Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ
ಪಾಸ್ಪೋರ್ಟ್ಗಳ ಮುಟ್ಟುಗೋಲು...ಚಿತ್ರ ಹಿಂಸೆ ತಾಳಲಾರದೆ ಹಡಗಿನಲ್ಲಿ ಪರಾರಿಯಾಗಿದ್ದ ಭಾರತೀಯರು...!!
Team Udayavani, May 6, 2024, 5:46 PM IST
ಕೊಚ್ಚಿ: ಕೇರಳದ ಕರಾವಳಿಯಲ್ಲಿ ಆರು ಭಾರತೀಯ ಮೀನುಗಾರರಿದ್ದ ಇರಾನ್ ನ ಮೀನುಗಾರಿಕಾ ಹಡಗನ್ನು ತಡೆಹಿಡಿದು ವಶಕ್ಕೆ ತೆಗೆದುಕೊಂಡಿರುವುದಾಗಿ ಭಾರತೀಯ ಕೋಸ್ಟ್ ಗಾರ್ಡ್ ಸೋಮವಾರ ತಿಳಿಸಿದೆ.
ತಮಿಳುನಾಡಿನ ಕನ್ಯಾಕುಮಾರಿ ಮೂಲದ ಆರು ಮಂದಿ ಮೀನುಗಾರರು ಇರಾನ್ ಮೂಲದ ಸೈಯದ್ ಸೌದ್ ಅನ್ಸಾರಿ ಎಂಬವರಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು. ಪ್ರಾಥಮಿಕ ತನಿಖೆಯ ಪ್ರಕಾರ ಮೀನುಗಾರರನ್ನು ಕನಿಷ್ಠವಾಗಿ ನಡೆಸಿಕೊಳ್ಳಲಾಗಿದ್ದು, ಅವರಿಗೆ ಮೂಲಭೂತ ಜೀವನ ಪರಿಸ್ಥಿತಿಗಳನ್ನೂ ಸಹ ಒದಗಿಸಿರಲ್ಲ. ಹೀಗಾಗಲಿ ಹಡಗನ್ನು ಬಳಸಿ ಇರಾನ್ನಿಂದ ಭಾರತಕ್ಕೆ ಪರಾರಿಯಾಗಲು ನಿರ್ಧರಿಸಿದ್ದರು ಎಂದು ಭಾರತೀಯ ಕೋಸ್ಟ್ ಗಾರ್ಡ್ ತಿಳಿಸಿದೆ.
ಕೋಸ್ಟ್ ಗಾರ್ಡ್ ತನ್ನ ಹಡಗುಗಳು ಮತ್ತು ಹೆಲಿಕಾಪ್ಟರ್ಗಳನ್ನು ತ್ವರಿತವಾಗಿ ನಿಯೋಜಿಸಿ ಇರಾನ್ ಹಡಗನ್ನು ತಡೆಯಿತು. ಕೋಸ್ಟ್ ಗಾರ್ಡ್ ಬೋರ್ಡಿಂಗ್ ತಂಡ ಹಡಗನ್ನು ಹತ್ತಿ ಆರು ಮೀನುಗಾರರು ಕೆಲಸ ಮಾಡುತ್ತಿದ್ದುದನ್ನು ಕಂಡುಕೊಂಡರು. ಯಾವುದೇ ದೇಶವಿರೋಧಿ ಚಟುವಟಿಕೆಯಲ್ಲಿ ಭಾಗವಹಿಸುವ ಸಾಧ್ಯತೆಯ ಬಗ್ಗೆ ದೋಣಿಯನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿದೆ. ಪರಿಶೀಲನೆಯ ನಂತರ ಹೆಚ್ಚಿನ ತನಿಖೆಗಾಗಿ ಹಡಗನ್ನು ಕೊಚ್ಚಿಗೆ ತರಲಾಗಿದೆ.
2023 ಮಾರ್ಚ್ 26 ರಿಂದ ಹಡಗಿನಲ್ಲಿ ಕೆಲಸ ಮಾಡುತ್ತಿದ್ದು ನಮ್ಮ ಪಾಸ್ಪೋರ್ಟ್ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಮೀನುಗಾರರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್’ ಅಲ್ಲ!
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Borderline Personality Disorder: ಬಾರ್ಡರ್ಲೈನ್ ಪರ್ಸನಾಲಿಟಿ ಡಿಸಾರ್ಡರ್
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್ ಎಂ.ಪೈ ಬ್ಲಾಕ್
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು