
ಕೊಲೀಜಿಯಂ ವ್ಯವಸ್ಥೆ ನೆಲದ ಕಾನೂನು, ಅನುಸರಿಸಲೇ ಬೇಕು
Team Udayavani, Dec 9, 2022, 7:50 AM IST

ನವದೆಹಲಿ: ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ಕೊಲೀಜಿಯಂ ವ್ಯವಸ್ಥೆ “ಈ ನೆಲದ ಕಾನೂನು’ ಆಗಿದ್ದು, ಅದನ್ನು ಅಕ್ಷರಶಃ ಅನುಸರಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ಖಾರವಾಗಿ ತಾಕೀತು ಮಾಡಿದ್ದು, ಕೊಲೀಜಿಯಂ ವಿರುದ್ಧ ಶಾಸಕಾಂಗದ ಕೆಲವರು ನೀಡಿರುವ ಹೇಳಿಕೆಗಳನ್ನು ಸಹಿಸಲು ಅಸಾಧ್ಯ ಎಂದಿದೆ.
ಕೊಲೀಜಿಯಂ ವ್ಯವಸ್ಥೆಯ ಬಗ್ಗೆ ಕೇಂದ್ರ ಸರಕಾರ ಮತ್ತು ನ್ಯಾಯಾಂಗದ ನಡುವೆ ಪ್ರಸ್ತುತ ಉಂಟಾಗಿರುವ ಅಭಿಪ್ರಾಯ ಬೇಧ, ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಮತ್ತು ಕೇಂದ್ರ ಕಾನೂನು ಸಚಿವ ಕಿರಣ್ ರೆಜಿಜು ಈ ಬಗ್ಗೆ ನೀಡಿರುವ ಹೇಳಿಕೆಗಳ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯ ಈ ನಿಲುವನ್ನು ವ್ಯಕ್ತಪಡಿಸಿದೆ.
ನ್ಯಾಯಮೂರ್ತಿಗಳ ನೇಮಕ ನಡೆಸಲು ಕೊಲೀಜಿಯಂ ವ್ಯವಸ್ಥೆಯನ್ನು ರೂಪಿಸಿದ ಸಾಂವಿಧಾನಿಕ ಪೀಠದ ತೀರ್ಪನ್ನು ಎಲ್ಲರೂ ಅನುಸರಿಸಲೇ ಬೇಕಿದೆ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾ| ಎ.ಎಸ್. ಓಕಾ ಮತ್ತು ನ್ಯಾ| ವಿಕ್ರಮ್ ನಾಥ್ ಅವರಿದ್ದ ನ್ಯಾಯಪೀಠವು ಅಟಾರ್ನಿ ಜನರಲ್ ಮತ್ತು ಸಾಲಿಸಿಟರ್ ಜನರಲ್ ಅವರಿಗೆ ಸೂಚಿಸಿದೆ.
ಕೊಲೀಜಿಯಂ ಮಾಡಿರುವ ಶಿಫಾರಸುಗಳನ್ನು ನ್ಯಾಯಾಲಯ ಹಾಕಿರುವ ಸಮಯಮಿತಿಯಲ್ಲಿ ಕೇಂದ್ರ ಸರಕಾರವು ಅಂಗೀಕರಿಸುತ್ತಿಲ್ಲ ಎಂಬುದಾಗಿ ಸಲ್ಲಿಕೆಯಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ನ್ಯಾಯಪೀಠ ನಡೆಸಿತು.
ವಿಚಾರಣೆಯ ವೇಳೆ “ಸಾಂವಿಧಾನಿಕ ಹುದ್ದೆಗಳಲ್ಲಿ ಇರುವ ವ್ಯಕ್ತಿಗಳು’ ಕೊಲೀಜಿಯಂ ವ್ಯವಸ್ಥೆಯ ವಿರುದ್ಧ ಹೇಳಿಕೆ ನೀಡಿರುವುದನ್ನು ನ್ಯಾಯಪೀಠದ ಗಮನಕ್ಕೆ ತರಲಾಯಿತು. ಕೊಲೀಜಿಯಂ ವಿಚಾರದಲ್ಲಿ ಎಚ್ಚರಿಕೆಯಿಂದ ಮಾತನಾಡುವಂತೆ ಸರಕಾರದ ಭಾಗವಾಗಿರುವವರಿಗೆ ಸೂಚಿಸುವಂತೆ ನ್ಯಾ| ವಿಕ್ರಮ್ ನಾಥ್ ಅಟಾರ್ನಿ ಜನರಲ್ ಅವರಿಗೆ ತಾಕೀತು ಮಾಡಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ರೂ.: ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕೆಗೆ ಒತ್ತು

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

Union Budget 2023: 20 ಲಕ್ಷ ಕೋಟಿ ರೂಪಾಯಿ ಕೃಷಿ ಸಾಲದ ಗುರಿ-ಕೃಷಿ ಕ್ಷೇತ್ರಕ್ಕೆ ಡಿಜಿಟಲ್ ಸ್ಪರ್ಶ

ಆನ್ ಲೈನ್ ಕ್ಲಾಸ್ ನಡೆಯುತ್ತಿರುವಾಗಲೇ ಶಿಕ್ಷಕನ ಕತ್ತು ಹಿಸುಕಿ ಕೊಲೆಗೈದ ದುಷ್ಕರ್ಮಿಗಳು

ಜಮ್ಮು-ಕಾಶ್ಮೀರ: ಗುಲ್ಮಾರ್ಗ್ನಲ್ಲಿ ಭಾರೀ ಹಿಮಪಾತ; ಇಬ್ಬರು ವಿದೇಶಿ ಪ್ರವಾಸಿಗರು ಮೃತ್ಯು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಗಿಲ್ ಶತಕದ ಕಮಾಲ್; ನ್ಯೂಜಿಲೆಂಡ್ ಗೆ ಸೋಲಿನ ಶಾಕ್ ನೀಡಿ ಸರಣಿ ಗೆದ್ದ ಟೀಮ್ ಇಂಡಿಯಾ

ಚಿನ್ನದ ಬ್ರೇಸ್ಲೆಟ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬ್ಲೂ ಫ್ಲ್ಯಾಗ್ ಸಿಬಂದಿ

ಗ್ರಾಚ್ಯುಟಿಗೆ ಒಪ್ಪಿಗೆ: ಧರಣಿ ಕೈಬಿಟ್ಟ ಅಂಗನವಾಡಿ ಕಾರ್ಯಕರ್ತೆಯರು

ಶಾಲಾ ಮಕ್ಕಳ ಸಮವಸ್ತ್ರ: ಸರಕಾರದ ವಿರುದ್ಧ ಎಚ್ಡಿಕೆ ಕಿಡಿ

ರಾಜ್ಯ ಸರಕಾರದ ಕಮಿಷನ್ ಶೇ.80ಕ್ಕೆ: ಟ್ವೀಟ್ ಮೂಲಕ ಕುಟುಕಿದ ಕಾಂಗ್ರೆಸ್