ಡ್ರಗ್ಸ್ ಪ್ರಕರಣ: ಹಾಸ್ಯನಟಿ ಭಾರ್ತಿ ಸಿಂಗ್ ಹಾಗೂ ಆಕೆಯ ಪತಿಗೆ 14 ದಿನಗಳ ನ್ಯಾಯಾಂಗ ಬಂಧನ
Team Udayavani, Nov 22, 2020, 6:19 PM IST
ನವದೆಹಲಿ: ಮಾದಕ ವಸ್ತು ಸಂಗ್ರಹ ಮತ್ತು ಸೇವನೆ ಆರೋಪದ ಮೇಲೆ ಬಂಧಿತರಾಗಿರುವ ಹಾಸ್ಯನಟಿ ಭಾರ್ತಿ ಸಿಂಗ್ ಹಾಗೂ ಆಕೆಯ ಪತಿ ಹರ್ಷ್ ಲಿಂಬಾಚಿಯಾ ಅವರಿಗೆ ಡಿಸೆಂಬರ್ 4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಮುಂಬೈನ ನ್ಯಾಯಾಲಯ ಆದೇಶ ನೀಡಿದೆ.
ಶನಿವಾರ(ನ.21) ಎನ್ ಸಿಬಿ ಅಧಿಕಾರಿಗಳು ಮಹಾರಾಷ್ಟ್ರದ ಅಂಧೇರಿಯಲ್ಲಿ ಭಾರ್ತಿ ಸಿಂಗ್ ನಿವಾಸದ ಮೇಲೆ ದಾಳಿ ನಡೆಸಿ ಅಲ್ಪ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಂಡಿದ್ದರು. ಈ ವೇಳೆ ಭಾರ್ತಿ ಸಿಂಗ್ ಹಾಗೂ ಆಕೆಯ ಪತಿ ಲಿಂಬಾಲಿಯಾ ಡ್ರಗ್ಸ್ ಸೇವಿಸಿರುವುದಾಗಿ ತಪ್ಪೊಪ್ಪಿಕೊಂಡಿದ್ದರು.
ಎನ್ ಸಿಬಿ ಅಧಿಕಾರಿಗಳು ಶನಿವಾರ ಭಾರ್ತಿ ಸಿಂಗ್ ರನ್ನು ಹಾಗೂ ಸತತ 12 ಗಂಟೆಗಳ ವಿಚಾರಣೆ ನಡೆಸಿ ಭಾನುವಾರ (ನ.22) ಆಕೆಯ ಪತಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದೀಗ ಮುಂಬೈನ ನ್ಯಾಯಾಲಯ ಡಿಸೆಂಬರ್ 4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಸಿಸಿಬಿ ಅಧಿಕಾರಿ ಸೋಗಿನಲ್ಲಿ ಉದ್ಯಮಿಯ ಬ್ಲ್ಯಾಕ್ ಮೆಲ್! ಪೊಲೀಸರಿಂದ ನಕಲಿ ಅಧಿಕಾರಿಯ ಬಂಧನ
ಏತನ್ಮಧ್ಯೆ ದಂಪತಿಗಳಿಬ್ಬರು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ಸಲ್ಲಿಸಿದ್ದು ಇದರ ವಿಚಾರಣೆ ಸೋಮವಾರ (ನ. 23) ನಡೆಯಲಿದೆ.
ಶನಿವಾರ ಭಾರ್ತಿ ಸಿಂಗ್ ನಿವಾಸದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಎನ್ ಸಿ ಬಿ ಅಧಿಕಾರಿಗಳು 86.5 ಗ್ರಾಂ ಗಾಂಜಾವನ್ನು ವಶಕ್ಕೆ ತೆಗೆದುಕೊಂಡಿದ್ದರು.
Mumbai: Comedian Bharti Singh & her husband Haarsh Limbachiyaa being taken to hospital for medical examination. They have been arrested by the Narcotics Control Bureau (NCB). #Maharashtra https://t.co/vutDGJ6NsS pic.twitter.com/EuSYkGovpq
— ANI (@ANI) November 22, 2020
ಇದನ್ನೂ ಓದಿ: ಮೂತ್ರಪಿಂಡ ವೈಫಲ್ಯದಿಂದ ಕಿರುತೆರೆ ನಟಿ ಲೀನಾ ಆಚಾರ್ಯ ನಿಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?