ಕೋಚ್ ಆಡ್ವಾಣಿಗೆ ಮುಖಕ್ಕೇ ಪಂಚ್ ನೀಡಿದ್ದ ಬಾಕ್ಸರ್ ನರೇಂದ್ರ ಮೋದಿ: ರಾಹುಲ್ ಟೀಕೆ
Team Udayavani, May 6, 2019, 3:45 PM IST
ಹೊಸದಿಲ್ಲಿ : ‘ಬಾಕ್ಸರ್ ನರೇಂದ್ರ ಮೋದಿ ಅವರು 2014ರಲ್ಲಿ ದೇಶದಲ್ಲಿನ ನಿರುದ್ಯೋಗ ಮತ್ತು ಭ್ರಷ್ಟಾಚಾರವನ್ನು ತೊಲಗಿಸುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿದ್ದರು. ಆದರೆ ಅವರು ಆ ಕೆಲಸ ಮಾಡುವ ಬದಲು ತಮ್ಮ ಕೋಚ್ ಎಲ್ ಕೆ ಆಡ್ವಾಣಿ ಅವರಿಗೆ ಮುಖಕ್ಕೆ ಪಂಚ್ ಕೊಟ್ಟರು’ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟಾಂಗ್ ನೀಡಿದ್ದಾರೆ.
ಹಿರಿಯ ಬಿಜೆಪಿ ನಾಯಕ ಆಡ್ವಾಣಿ ಅವರನ್ನು ಪಕ್ಷದಲ್ಲಿ ಕಡೆಗಣಿಸಲಾಗಿದೆ ಎಂದು ಆರೋಪಿಸಿ ರಾಹುಲ್ ಈ ಹಿಂದೆಯೂ ಹಲವಾರು ಬಾರಿ ಪ್ರಧಾನಿ ಮೋದಿ ವಿರುದ್ಧ ವಾಕ್ ದಾಳಿ ನಡೆಸಿದ್ದರು.
ಹರಿಯಾಣದ ಭಿವಾನಿಯಲ್ಲಿ ಚುನಾವಣಾ ರಾಲಿಯಲ್ಲಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ, “2014ರಲ್ಲಿ ಭ್ರಷ್ಟಾಚಾರ ಮತ್ತು ನಿರುದ್ಯೋಗದ ವಿರುದ್ಧ ಹೋರಾಡಲು ಅಖಾಡಕ್ಕೆ ಇಳಿದು ಅಧಿಕಾರಕ್ಕೆ ಬಂದಿದ್ದ ಮೋದಿ ಮೊದಲು ತಮ್ಮ ಕೋಚ್ ಆಡ್ವಾಣಿ ಅವರ ಮುಖಕ್ಕೆ, ಅನಂತರ ಗಡ್ಕರೀ ಜೀ ಮತ್ತು ಜೇಟ್ಲೀ ಜಿ ಅವರಿಗೂ ಪಂಚ್ ನೀಡಿ ಬಳಿಕ ಜನಸಮೂಹಕ್ಕೆ ನುಗ್ಗಿ ರೈತರಿಗೆ ಮತ್ತು ಸಣ್ಣ ವರ್ತಕರಿಗೆ ಪಂಚ್ ನೀಡಿದರು” ಎಂದು ವ್ಯಂಗ್ಯವಾಡಿದರು.
ಬಿಜೆಪಿಯಲ್ಲಿ ಹಿರಿಯ ನಾಯಕ ಆಡ್ವಾಣಿ ಅವರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಟೀಕಿಸುತ್ತಲೇ ಬಂದಿರುವ ರಾಹುಲ್ ಗಾಂಧಿ, ಕಳೆದ ಎಪ್ರಿಲ್ ನಲ್ಲಿ ಉತ್ತರಾಖಂಡದ ರಾಲಿಯಲ್ಲಿ “ಮೋದಿ ತಮ್ಮ ರಾಜಕೀಯ ಗುರು ಆಡ್ವಾಣಿಗೆ ಅಖಾಡೆಯಲ್ಲೇ ಪಂಚ್ ನೀಡಿದ್ದಾರೆ’ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ