ಸಿಎಂ ಶಿಂಧೆಗೆ ರಾಜೀನಾಮೆ ನೀಡುವಂತೆ ಹೇಳಲಾಗಿದೆ…: ಆದಿತ್ಯ ಠಾಕ್ರೆ
Team Udayavani, Jul 8, 2023, 6:51 PM IST
ಮುಂಬೈ: ಮಹಾರಾಷ್ಟ್ರ ರಾಜಕೀಯ ಪ್ರಹಸನ ಮುಂದುವರಿದಿದ್ದು, ಎನ್ ಸಿಪಿ ನಾಯಕ ಅಜಿತ್ ಪವಾರ್ ಸೇರ್ಪಡೆಯಿಂದ ಮಹಾ ಸರ್ಕಾರದಲ್ಲಿ ಬದಲಾವಣೆಗಳು ಸಂಭವಿಸಲಿದೆ ಎಂದು ಮಾಜಿ ಸಚಿವ ಉದ್ಧವ್ ಬಣದ ನಾಯಕ ಆದಿತ್ಯ ಠಾಕ್ರೆ ಹೇಳಿದ್ದಾರೆ. ಅಲ್ಲದೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ರಾಜೀನಾಮೆ ನೀಡುವಂತೆ ಸೂಚನೆ ಹೋಗಿದೆ ಎಂದು ಆದಿತ್ಯ ಹೇಳಿದ್ದಾರೆ.
“ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ರಾಜೀನಾಮೆ ನೀಡುವಂತೆ ಕೇಳಲಾಗಿದೆ ಮತ್ತು ಸರ್ಕಾರದಲ್ಲಿ ಕೆಲವು ಬದಲಾವಣೆಗಳಾಗಬಹುದು ಎಂದು ನಾನು ಕೇಳಿಲ್ಪಟ್ಟಿದ್ದೇನೆ” ಎಂದು ಆದಿತ್ಯ ಠಾಕ್ರೆ ಹೇಳಿದರು.
“ಮಹಾರಾಷ್ಟ್ರದಲ್ಲಿ ಕೀಳುಮಟ್ಟದ ರಾಜಕಾರಣ ನಡೆಯುತ್ತಿದೆ. ದುರಾಸೆಯಿಂದ ಒಂದು ವರ್ಷದ ಹಿಂದೆ ಮಂತ್ರಿ ಸ್ಥಾನ ಬಿಟ್ಟು ಹೋದ ಆ ದೇಶದ್ರೋಹಿಗಳ ಗತಿಯೇನು? ಮುಖ್ಯಮಂತ್ರಿ ಕುರ್ಚಿ ಅಪಾಯದಲ್ಲಿದೆ. ಸತತ ನಾಲ್ಕು ದಿನಗಳಿಂದ ಇಲಾಖೆಗಳ ಹಂಚಿಕೆ ವಿಳಂಬವಾಗುತ್ತಿದೆ. ಮುಖ್ಯಮಂತ್ರಿಯನ್ನು ಪದಚ್ಯುತಗೊಳಿಸುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎಂದು ನಾನು ಕೇಳಿದೆ ಎಂದು ಆದಿತ್ಯ ಠಾಕ್ರೆ ಹೇಳಿದರು.
“ಮಹಾ ವಿಕಾಸ್ ಅಘಾಡಿ (ಎಂವಿಎ) ಸಭೆಯಲ್ಲಿ, ಜನರಿಗೆ ನ್ಯಾಯಕ್ಕಾಗಿ ನಾವು ಕಾನೂನುಬಾಹಿರ ಸರ್ಕಾರದ ವಿರುದ್ಧ ಹೋರಾಡುತ್ತೇವೆ ಎಂದು ನಿರ್ಧರಿಸಲಾಯಿತು. ಸರಕಾರದಲ್ಲಿ ಕುಳಿತವರು ತಮ್ಮ ಸ್ವಹಿತಾಸಕ್ತಿಯಲ್ಲಿ ಮುಳುಗಿದ್ದಾರೆ. ಅವರು ಪಕ್ಷವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಠಾಕ್ರೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ