‘ಮನೆ ಬಾಗಿಲಿಗೆ ಪಡಿತರ’ ಯೋಜನೆಗೆ ಕೇಂದ್ರ ಸರ್ಕಾರ ತಡೆ : ಸಿಎಂ ಕೇಜ್ರಿವಾಲ್ ಆಕ್ರೋಶ
Team Udayavani, Jun 6, 2021, 3:09 PM IST
ನವದೆಹಲಿ : ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆಗೆ ಅನುಮತಿ ನೀಡದ ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹರಿಹಾಯ್ದಿದ್ದಾರೆ.
ಇಂದು ಮಾಧ್ಯಮಗೋಷ್ಠಿ ನಡೆಸಿದ ಮುಖ್ಯಮಂತ್ರಿಗಳು, ನಮ್ಮ ಸರ್ಕಾರವು ಕೇಂದ್ರ ಸರ್ಕಾರದ ಷರತ್ತುಗಳಿಗೆ ಬದ್ಧವಾಗಿ ಫಲಾನುಭವಿಗಳ ಮನೆ ಬಾಗಿಲಿಗೆ ಉಚಿತವಾಗಿ ಪಡಿತರ ವಿತರಿಸುವ ಯೋಜನೆ ರೂಪಿಸಿದೆ. ಆದರೆ, ಈ ಯೋಜನೆ ಜಾರಿಯಾಗುವ ಎರಡು ದಿನಗಳ ಮುಂಚೆ ಅವರು ಅನುಮತಿ ನೀಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಡಿತರ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಅವ್ಯವಸ್ಥೆಯನ್ನು ತೊಡೆದು ಹಾಕುವಲ್ಲಿ ನಮ್ಮ ಹೊಸ ಯೋಜನೆ ಉಪಯುಕ್ತವಾಗಲಿದೆ. ಇದೊಂದು ಕ್ರಾಂತಿಯನ್ನು ಸೃಷ್ಠಿಸುವ ಯೋಜನೆಯಾಗಿತ್ತು. ಇದರ ಜಾರಿಗೆ ಎಲ್ಲ ಸಿದ್ಧತೆಗಳು ನಡೆದಿದ್ದವು. ಆದರೆ, ಕೇಂದ್ರ ಸರ್ಕಾರ ಮಾತ್ರ ಇದಕ್ಕೆ ತಡೆಯೊಡ್ಡಿತು ಎಂದಿರುವ ಕೇಜ್ರಿವಾಲ್, ನಮ್ಮನ್ನು ಯಾಕೆ ತಡೆಯುತ್ತಿದ್ದಿರಾ ಎಂದು ಪ್ರಶ್ನೆ ಮಾಡಿದ್ದಾರೆ.
ನಮ್ಮ ದೇಶವು ಕಳೆದ 75 ವರ್ಷಗಳಿಂದ ಪಡಿತರ ಮಾಫಿಯಾದಿಂದ ನಲಗುತ್ತಿದೆ. ಅದನ್ನು ಸುಧಾರಿಸಲು ಇದು ಸಕಾಲವಾಗಿದೆ ಎಂದು ಹೇಳಿರವ ಅರವಿಂದ್ ಕೇಜ್ರಿವಾಲ್, ಬಡವರಿಗೆ ಹಾಗೂ ಅಗತ್ಯವಿರುವರಿಗೆ ಪಡಿತರ ನೀಡುವುದಕ್ಕಾಗಿ ನಾನೂ ಕಳೆದ 17 ವರ್ಷಗಳಿಂದ ಹೋರಾಟ ನಡೆಸುತ್ತಿದ್ದೆನೆ ಎಂದಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿದ ಕೇಜ್ರಿವಾಲ್, ಅವರು (ಕೇಂದ್ರ ಸರ್ಕಾರ) ನಾವು ಅನುಮತಿ ಪಡೆಯಲಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ನಾನು ಕೇವಲ ಒಂದು ಸಾರಿ ಮಾತ್ರವಲ್ಲ, 5 ಬಾರಿ ಪಡೆದಿದ್ದೇವೆ. ಕಾನೂನು ದೃಷ್ಟಿಯಿಂದ ನೋಡುವುದಾದರೆ ನಮಗೆ ಕೇಂದ್ರ ಸರ್ಕಾರದ ಅನುಮತಿ ಬೇಕಾಗಿಲ್ಲ. ಆದರೆ, ಸೌಜನ್ಯಕ್ಕಾಗಿ ಅವರ ಅನುಮತಿ ಕೇಳುತ್ತಿದ್ದೇವೆ. ಬೇಕಾದರೆ ಈ ಯೋಜನೆಯ ಸಂಪೂರ್ಣ ಶ್ರೇಯಸ್ಸು ಅವರೇ ತೆಗೆದುಕೊಳ್ಳಲಿ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್