ದೆಹಲಿ ಗಲಭೆ: ನಾಪತ್ತೆಯಾಗಿದ್ದ ಶಾಲಾ ಬಾಲಕಿ ನಾಲ್ಕು ದಿನಗಳ ಬಳಿಕ ಸುರಕ್ಷಿತವಾಗಿ ಪತ್ತೆ
Team Udayavani, Feb 28, 2020, 8:23 PM IST
ಗಲಭೆ ಪೀಡಿತ ಪ್ರದೇಶದಲ್ಲಿ ಗಸ್ತು ನಿರತವಾಗಿರುವ ಅರೆ ಸೇನಾ ಪಡೆಯ ಜವಾನರು.
ನವದೆಹಲಿ: ಕಳೆದ ಆದಿತ್ಯವಾರದಂದು ದೆಹಲಿಯ ವಿವಿಧ ಪ್ರದೇಶಗಳಲ್ಲಿ ಭುಗಿಲೆದ್ದಿದ್ದ ಹಿಂಸಾಚಾರ ಸಂದರ್ಭದಲ್ಲಿ ನಾಪತ್ತೆಯಾಗಿದ್ದ 13 ವರ್ಷದ ಶಾಲಾ ಬಾಲಕಿಯೊಬ್ಬಳು ಇಂದು ಪತ್ತೆಯಾಗಿದ್ದು ಸುರಕ್ಷಿತವಾಗಿ ಹೆತ್ತವರನ್ನು ಸೇರಿಕೊಂಡಿದ್ದಾಳೆ.
ಇಲ್ಲಿನ ಖಜೂರಿ ಖಾಸ್ ಪ್ರದೇಶದಲ್ಲಿ ವಾಸಿಸುತ್ತಿರುವ ಬಟ್ಟೆ ವ್ಯಾಪಾರಿಯೊಬ್ಬರ 13 ವರ್ಷದ ಮಗಳು ಸೋಮವಾರದಂದು ಪರೀಕ್ಷೆ ಬರೆಯಲೆಂದು ಶಾಲೆಗೆ ಹೋಗಿದ್ದಳು. ಬಳಿಕ ಅದೇ ದಿನ ಸಾಯಂಕಾಲ 5.20ರ ಸುಮಾರಿಗೆ ಆಕೆಯನ್ನು ಶಾಲೆಯಿಂದ ಮನೆಗೆ ಕರೆತರಲು ಹೊರಟಿದ್ದ ಬಾಲಕಿಯ ತಂದೆ ನಗರದಲ್ಲಿ ಭುಗಿಲೆದ್ದಿದ್ದ ಗಲಭೆಯಲ್ಲಿ ಸಿಲುಕಿಕೊಂಡು ಶಾಲೆಗೆ ತೆರಳಲು ಸಾಧ್ಯವಾಗಿರಲಿಲ್ಲ.
ಅಂದಿನಿಂದ ಈ ಬಾಲಕಿಯ ಸುಳಿವು ಮನೆಯವರಿಗೆ ಲಭ್ಯವಾಗಿರಲಿಲ್ಲ. ಆದರೆ ಶುಕ್ರವಾರ ಆ ಬಾಲಕಿ ಮತ್ತೆ ತನ್ನ ಮನೆ ಸೇರಿಕೊಂಡಿರುವ ಮಾಹಿತಿಯನ್ನು ಆಕೆಯ ತಂದೆ ಪಿಟಿಐ ಸುದ್ದಿ ಮಾಧ್ಯಮಕ್ಕೆ ನೀಡಿದ್ದಾರೆ. ಆದರೆ ಈ ನಾಲ್ಕು ದಿನ ಆಕೆ ಎಲ್ಲಿದ್ದಳು ಮತ್ತು ಇಂದು ಮರಳಿ ಹೇಗೆ ತನ್ನ ಹೆತ್ತವರ ಬಳಿಗೆ ಬಂದಳು ಎಂಬ ಮಾಹಿತಿ ಮಾತ್ರ ಲಭ್ಯವಾಗಿಲ್ಲ.
‘ಹುಡುಗಿ ಇವತ್ತು ಪತ್ತೆಯಾಗಿದ್ದಾಳೆ ಮತ್ತು ಆಕೆ ಸುರಕ್ಷಿತವಾಗಿದ್ದಾಳೆ ಮತ್ತು ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಳ್ಳುವುದಕ್ಕಾಗಿ ಆಕೆಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ