ಧಾರಾಕಾರ ಮಳೆಯೆಲ್ಲ ಮುಂಗಾರು ಅಲ್ಲ! ಕೇಂದ್ರ ಹವಾಮಾನ ಇಲಾಖೆ ಮಹಾ ನಿರ್ದೇಶಕರ ಅಭಿಪ್ರಾಯ
ಜಾಗತಿಕ ತಾಪಮಾನ ಏರಿಕೆಯಿಂದ ಧಾರಾಕಾರ ಮಳೆಯಾಗುತ್ತಿವೆ;ತಾಪಮಾನ ಏರಿಕೆಯಿಂದ ಹವಾಮಾನ ಬದಲಾವಣೆ ಗುರುತು ಕಷ್ಟ
Team Udayavani, Aug 8, 2022, 6:55 AM IST
ನವದೆಹಲಿ: ದೇಶದ ಅಲ್ಲಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ, ಜಾಗತಿಕ ತಾಪಮಾನ ಏರಿಕೆಯ ಫಲಶ್ರುತಿಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಪ್ರಧಾನ ನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.
“ಪಿಟಿಐ’ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಅವರು, “ಸದ್ಯಕ್ಕೆ ದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗಳೆಲ್ಲವೂ ಮುಂಗಾರು ಮಾರುತಗಳ ಮಳೆಗಳಲ್ಲ. ಜಾಗತಿಕ ತಾಪಮಾನ ಬದಲಾವಣೆಯಿಂದ ಆಗುತ್ತಿರುವ ಮಳೆಗಳೂ ಸೇರಿವೆ. ಇವುಗಳ ಆರ್ಭಟದಿಂದಾಗಿ, ಸಣ್ಣ ಪ್ರಮಾಣದ, ಮುಂಗಾರು ಆಧಾರಿತ ಮಳೆಗಳು ಕ್ರಮೇಣ ನಾಪತ್ತೆಯಾಗುತ್ತಿವೆ” ಎಂದು ಹೇಳಿದ್ದಾರೆ.
ಇದಲ್ಲದೆ, “ಜಾಗತಿಕ ತಾಪಮಾನ ಏರಿಕೆಯಿಂದಾಗಿ ಹವಾಮಾನ ಇಲಾಖೆಗಳ ಸಾಮರ್ಥ್ಯವನ್ನು ಕಂದುವಂತೆ ಮಾಡಿವೆ ಎಂದು ಹೇಳಿದ ಅವರು, ಈ ಸಮಸ್ಯೆಯಿಂದ ಹೊರಬರಲು ಐಎಂಡಿ ವತಿಯಿಂದ ಹವಾಮಾನ ಬದಲಾವಣೆಗಳನ್ನು ಮುಂಚಿತವಾಗಿಯೇ ನಿಖರವಾಗಿ ಅಳೆಯುವಂಥ ರೇಡಾರ್ಗಳನ್ನು ಹಾಗೂ ಕಂಪ್ಯೂಟಿಂಗ್ ಸಿಸ್ಟಂಗಳನ್ನು ತನ್ನಲ್ಲಿ ಅಳವಡಿಸಿಕೊಳ್ಳುತ್ತಿದೆ” ಎಂದು ಹೇಳಿದ್ದಾರೆ.
“ರೇಡಾರ್, ಕಂಪ್ಯೂಟರ್ ಸಿಸ್ಟಂಗಳ ಜೊತೆಗೆ, ಆಟೋಮ್ಯಾಟಿಕ್ ವೆದರ್ ಸ್ಟೇಷನ್ಗಳು, ರೈನ್ ಗೇಜ್ಗಳನ್ನು ಅಳವಡಿಸಲು ಸಿದ್ಧತೆ ನಡೆಸಲಾಗಿದೆ. ಹವಾಮಾನ ಬದಲಾವಣೆಯನ್ನು ಮುಂಚಿತವಾಗಿಯೇ ಗ್ರಹಿಸಿ ಭೂಮಿಗೆ ಮಾಹಿತಿ ರವಾನಿಸಬಲ್ಲ ಅತ್ಯಾಧುನಿಕ ಉಪಗ್ರಹಗಳನ್ನು ಹಾರಿಬಿಡಲು ನಿರ್ಧರಿಸಲಾಗಿದೆ.
ಹಿಮಾಲಯ ಹಾಗೂ ಇನ್ನುಳಿತ ನಾಲ್ಕು ಕಡೆಗಳಲ್ಲೆ ಆರು ರೇಡಾರ್ಗಳನ್ನು ಅಳವಡಿಸಲು ತೀರ್ಮಾನಿಸಲಾಗಿದ್ದು, ಈ ಹೊಸ ರೇಡಾರ್ಗಳ ಖರೀದಿಗೆ ಚಿಂತನೆ ನಡೆಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್