ಭಾರೀ ಹಿಮಮಳೆಗೆ ಮೂವರು ಬಲಿ
Team Udayavani, Jan 13, 2020, 2:17 AM IST
ಹೊಸದಿಲ್ಲಿ: ಉತ್ತರ ಭಾರತದಲ್ಲಿ ಹಿಮ ಮಳೆಯು ತೀವ್ರಗೊಂಡಿದ್ದು, ಉತ್ತರಾಖಂಡ ಹಾಗೂ ಹಿಮಾಚಲಪ್ರದೇಶದಲ್ಲಿ ಒಟ್ಟು ಮೂವರು ಮೃತಪಟ್ಟಿದ್ದಾರೆ.
ಉತ್ತರಾಖಂಡದ ಉತ್ತರಕಾಶಿಯಲ್ಲಿ ಹಿಮವರ್ಷದ ನಡುವೆ ಸಿಲುಕಿದ್ದ ವಿದ್ಯಾರ್ಥಿಗಳ ತಂಡದಲ್ಲಿದ್ದ 18 ವರ್ಷದ ಒಬ್ಬ ವಿದ್ಯಾರ್ಥಿ ಮೃತಪಟ್ಟರೆ, ಶಿಮ್ಲಾದಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.