ಪ್ರಗತಿಗೆ ವಸಾಹತುಶಾಹಿ ಅಡ್ಡಿ: ಪ್ರಧಾನಿ ಮೋದಿ
Team Udayavani, Nov 27, 2021, 6:50 AM IST
ಹೊಸದಿಲ್ಲಿ: “ವಸಾಹತುಶಾಹಿ ಮನಃಸ್ಥಿತಿಗಳಿಂದ ದೇಶದ ಪ್ರಗತಿಗೆ ಅಡ್ಡಿಯುಂಟಾಗಿದೆ. ವಾಕ್ ಸ್ವಾತಂತ್ರ್ಯದ ಹೆಸರಿನಲ್ಲಿ ಇಂಥ ಮನಃಸ್ಥಿತಿಗಳು ದೇಶದ ಅಭಿವೃದ್ಧಿಯನ್ನು ತಡೆಹಿಡಿಯುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ.
ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ಆಯೋಜಿಸಲಾಗಿದ್ದ ಸಂವಿ ಧಾನ ದಿನಾಚರಣೆಯಲ್ಲಿ ಭಾಗವಹಿಸಿದ್ದ ಅವರು, “ಭಾರತದಲ್ಲಿ ದಶಕಗಳ ಹಿಂದೆಯೇ ವಸಾಹತುಶಾಹಿ ವ್ಯವಸ್ಥೆ ಕೊನೆಗೊಂಡಿದೆ. ಆದರೆ ಇಲ್ಲಿನ ಕೆಲವರು ಆ ವ್ಯವಸ್ಥೆಯ ಪಡಿಯಚ್ಚುಗಳಂತಿದ್ದಾರೆ. ಇಂಥ ಶಕ್ತಿಗಳು ಭಾರತದ ಅಭಿವೃದ್ಧಿಗೆ ತೊಡರುಗಾಲು ಹಾಕುತ್ತಲೇ ಬಂದಿದ್ದಾರೆ’ ಎಂದು ಅವರು ಹೇಳಿದ್ದಾರೆ.
“ಪ್ಯಾರಿಸ್ ಪರಿಸರ ಸಂರಕ್ಷಣ ಸಮ್ಮೇಳನದಲ್ಲಿ ಕೈಗೊಳ್ಳಲಾದ ನಿರ್ಣಯಗಳನ್ನು ಪರಿಣಾಮಕಾರಿಯಾಗಿ ಅನುಸರಿಸುತ್ತಿರುವುದು ಭಾರತ ಮಾತ್ರ. ಜಗತ್ತಿನ ಬಡ ರಾಷ್ಟ್ರಗಳು ಕೈಗಾರಿಕೆಗಳತ್ತ ಮುಖ ಮಾಡುವ ಮುನ್ನವೇ ಸಿರಿವಂತ ರಾಷ್ಟ್ರಗಳು ಸಾಂಪ್ರದಾಯಿಕ ತೈಲಾಧಾರಿತ ಕೈಗಾರಿಕೆಗಳನ್ನು ತಮ್ಮಲ್ಲಿ ಸ್ಥಾಪಿಸಿ, ಪರಿಸರ ಮಾಲಿನ್ಯಕ್ಕೆ ಕಾರಣೀಭೂತ ರಾಗಿದ್ದಾರೆ.
ಇದನ್ನೂ ಓದಿ:ಕುಟುಂಬ ಆಧಾರಿತ ಪಕ್ಷಗಳಿಂದ ಪ್ರಜಾಸತ್ತೆಗೆ ಅಪಾಯ
ಇಂದಿಗೂ ಮಾಲಿನ್ಯಕ್ಕೆ ಅವರ ಕಾಣಿಕೆ ಹೇರಳವಾಗಿವೆ. ಆದರೂ ಆ ರಾಷ್ಟ್ರಗಳು ಮಾಲಿನ್ಯದ ಆರೋಪ ಮಾಡುತ್ತಲೇ ಬಂದಿವೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್