ರಾಜಸ್ಥಾನ ಬಿಕ್ಕಟ್ಟಿಗೆ ಅಶೋಕ್ ಗೆಹ್ಲೋಟ್ ಕಾರಣ ಅಲ್ಲ
ಸೋನಿಯಾ ಗಾಂಧಿಗೆ ವೀಕ್ಷಕರ ವರದಿ ಸಲ್ಲಿಕೆ; ಬಂಡಾಯಕ್ಕೆ ಮಣಿಯಿತೇ ಕಾಂಗ್ರೆಸ್ ಹೈಕಮಾಂಡ್?
Team Udayavani, Sep 27, 2022, 10:02 PM IST
ನವದೆಹಲಿ/ಜೈಪುರ:“ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯದೇ ಇರುವ ವಿಚಾರದಲ್ಲಿ ಮತ್ತು ಸದ್ಯ ಉಂಟಾಗಿರುವ ಬಿಕ್ಕಟ್ಟಿನಲ್ಲಿ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಪಾತ್ರ ಇಲ್ಲ. ಆದರೆ, ಅವರ ಗುಂಪಿನ ಮೂವರು ಶಾಸಕರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕು’
– ಹೀಗೆಂದು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಮುಖಂಡ ಅಜಯ್ ಮಕೇನ್ ಲಿಖಿತ ವರದಿ ಕೊಟ್ಟಿದ್ದಾರೆ.
ಜತೆಗೆ ಕಾಂಗ್ರೆಸ್ನ ಇತರ ಮುಖಂಡರು ಬಿಕ್ಕಟ್ಟು ಶಮನಕ್ಕೆ ಅವರ ಜತೆಗೆ ಮಾತುಕತೆಗೂ ಮುಂದಾಗಿದ್ದಾರೆ.
ಹೀಗಾಗಿ, ಕಾಂಗ್ರೆಸ್ ವರಿಷ್ಠರು ರಾಜಸ್ಥಾನ ಸಿಎಂ ಗೆಹ್ಲೋಟ್ ಒತ್ತಡಕ್ಕೆ ಮಣಿದಿದ್ದಾರೆ ಎಂಬ ವಿಶ್ಲೇಷಣೆ ಕೇಳಿಬಂದಿದೆ.
ರಾಜಸ್ಥಾನ ಸರ್ಕಾರದಲ್ಲಿ ಸಚಿವರಾಗಿರುವ ಶಾಂತಿ ಧರಿವಾಲ್, ಮಹೇಶ್ ಜೋಶಿ, ಶಾಸಕ ಧರ್ಮೇಂದ್ರ ರಾಥೋಡ್ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕು. ಕೆಲವು ನಾಯಕರು ಅಂಕೆ ಮೀರಿ ವರ್ತಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಶಾಸಕಾಂಗ ಸಭೆಗೆ ಪರ್ಯಾಯವಾಗಿ ಕೆಲವು ನಾಯಕರು ಸಭೆ ನಡೆಸಿರುವುದು ಆಕ್ಷೇಪಾರ್ಹ ಎಂದು ಅಭಿಪ್ರಾಯಪಡಲಾಗಿದೆ. ಅಚ್ಚರಿಯ ವಿಚಾರವೆಂದರೆ, ವರದಿಯಲ್ಲಿ ಸಿಎಂ ಅಶೋಕ್ ಗೆಹ್ಲೋಟ್ ಅವರ ಪಾತ್ರದ ಬಗ್ಗೆ ಉಲ್ಲೇಖವೇ ಮಾಡದೆ ಮೌನ ವಹಿಸಲಾಗಿದೆ.
ಗೆಹ್ಲೋಟ್ ಜತೆ ಚರ್ಚೆ:
ಶಾಸಕ ಸಚಿನ್ ಪೈಲಟ್ಗೆ ಸಿಎಂ ಹುದ್ದೆ ನೀಡಲೇಬಾರದು ಎಂದು ಪಟ್ಟುಹಿಡಿದಿರುವ ಅಶೋಕ್ ಗೆಹ್ಲೋಟ್ ಜತೆಗೆ ಮಾಜಿ ಸಚಿವರಾದ ಅಂಬಿಕಾ ಸೋನಿ, ಆನಂದ ಶರ್ಮಾ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ, ಈ ಎಲ್ಲಾ ಬೆಳವಣಿಗೆಗಳ ಹೊರತಾಗಿಯೂ ಅ.17ರ ಅಧ್ಯಕ್ಷ ಸ್ಥಾನದ ಚುನಾವಣೆಗೆ ಗೆಹ್ಲೋಟ್ ಸ್ಪರ್ಧಿಸುವ ಸಾಧ್ಯತೆಯೇ ಅಧಿಕವಾಗಿದೆ.
ಕಣಕ್ಕೆ ಬನ್ಸಲ್?:
ಮತ್ತೊಂದು ಬೆಳವಣಿಗೆಯಲ್ಲಿ ಕೇಂದ್ರದ ಮಾಜಿ ಸಚಿವ ಪವನ್ ಕುಮಾರ್ ಬನ್ಸಲ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಗಳು ಇವೆ. ಬಿಕ್ಕಟ್ಟಿನ ನಡುವೆಯೂ ಸಿಎಂ ಅಶೋಕ್ ಗೆಹ್ಲೋಟ್ ಅವರು ಜೈಪುರದಲ್ಲಿ ತಮಗೆ ನಿಷ್ಠರಾಗಿರುವ ಶಾಸಕರು ಮತ್ತು ಸಚಿವರ ಜತೆಗೆ ಸಭೆ ನಡೆಸಿದ್ದಾರೆ.
ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವುದು ಬೇಡ ಎಂದು ನಾನು ವರಿಷ್ಠರಿಗೆ ಹೇಳಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಬಂದಿರುವ ವರದಿಗಳು ಸುಳ್ಳು.
-ಸಚಿನ್ ಪೈಲಟ್, ಕಾಂಗ್ರೆಸ್ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್ಗೆ ಜೈಶಂಕರ್ ಚಾಟಿ
MUST WATCH
ಹೊಸ ಸೇರ್ಪಡೆ
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್