ಬಹುಕೋಟಿ ಕಲ್ಲಿದ್ದಲು ಹಗರಣ; ಕೋಡಾಗೆ 3 ವರ್ಷ ಜೈಲುಶಿಕ್ಷೆ; ಸಿಬಿಐ
Team Udayavani, Dec 16, 2017, 11:38 AM IST
ನವದೆಹಲಿ: ಬಹುಕೋಟಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾಗೆ ಸಿಬಿಐ ವಿಶೇಷ ನ್ಯಾಯಾಲಯ ಶನಿವಾರ ಮೂರು ವರ್ಷ ಜೈಲುಶಿಕ್ಷೆಯನ್ನು ವಿಧಿಸಿದೆ.
ಕಲ್ಲಿದ್ದಲು ನಿಕ್ಷೇಪ ಹಗರಣದಲ್ಲಿ ಮಧು ಕೋಡಾ, ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಎಚ್ ಸಿ ಗುಪ್ತ, ಮಾಜಿ ಜಾರ್ಖಂಡ್ ಮುಖ್ಯ ಕಾರ್ಯದರ್ಶಿ ಅಶೋಕ್ ಕುಮಾರ್ ಬಸುವನ್ನು ಸಿಬಿಐ ಕೋರ್ಟ್ ಬುಧವಾರ ದೋಷಿ ಎಂದು ತೀರ್ಪು ನೀಡಿತ್ತು.
ಜಾರ್ಖಂಡ್ನಲ್ಲಿನ ಉತ್ತರ ರಾಜಹರ ಕಲ್ಲಿದ್ದಲು ನಿಕ್ಷೇಪವನ್ನು ಕೋಲ್ಕತ ಮೂಲಕ ವಿನಿ ಅಯರ್ನ್ ಆ್ಯಂಡ್ ಸ್ಟೀಲ್ ಉದ್ಯೋಗ್ ಲಿಮಿಟೆಡ್ (ವಿಐಎಸ್ಯುಎಲ್) ಕಂಪೆನಿಗೆ ನೀಡಿರುವ ವಿಷಯದಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಕೇಸ್ ಇದಾಗಿದೆ.
ಈ ಕಲ್ಲಿದ್ದಲು ಹಗರಣದ ಇತರ ಆರೋಪಿಗಳೆಂದರೆ ಬಸಂತ್ ಭಟ್ಟಾಚಾರ್ಯ, ಬಿಪಿನ್ ಬಿಹಾರಿ ಸಿಂಗ್ (ಇಬ್ಬರೂ ಸರಕಾರಿ ಅಧಿಕಾರಿಗಳು), ವಿಸುಲ್ನ ನಿರ್ದೇಶಕ ವೈಭವ್ ತುಳಸಿಯಾನ್, ಕೋಡ ಅವರ ನಿಕಟವರ್ತಿ ವಿಜಯ್ ಜೋಷಿ ಮತ್ತು ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ನವೀನ್ ಕುಮಾರ್ ತುಲಸಿಯಾನ್.
ಎಂಟು ಮಂದಿ ಆರೋಪಿಗಳು ಈ ಹಿಂದೆ ತಮಗೆ ಸಮನ್ಸ್ ಜಾರಿಯಾದುದನ್ನು ಅನುಸರಿಸಿ ಕೋರ್ಟಿಗೆ ಹಾಜರಾಗಿದ್ದು ಅವರಿಗೆ ಜಾಮೀನು ಮಂಜೂರು ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!