ಕಲ್ಲಿದ್ದಲು ಗಣಿಗಾರಿಕೆ ಹಗರಣ; ಸಿಬಿಐ ದಾಳಿ ವೇಳೆ ಆರೋಪಿ ಹೃದಯ ಸ್ತಂಭನದಿಂದ ಸಾವು
ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ಪ್ರಕರಣದಲ್ಲಿ ರಾಯ್ ಕೂಡಾ ಆರೋಪಿಯಾಗಿರುವುದಾಗಿ ಸಿಬಿಐ ಮೂಲಗಳು ತಿಳಿಸಿವೆ.
Team Udayavani, Nov 28, 2020, 6:21 PM IST
ಕೋಲ್ಕತಾ: ಅಕ್ರಮ ಕಲ್ಲಿದ್ದಲು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶನಿವಾರ(ನವೆಂಬರ್ 28, 2020) ಪಶ್ಚಿಮಬಂಗಾಳದ ಅಸಾನ್ಸೋಲ್ ನಲ್ಲಿ ದಾಳಿ ನಡೆಸಿದ ವೇಳೆ ಧನಂಜಯ್ ರಾಯ್ ಎಂಬ ಆರೋಪಿ ಹೃದಯ ಸ್ತಂಭನದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ಪ್ರಕರಣದಲ್ಲಿ ರಾಯ್ ಕೂಡಾ ಆರೋಪಿಯಾಗಿರುವುದಾಗಿ ಸಿಬಿಐ ಮೂಲಗಳು ತಿಳಿಸಿವೆ. ಪಶ್ಚಿಮಬಂಗಾಳ ಮತ್ತು ಜಾರ್ಖಂಡ್ ಸೇರಿದಂತೆ ನಾಲ್ಕು ರಾಜ್ಯಗಳ 45 ಪ್ರದೇಶಗಳಲ್ಲಿ ಸಿಬಿಐ ಇಂದು ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿತ್ತು.
ಪಶ್ಚಿಮಬಂಗಾಳದ ಅಸಾನ್ಸೋಲ್ ಪ್ರದೇಶದಲ್ಲಿರುವ ರಾಯ್ ಮನೆಗೆ ಸಿಬಿಐ ಅಧಿಕಾರಿಗಳು ತಲುಪಿದ ಸಂದರ್ಭದಲ್ಲಿ ಏಕಾಏಕಿ ಹೃದಯ ಬೇನೆ ಕಾಣಿಸಿಕೊಂಡಿತ್ತು. ಕೂಡಲೇ ಧನಂಜಯ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ಬರುವ ಮುನ್ನವೇ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದರು.
ಇದನ್ನೂ ಓದಿ:ವಾಹನ ಸವಾರರ ಗಮನಕ್ಕೆ: ಹೆಲ್ಮೆಟ್ ನಿಯಮದಲ್ಲಿ ಬದಲಾವಣೆ, BISಗೆ ಮಾತ್ರ ಮಾನ್ಯತೆ, ಏನಿದು?
ಈಸ್ಟ್ ಕೋಲ್ ಫೀಲ್ಡ್ಸ್ ಲಿಮಿಟೆಡ್ ಹಾಗೂ ಕೆಲವು ಖಾಸಗಿ ವ್ಯಕ್ತಿಗಳ ವಿರುದ್ಧ ದಾಖಲಾದ ದೂರಿನ ಆಧಾರದ ಮೇಲೆ ಸಿಬಿಐ ಪಶ್ಚಿಮಬಂಗಾಳ, ಬಿಹಾರ, ಜಾರ್ಖಂಡ್ ಮತ್ತು ಉತ್ತರಪ್ರದೇಶದಲ್ಲಿ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿತ್ತು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೂತನ ವಿಮಾನ ಖರೀದಿಸ್ತೀರಿ, ನೇತಾಜಿ ಸ್ಮಾರಕ ಯಾಕೆ ನಿರ್ಮಿಸಿಲ್ಲ: ಕೇಂದ್ರಕ್ಕೆ ಮಮತಾ
ಜೈಲುಪಾಲಾದ ಲಾಲು ಆರೋಗ್ಯ ಸ್ಥಿತಿ ಗಂಭೀರ; ದೆಹಲಿ ಏಮ್ಸ್ ಗೆ ಸ್ಥಳಾಂತರ ಸಾಧ್ಯತೆ
3ನೇ ಅವಧಿಗೆ ಸ್ಪರ್ಧೆ ಇಲ್ಲ; ಮೋದಿ ಬದಲು ಮುಂದಿನ ಪ್ರಧಾನಿ ಹುದ್ದೆಗೆ ಯಾರು ಅರ್ಹ?ಸಮೀಕ್ಷೆ
ಗಣರಾಜ್ಯೋತ್ಸವ ಪರೇಡ್ ಪೂರ್ವಾಭ್ಯಾಸ, ಬದಲಿ ಮಾರ್ಗ ಕಂಡುಕೊಳ್ಳಿ : ಸಂಚಾರಿ ಪೋಲಿಸರು
4ಕೆಜಿ ಮರಳು ಕೊಟ್ಟು ಚಿನ್ನದ ವ್ಯಾಪಾರಿಗೇ 50 ಲಕ್ಷ ರೂಪಾಯಿ ವಂಚಿಸಿದ! ಏನಿದು ಘಟನೆ