ಕಲ್ಲಿದ್ದಲು ಹಗರಣ: ಗುಪ್ತಾ ಹಾಗೂ ಇಬ್ಬರು ಅಧಿಕಾರಿಗಳಿಗೆ 2 ವರ್ಷ ಜೈಲು
Team Udayavani, May 22, 2017, 3:37 PM IST
ನವದೆಹಲಿ: ಬಹುಕೋಟಿ ಮೊತ್ತದ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಎಚ್.ಸಿ.ಗುಪ್ತಾ ಸೇರಿದಂತೆ ಮೂವರು ಅಧಿಕಾರಿಗಳಿಗೆ ದೆಹಲಿ ಕೋರ್ಟ್ ಸೋಮವಾರ ಎರಡು ವರ್ಷ ಜೈಲುಶಿಕ್ಷೆ ವಿಧಿಸಿದೆ.
ಎಚ್ ಸಿ ಗುಪ್ತಾ 2005 ಡಿಸೆಂಬರ್ 31ರಿಂದ 2008ರ ನವೆಂಬರ್ ವರೆಗೆ ಕಲ್ಲಿದ್ದಲು ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರೆ, ಕಲ್ಲಿದ್ದಲು ಸಚಿವಾಲಯದ ಜಂಟಿ ಕಾರ್ಯದರ್ಶಿ ಕೆಎಸ್ ಕ್ರೋಫಾ ಮತ್ತು ನಿರ್ದೇಶಕ ಕೆಸಿ ಸಮಾರಿಯಾಗೆ 2 ವರ್ಷಗಳ ಜೈಲುಶಿಕ್ಷೆ ನೀಡಿದೆ.
ಕಲ್ಲಿದ್ದಲು ಹಗರಣದ ಪ್ರಕರಣದ ಕುರಿತು ಸಿಬಿಐ 2012ರ ಅಕ್ಟೋಬರ್ ನಲ್ಲಿ ಎಫ್ಐಆರ್ ದಾಖಲಿಸಿತ್ತು. ಆದರೆ 2014ರ ಮಾರ್ಚ್ 27ರಂದು ಪ್ರಕರಣದ ಬಗ್ಗೆ ಕ್ಲೋಶರ್(ಮುಕ್ತಾಯದ) ರಿಪೋರ್ಟ್ ಸಲ್ಲಿಸಿತ್ತು. ಸಿಬಿಐ ಕೋರ್ಟ್ 2014ರ ಅಕ್ಟೋಬರ್ 13ರಂದು ಕ್ಲೋಶರ್ ರಿಪೋರ್ಟ್ ಅನ್ನು ತಿರಸ್ಕರಿಸಿ, ಗುಪ್ತಾ ಹಾಗೂ ಇತರ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿತ್ತು.
ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಕೇಂದ್ರ ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಎಚ್.ಸಿ.ಗುಪ್ತಾ ಅವರಿಗೆ 7 ವರ್ಷದ ಶಿಕ್ಷೆ ನೀಡಬೇಕೆಂದು ವಿಶೇಷ ಕೋರ್ಟ್ಗೆ ಆಗ್ರಹಿಸಿತ್ತು. ಪ್ರಕರಣದಲ್ಲಿ ಖಾಸಗಿ ಕಂಪನಿಗೆ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿ ಗುಪ್ತಾ ಕ್ರಿಮಿನಲ್ ಸಂಚು ರೂಪಿಸಿದ ಆರೋಪ ಹೊಂದಿದ್ದು, ವಿಶೇಷ ಕೋರ್ಟ್ ಗುಪ್ತಾರನ್ನು ದೋಷಿ ಎಂದು ತೀರ್ಪು ನೀಡಿತ್ತು. ಗುಪ್ತಾ ವಿರುದ್ಧ ಇನ್ನೂ 10 ಪ್ರಕರಣಗಳು ಪ್ರತ್ಯೇಕ ಕೋರ್ಟ್ಗಳಲ್ಲಿ ವಿಚಾರಣೆ ಹಂತದಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ