ಡೆಹ್ರಾಡೂನ್ ನಲ್ಲಿ ಮೇಘಸ್ಪೋಟ : ಜನಜೀವನ ಅಸ್ತವ್ಯಸ್ಥ, ರಕ್ಷಣಾ ಕಾರ್ಯ ಚುರುಕು
Team Udayavani, Aug 20, 2022, 11:08 AM IST
ಉತ್ತರಾಖಂಡ : ಉತ್ತರಾಖಂಡದ ಡೆಹ್ರಾಡೂನ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸುರಿದ ಧಾರಾಕಾರ ಮಳೆಯ ನಡುವೆ ಮೇಘಸ್ಫೋಟ ಸಂಭವಿಸಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ.
ಶನಿವಾರ ಮುಂಜಾನೆ ಸುಮಾರು 2:45 ರ ಸಮಯದಲ್ಲಿ ಡೆಹ್ರಾಡೂನ್ ಜಿಲ್ಲೆಯ ಸರ್ಖೆತ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ್ದು ಸುದ್ದಿ ತಿಳಿಯುತ್ತಲೇ ರಾಜ್ಯ ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ.
ವಿಪತ್ತು ತಂಡದಿಂದ ಗ್ರಾಮದಲ್ಲಿ ಸಿಲುಕಿದ ಜನರ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಗ್ರಾಮಸ್ಥರನ್ನು ಸಮೀಪದ ಆಶ್ರಯ ಶಿಬಿರಕ್ಕೆ ಸ್ಥಳಾಂತರ ಮಾಡುವ ಕೆಲಸ ನಡೆಯುತ್ತಿದೆ ಎಂದು ರಕ್ಷಣಾ ತಂಡದ ಅಧಿಕಾರಿಗಳು ತಿಳಿಸಿದ್ದಾರೆ.
ಅಲ್ಲದೆ ಆಗಸ್ಟ್ 19 ಮತ್ತು 20ರಂದು ಉತ್ತರಾಖಂಡ ಮತ್ತು ಪೂರ್ವ ಉತ್ತರ ಪ್ರದೇಶದ ಮೇಲೆ ಮತ್ತು ವಾರಾಂತ್ಯದಲ್ಲಿ ಹಿಮಾಚಲ ಪ್ರದೇಶ ಮತ್ತು ಪಶ್ಚಿಮ ಉತ್ತರ ಪ್ರದೇಶದ ಮೇಲೆ ಗುಡುಗು ಸಹಿತ ವ್ಯಾಪಕವಾದ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತು..
ಭಾರೀ ಮಳೆಯಿಂದಾಗಿ ಡೆಹ್ರಾಡೂನ್ನ ತಪಕೇಶ್ವರ ಮಹಾದೇವ ದೇವಸ್ಥಾನದ ಬಳಿ ಹರಿಯುವ ತಮ್ಸಾ ನದಿಯು ಉಕ್ಕಿ ಹರಿಯುತ್ತಿದ್ದು. ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿರುವ ಪರಿಣಾಮ ಮಾತಾ ವೈಷ್ಣೋ ದೇವಿ ದೇವಸ್ಥಾನ ಮತ್ತು ತಪಕೇಶ್ವರ್ ಮಹಾದೇವ ದೇವಸ್ಥಾನ ನಡುವಿನ ಸಂಪರ್ಕ ಕಡಿತಗೊಂಡಿದೆ.
Uttarakhand | SDRF teams engage in rescue operation in Sarkhet village, Raipur block in Dehradun where an incident of cloudburst was reported at 2:45am today pic.twitter.com/uH7etNKmSw
— ANI UP/Uttarakhand (@ANINewsUP) August 20, 2022
#WATCH | River Tamasa in spate near Tapkeshwar Mahadev temple in Dehradun following continuous rains in the area#Uttarakhand pic.twitter.com/Okxa0otY7N
— ANI UP/Uttarakhand (@ANINewsUP) August 20, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ