿಯ ತಾಯಿ ಈ ಸಮಯದಲ್ಲಿ ಮನೆಯಲ್ಲಿ ಇರಲಿಲ್ಲ. ಪಕ್ಕದ ಮನೆಯ ಮಹಿಳೆಯೊಬ್ಬರು ಘಟನೆಯನ್ನು ನೋಡಿ ತಾಯಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿ ತಿಳಿಸಿದೆ.
ಆತ್ಮಹತ್ಯೆಗೂ ಮೊದಲು ಬಾಲಕಿಯು ಡೆತ್ ನೋಟ್ ಬರೆದಿದ್ದಾಳೆ. “ಕರೂರ್ ಜಿಲ್ಲೆಯಲ್ಲಿ ಲೈಂಗಿಕ ಕಿರುಕುಳದಿಂದ ಸಾಯುವ ಕೊನೆಯ ಹುಡುಗಿ ನಾನೇ ಆಗಿರಬೇಕು. ನನ್ನ ಈ ನಿರ್ಧಾರಕ್ಕೆ ಕಾರಣ ಯಾರು ಎಂದು ಹೇಳಲು ನನಗೆ ಭಯವಾಗಿದೆ. ನಾನು ಈ ಭೂಮಿಯಲ್ಲಿ ದೀರ್ಘಕಾಲ ಬದುಕಬೇಕು ಮತ್ತು ಇತರರಿಗೆ ಸಹಾಯ ಮಾಡಬೇಕೆಂದು ಬಯಸಿದ್ದೆ, ಆದರೆ ಈಗ ನಾನು ಇಷ್ಟು ಬೇಗ ಇಹಲೋಕ ತ್ಯಜಿಸುವಂತಾಗಿದೆ” ಎಂದು ಬಾಲಕಿ ಬರೆದಿದ್ದಾಳೆ.
ಇದನ್ನೂ ಓದಿ:ಉಪ್ಪಿನಂಗಡಿ: ಹೆಣ್ಣು ಮಗುವಿಗೆ ಜನ್ಮ ನೀಡಿದ ಹತ್ತನೇ ತರಗತಿ ವಿದ್ಯಾರ್ಥಿನಿ
ತಮಿಳುನಾಡು ರಾಜ್ಯದಲ್ಲಿ ಲೈಂಗಿಕ ಶೋಷಣೆಯ ಕಾರಣದಿಂದ ಇತ್ತೀಚೆಗೆ ನಡೆದ ಎರಡನೇ ಆತ್ಮಹತ್ಯೆ ಪ್ರಕರಣ ಇದಾಗಿದೆ. ಕಳೆದ ವಾರ ಕೊಯಮತ್ತೂರು ಜಿಲ್ಲೆಯಲ್ಲಿ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಶಾಲಾ ಶಿಕ್ಷಕರ ಲೈಂಗಿನ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?