ದೆಹಲಿಯಲ್ಲಿ 15ಲಕ್ಷ ಆಮ್ ಆದ್ಮಿಗಳಿಗೆ ಬಂತು ಶೂನ್ಯ ವಿದ್ಯುತ್ ಶುಲ್ಕ: ಇದಕ್ಕೆ ಕಾರಣ ಇಲ್ಲಿದೆ
Team Udayavani, Oct 14, 2019, 3:58 PM IST
ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಹು ನಿರೀಕ್ಷಿತ ಯೋಜನೆ ‘ಮುಖ್ಯಮಂತ್ರಿ ಕಿರಯೇದಾರ್ ಬಿಜಲಿ ಮೀಟರ್ ಯೋಜನಾ’ ಅಡಿಯಲ್ಲಿ ರಾಷ್ಟ್ರ ರಾಜಧಾನಿಯ ಸುಮಾರು 14.64 ಲಕ್ಷ ಕುಟುಂಬಗಳಿಗೆ ಸೆಪ್ಟಂಬರ್ ತಿಂಗಳಲ್ಲಿ ಶೂನ್ಯ ವಿದ್ಯುತ್ ಶುಲ್ಕ ಬಂದಿದೆ.
ಈ ಯೋಜನೆ ಅಡಿಯಲ್ಲಿ 201 ಯುನಿಟ್ ಗಳಿಂದ 400 ಯುನಿಟ್ ಗಳವರೆಗಿನ ವಿದ್ಯುತ್ ಬಳಕೆಯ ಶುಲ್ಕದ ಮೇಲೆ ಸರಕಾರವು 50 ಪ್ರತಿಶತ ಸಬ್ಸಿಡಿಯನ್ನು ಒದಗಿಸುತ್ತದೆ. ಮತ್ತು 200 ಯುನಿಟ್ ಗಳವರೆಗಿನ ವಿದ್ಯುತ್ ಬಳಕೆ ಉಚಿತವಾಗಿರುತ್ತದೆ. ಪ್ರಾರಂಭದಲ್ಲಿ ಈ ಯೋಜನೆಯ ಪ್ರಯೋಜನವನ್ನು ಸ್ವಂತ ಮನೆ ಹೊಂದಿರುವವರಿಗೆ ಮಾತ್ರವೇ ನೀಡಲಾಗಿತ್ತು ಆದರೆ ಆ ಬಳಿಕ ಇದನ್ನು ಬಾಡಿಗೆದಾರ ಕುಟುಂಬಗಳಿಗೂ ವಿಸ್ತರಿಸಲಾಗಿತ್ತು.
ನಗರದಲ್ಲಿರುವ ಒಟ್ಟು 52.27 ಲಕ್ಷ ಗೃಹೋಪಯೋಗಿ ವಿದ್ಯುತ್ ಗ್ರಾಹಕರಲ್ಲಿ ಸುಮಾರು 28 ಪ್ರತಿಶತ ಅಂದರೆ ಸುಮಾರು 14.64 ಲಕ್ಷ ಕುಟುಂಬಗಳಿಗೆ ಸೆಪ್ಟಂಬರ್ ತಿಂಗಳಲ್ಲಿ ಶೂನ್ಯ ವಿದ್ಯುತ್ ಶುಲ್ಕ ಬಂದಿದೆ ಎಂದು ಇಂಧನ ಇಲಾಖೆ ಬಿಡುಗಡೆಗೊಳಿಸಿರುವ ಮಾಹಿತಿ ತಿಳಿಸಿದೆ.
ದೆಹಲಿಗೆ ಮೂರು ಪ್ರಮುಖ ವಿದ್ಯುತ್ ಪೂರೈಕೆ ಕಂಪೆನಿಗಳು ವಿದ್ಯುತ್ ಸೌಲಭ್ಯವನ್ನು ಒದಗಿಸುತ್ತಿವೆ ಮತ್ತು ದಕ್ಷಿಣ ಮತ್ತು ಪಶ್ಚಿಮ ದೆಹಲಿಯ ನಿವಾಸಿಗಳು ಈ ಯೋಜನೆಯ ಗರಿಷ್ಠ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ.
ಈ ಯೋಜನೆಯ ಕುರಿತಾಗಿ ಟ್ವೀಟ್ ಮೂಲಕ ಸಂತಸವನ್ನು ಹಂಚಿಕೊಂಡಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ‘ಈ ಯೋಜನೆಯಿಂದ ಗ್ರಾಹಕರಿಗೆ ವಿದ್ಯುತ್ ಶುಲ್ಕದಲ್ಲಿ ಉಳಿಕೆಯಾಗುವುದು ಮಾತ್ರವಲ್ಲದೇ ಮಿತ ವಿದ್ಯುತ್ ಬಳಕೆಯನ್ನು ಪ್ರೋತ್ಸಾಹಿಸುವಲ್ಲಿಯೂ ಈ ಯೋಜನೆ ಯಶಸ್ಸನ್ನು ಕಂಡಿದೆ. ಇದೀಗ ಪ್ರತೀ ಕುಟುಂಬಗಳು 200 ಯುನಿಟ್ ಗಳಿಗಿಂತ ಕಡಿಮೆ ವಿದ್ಯುತ್ ಅನ್ನು ಬಳಸಲು ಪ್ರಯತ್ನಿಸುತ್ತವೆ, ಹಾಗೆ ಮಾಡಿದ ಸಂದರ್ಭದಲ್ಲಿ ಕುಟುಂಬಗಳಿಗೆ ವಿದ್ಯುತ್ ಶುಲ್ಕದಲ್ಲಿ ಉಳಿತಾಯವಾಗುತ್ತದೆ ಮತ್ತು ಇನ್ನೊಂದು ಕಡೆಯಲ್ಲಿ ವಿದ್ಯುತ್ ಬಳಕೆಯಲ್ಲೂ ಮಿತವ್ಯಯ ಸಾಧಿಸಲು ಅನುಕೂಲವಾಗುತ್ತದೆ’ ಎಂದು ಕೇಜ್ರಿವಾಲ್ ಅವರು ತಮ್ಮ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
MUST WATCH
ಹೊಸ ಸೇರ್ಪಡೆ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ