ಸಿಎಂ ನಿರ್ಧಾರ ಎನ್‌ಡಿಎಗೆ ಬಿಟ್ಟದ್ದು: ಹಕ್ಕುಸ್ಥಾಪನೆಗೆ ಹಿಂಜರಿದ ನಿತೀಶ್‌ ಕುಮಾರ್‌


Team Udayavani, Nov 13, 2020, 5:45 AM IST

ಸಿಎಂ ನಿರ್ಧಾರ ಎನ್‌ಡಿಎಗೆ ಬಿಟ್ಟದ್ದು: ಹಕ್ಕುಸ್ಥಾಪನೆಗೆ ಹಿಂಜರಿದ ನಿತೀಶ್‌ ಕುಮಾರ್‌

ಪಾಟ್ನಾ: ಬಿಹಾರದಲ್ಲಿ ಎನ್‌ಡಿಎದಿಂದ ಸರ್ಕಾರ ರಚನೆಯ ಪ್ರಕ್ರಿಯೆ ಆರಂಭವಾಗಿರುವ ವೇಳೆಯಲ್ಲೇ, ಯಾರು ಮುಖ್ಯಮಂತ್ರಿಯಾಗಬೇಕು ಎನ್ನುವ ಚರ್ಚೆಯೂ ಶುರುವಾಗಿದೆ. ನಿತೀಶ್‌ ಕುಮಾರ್‌ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಈಗಾಗಲೇ ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ. ದೀಪಾವಳಿ ನಂತರ, ಅಂದರೆ ನವೆಂಬರ್‌ 16ರಂದು ನಿತೀಶ್‌ ಕುಮಾರ್‌ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ.

ಆದರೂ ಈ ಚುನಾವಣೆಯಲ್ಲಿ 43 ಸ್ಥಾನಗಳನ್ನಷ್ಟೇ ಪಡೆದ ಜೆಡಿಯು ಬದಲು 74 ಸ್ಥಾನಗಳಲ್ಲಿ ಗೆದ್ದಿರುವ ಬಿಜೆಪಿ ಪಕ್ಷದ ನಾಯಕರೇ ರಾಜ್ಯದ ನೇತೃತ್ವ ವಹಿಸುವುದು ಸಮಂಜಸ ಎನ್ನುವ ಭಾವನೆ ಪಕ್ಷದ ಆಂತರಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ ಎನ್ನಲಾಗಿದೆ. ಗಮನಾರ್ಹ ಸಂಗತಿಯೆಂದರೆ, ಈ ವಿಷಯದಲ್ಲಿ ನಿತೀಶ್‌ ಕೂಡ ಮೊದಲಿನಂತೆ ಹಕ್ಕುಸ್ಥಾಪನೆಗೆ ಪ್ರಯತ್ನಿಸುತ್ತಿಲ್ಲ. ಬಿಹಾರ ಸಿಎಂ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಉತ್ತರಿಸಿದ ನಿತೀಶ್‌ “”ನಾನು ಸಿಎಂ ಹುದ್ದೆಗೆ ಹಕ್ಕುಸ್ಥಾಪನೆ ಮಾಡಿಲ್ಲ. ಶುಕ್ರವಾರ ಎನ್‌ಡಿಎದ ನಾಲ್ಕೂ ಪಕ್ಷಗಳು ಸಭೆ ನಡೆಸಿ ನಿರ್ಣಯಕ್ಕೆ ಬರಲಿವೆ” ಎಂದಿದ್ದಾರೆ.

ಪ್ರತಿಯೊಂದು ಸೀಟಿನ ವಿಶ್ಲೇಷಣೆ ಮಾಡಲಿದ್ದೇವೆ: ಚಿರಾಗ್‌ ಪಾಸ್ವಾನ್‌ರ ಪಕ್ಷ ಈ ಬಾರಿ ಕೇವಲ 1 ಸೀಟು ಗೆದ್ದಿದ್ದರೂ, ನಿತೀಶ್‌ರ ಜೆಡಿಯು ಮತದಾರರನ್ನು ವಿಭಜಿಸಲು ಅದು ಸಫ‌ಲವಾಗಿದೆ ಎನ್ನಲಾಗುತ್ತದೆ. ಆದರೆ ಸದ್ಯಕ್ಕಂತೂ ನಿತೀಶ್‌ ಈ ಕುರಿತು ನೇರವಾಗಿ ಎಲ್‌ಜೆಪಿಯ ವಿರುದ್ಧ ಮಾತನಾಡುತ್ತಿಲ್ಲ. ಎಲ್‌ಜೆಪಿಗೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ನಿತೀಶ್‌, “”ಎಲ್ಲಿ ಏನಾಗಿದೆ ಎನ್ನುವುದು ಬಿಜೆಪಿಗೆ ಗೊತ್ತಾಗಬೇಕು. ಒಂದೊಂದು ಕ್ಷೇತ್ರದ ಬಗ್ಗೆಯೂ ನಾವು ವಿಶ್ಲೇಷಣೆ ಮಾಡಲಾರಂಭಿಸಿದ್ದೇವೆ” ಎಂದಿದ್ದಾರೆ.

ಮಹಾಘಟಬಂಧನದ ಸೋಲಿಗೆ ರಾಹುಲ್‌ ಕಾರಣ: ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನದ ಸೋಲಿಗೆ ಕಾಂಗ್ರೆಸ್‌ ಮತ್ತು ರಾಹುಲ್‌ ಗಾಂಧಿಯೇ ಕಾರಣ ಎಂದು ಟೀಕಿಸಿದ್ದಾರೆ ಬಿಜಿಪಿ ನಾಯಕ ಆನಂದ್‌ ಸ್ವರೂಪ್‌ ಶುಕ್ಲಾ. “”ರಾಹುಲ್‌ ಗಾಂಧಿಯವರು ತಮ್ಮ ಪಕ್ಷವನ್ನು 70 ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿಸಿದರು. ಆದರೆ ಆ ಪಕ್ಷ ಕೇವಲ 19 ಸ್ಥಾನಗಳಲ್ಲಿ ಗೆದ್ದಿದೆ. ತೇಜಸ್ವಿ ಯಾದವ್‌ ಮತ್ತು ಆರ್‌ಜೆಡಿಯ ಸೋಲಿನ ಸಂಪೂರ್ಣ ಶ್ರೇಯಸ್ಸು ಕಾಂಗ್ರೆಸ್‌ ಮತ್ತು ರಾಹುಲ್‌ ಗಾಂಧಿಗೆ ಸಲ್ಲಬೇಕು ಎನ್ನುತ್ತಾರೆ ಶುಕ್ಲಾ.

ಕುರ್ಚಿ ವ್ಯಾಮೋಹ ಬಿಡಲಿ
ಗುರುವಾರ ತೇಜಸ್ವಿ ಯಾದವ್‌ ಮಹಾಘಟಬಂಧನದ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್‌ಡಿಎ ಮತ್ತು ನಿತೀಶ್‌ ಕುಮಾರ್‌ ವಿರುದ್ಧ ಕಿಡಿಕಾರಿದ್ದಾರೆ. “”ನಮಗೆ ಜನಬೆಂಬಲ ಸಿಕ್ಕಿದೆ. ಆದರೆ ಎನ್‌ಡಿಎ ಧನಬಲ ಹಾಗೂ ಕುತಂತ್ರದಿಂದ ಚುನಾವಣೆ ಗೆದ್ದಿದೆ” ಎಂದಿದ್ದಾರೆ. ನಿತೀಶ್‌ ಕುಮಾರ್‌ ಬಗ್ಗೆ ಪ್ರಶ್ನೆ ಎದುರಾದಾಗ “‘ಅವರು ಆತ್ಮಸಾಕ್ಷಿಯ ಧ್ವನಿಗೆ ಕಿವಿಗೊಟ್ಟು, ಕುರ್ಚಿಯ ವ್ಯಾಮೋಹ ಬಿಡಬೇಕು” ಎಂದು ಕುಟುಕಿದ್ದಾರೆ ತೇಜಸ್ವಿ. 2017ರಲ್ಲಿ ನಿತೀಶ್‌ ಕುಮಾರ್‌ ಆರ್‌ಜೆಡಿಯಿಂದ ಮೈತ್ರಿತುಂಡರಿಸಿಕೊಂಡು ಎನ್‌ಡಿಎ ಸೇರಿದ್ದಾಗ, “”ನಾನು ಆತ್ಮಸಾಕ್ಷಿಗೆ ಓಗೊಟ್ಟು ಹೊರಬಂದಿದ್ದೇನೆ” ಎಂದಿದ್ದರು. ಆ ಮಾತನ್ನೇ ತೇಜಸ್ವಿ ನೆನಪಿಸಿದ್ದಾರೆ!

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.