ಹೊರ ರಾಜ್ಯಗಳಿಂದ ಬರುವವರಿಗೆ ನೆಗೆಟಿವ್ ವರದಿ ಕಡ್ಡಾಯ : ಛತ್ತೀಸ್ ಗಡ ಸಿಎಂ ಭೂಪೇಶ್ ಬಾಗೇಲ್
Team Udayavani, Apr 12, 2021, 11:28 AM IST
ಛತ್ತೀಸ್ ಗಡ : ಕೋವಿಡ್ ಸೋಂಕಿನ ಹೊಸ ಅಲೆ ಸೃಷ್ಟಿಸುತ್ತಿರುವ ಆತಂಕದ ಹಿನ್ನೆಲೆಯಲ್ಲಿ ಛತ್ತೀಸ್ ಗಡ ಸರ್ಕಾರ ಕೋವಿಡ್ ಸೋಂಕನ್ನು ಹರಡದಂತೆ ನಿರ್ವಹಿಸಲು ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ.
ರೈಲು ಅಥವಾ ವಾಯು ಮಾರ್ಗದಲ್ಲಿ ಇತರ ರಾಜ್ಯಗಳಿಂದ ಛತ್ತೀಸ್ ಗಡಕ್ಕೆ ಬರುವ ಪ್ರಯಾಣಿಕರಿಂದ 72 ಗಂಟೆಗಳೊಳಗಿನ ಕೋವಿಡ್-19 ಆರ್ ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವೀಡಿಯೊ ಕಾನ್ಫರೆನ್ಸ್ ನಲ್ಲಿ ವೈದ್ಯಾಧಿಕಾರಿಗಳು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಭೂಪೇಶ್, ನೆಗೆಟಿವ್ ವರದಿಗಳನ್ನು ಹೊಂದದೆ ಪರ ರಾಜ್ಯಗಳಿಂದ ರೈಲು ಹಾಗೂ ವಾಯು ಮಾರ್ಗಗಳ ಮೂಲಕ ಬರುವ ಪ್ರಯಾಣಿಕರನ್ನು ಕ್ವಾರಂಟೈನ್ ನಲ್ಲಿ ಇರಿಸಲು ವ್ಯವಸ್ಥೆ ಮಾಡಿ ಎಂದು ಸೂಚಿಸಿದ್ದಾರೆ.
ಓದಿ : ಮುಂಬಯಿ : ಆಸ್ಪತ್ರೆಗಳಲ್ಲಿ ಕೋವಿಡ್ ಪೀಡಿತರು: ಆಮ್ಲಜನಕ ಸಿಲಿಂಡರ್ಗಳ ಕೊರತೆ
ಹೆಚ್ಚಳವಾಗುತ್ತಿರುವ ಕೋವಿಡ್ ಸೋಂಕಿನ ಕಾರಣದಿಂದಾಗಿ ರಾಜ್ಯ ಆತಂಕದ ಸ್ಥಿತಿಯಲ್ಲಿದೆ. ಕೋವಿಡ್ ನನ್ನು ನಾವು ಯೋಜಿತ ಮಾರ್ಗದಲ್ಲಿ ಎದುರಿಸಿದಾಗ ಮಾತ್ರ ರಾಜ್ಯ ಕೋವಿಡ್ ಮುಕ್ತವಾಗುವುದಕ್ಕೆ ಸಾಧ್ಯವಿದೆ. ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರವನ್ನು ವಹಿಸುವುದು ಅಗತ್ಯ. ಹೊರ ರಾಜ್ಯಗಳಿಂದ ಬರುವವರನ್ನು ಕೋವಿಡ್ ಪರೀಕ್ಷೆ ಮಾಡಬೇಕು. ಸೋಂಕು ಕಾಣಿಸಿಕೊಂಡವರನ್ನು ಕೋವಿಡ್ ಸೆಂಟರ್ ನಲ್ಲಿ ಪ್ರತ್ಯೇಕವಾಗಿ ಕ್ವಾರಂಟೈನ್ ನಲ್ಲಿ ಇರಿಸಬೇಕು ಎಂದು ಅವರು ಅಧಿಕಾರಿಗಳಿಗೆ ಹೇಳಿದ್ದಾರೆ.
➡️ मुख्यमंत्री ने रेमडेसीवीर की सुचारू आपूर्ति सुनिश्चित करने वरिष्ठ अधिकारियों को हैदराबाद और महाराष्ट्र भेजने के दिए निर्देश
➡️ हवाई मार्ग के साथ रेल से छत्तीसगढ़ आने वालों के लिए 72 घंटे के भीतर की आरटीपीसीआर निगेटिव रिपोर्ट होगी जरूरी pic.twitter.com/24HsMUsh4X
— CMO Chhattisgarh (@ChhattisgarhCMO) April 11, 2021
ಇನ್ನು ಈ ಬಾರಿ ಗ್ರಾಮೀಣ ಪ್ರದೇಶಗಳಲ್ಲೂ ಕೂಡ ಸೋಂಕು ಹರಡುತ್ತಿದೆ. ಇದನ್ನು ತಡೆಗಟ್ಟಲು, ರಾಜ್ಯದ ಹೊರಗಿನಿಂದ ಬರುವವರನ್ನು ಪರೀಕ್ಷಿಗೆ ಒಳಪಡಿಸುವುದು ಅವಶ್ಯಕ. ಹಳ್ಳಿಗಳಲ್ಲಿ ಕೋವಿಡ್ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರವು ಸೂಚನೆ ನೀಡಿದೆ “ಎಂದು ಅವರು ಹೇಳಿದ್ದಾರೆ.
ಓದಿ : ಪರಲೋಕದ ಮುಕ್ತಿದಾತರ ಇಹಲೋಕದ ಬವಣೆ : ರುದ್ರಭೂಮಿ ನೌಕರರಿಗೆ 10 ತಿಂಗಳಿಂದ ವೇತನವಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ