ರೈತರ ಸಾಲ ಮನ್ನಾ ಪ್ರಶ್ನಿಸಿದ CM ಮಮತಾ , ಕಾಂಗ್ರೆಸ್ ಜತೆ ಒಡಕು ?
Team Udayavani, Dec 26, 2018, 7:09 PM IST
ಹೊಸದಿಲ್ಲಿ : ಈಚಿನ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯಗಳಿಸಿರುವ ರಾಜಸ್ಥಾನ, ಮಧ್ಯ ಪ್ರದೇಶ ಮತ್ತು ಛತ್ತೀಸ್ಗಢ ರಾಜ್ಯ ಸರಕಾರಗಳು ಅಧಿಕಾರಕ್ಕೆ ಬಂದ ತತ್ಕ್ಷಣವೇ ರೈತರ ಸಾಲ ಮನ್ನಾ ಪ್ರಕಟಿಸಿರುವುದನ್ನು ಪರೋಕ್ಷವಾಗಿ ಟೀಕಿಸಿರುವ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ “ಈ ರೀತಿಯ ಸಾಲ ಮನ್ನಾ ಕ್ರಮಗಳು ವಿವೇಚನಾಯುಕ್ತವಾಗಿವೆಯೇ; ಅವು ಆರ್ಥಿಕವಾಗಿ ಸಾಧುವೇ?’ ಎಂದು ಪ್ರಶ್ನಿಸುವ ಮೂಲಕ ಕಾಂಗ್ರೆಸ್ ಪಕ್ಷದಿಂದ ಅಂತರ ಕಾಯ್ದುಕೊಳ್ಳುವ ಸುಳಿವು ನೀಡಿದ್ದಾರೆ.
‘ಹಲವಾರು ರಾಜ್ಯಗಳು ರೈತರ ಸಾಲ ಮನ್ನಾ ಮಾಡುತ್ತಿವೆ. ಇವು ನಿಜಕ್ಕೂ ಎಷ್ಟು ಸರಿ ? ಇದರಿಂದ ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಧಕ್ಕೆ ಉಂಟಾಗುವುದಿಲ್ಲವೇ ? ಎಂದು ಪ್ರಶ್ನಿಸಿರುವ ಮಮತಾ, ಬಿಜೆಪಿ ಸರಕಾರದ ಕೃಷಿ ವಿಮಾ ಯೋಜನೆಯನ್ನು ಕೂಡ ಟೀಕಿಸಿದ್ದಾರೆ. ಈ ರೀತಿಯ ಯೋಜನೆಗಳು ಕಾರ್ಯಸಾಧುವಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
‘ನಾನೀಗ ರೈತರ ಸಾಲ ಮನ್ನಾ ಕುರಿತ ಅಂಕಿ ಅಂಶ, ದಾಖಲೆ ಪತ್ರಗಳನ್ನು ತರಿಸಿಕೊಂಡು ಅವಲೋಕಿಸುತ್ತಿದ್ದೇನೆ; ಕೃಷಿ ಸಾಲ ಮನ್ನಾ ಅನ್ನೋದು ಎಷ್ಟು ಸರಿ ಎಂಬ ಬಗ್ಗೆ ವಿಶ್ಲೇಷಣೆ ನಡೆಸುತ್ತಿದ್ದೇನೆ’ ಎಂದು ಮಮತಾ ಹೇಳಿದ್ದಾರೆ.
ಪಂಚ ರಾಜ್ಯಗಳ ಚುನಾವಣೆಯಲ್ಲಿ ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ವಿಜಯ ಸಾಧಿಸಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ನೇರವಾಗಿ ಅಭಿನಂದಿಸದಿದ್ದ ಮಮತಾ, ಆ ರಾಜ್ಯಗಳ ಜನತೆಯನ್ನು ಅಭಿನಂದಿಸಿದ್ದರು ಎನ್ನುವುದು ಗಮನಾರ್ಹವಾಗಿದೆ. ಆದರೆ ಆಕೆ ತೆಲಂಗಾಣದಲ್ಲಿ ಪ್ರಚಂದ ವಿಜಯ ಸಾಧಿಸಿದ್ದ ಕೆಸಿಆರ್ ಅವರನ್ನು ಮತ್ತು ಅವರ ಪಕ್ಷವನ್ನು ಅಭಿನಂದಿಸಿದ್ದರು.
ಈ ನಡುವೆ ಕೆಸಿಆರ್ ಅವರ ವಿಪಕ್ಷ ರಂಗ ರಚನೆಯ ಯತ್ನವನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖೀಲೇಶ್ ಯಾದವ್ ಸ್ವಾಗತಿಸಿದ್ದು ತಾನು ಅವರನ್ನು ಸದ್ಯದಲ್ಲೇ ಭೇಟಿಯಾಗಿ ಮಾತುಕತೆ ನಡೆಸಲಿದ್ದೇನೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ