ಬರಲಿದೆ ಸ್ಮಾರ್ಟ್ ಸ್ಪೀಡ್ ವಾರ್ನಿಂಗ್ ಸಿಸ್ಟಂ
ರಸ್ತೆ ಸುರಕ್ಷತೆಗಾಗಿ ಕೇಂದ್ರ ಸಾರಿಗೆ ಇಲಾಖೆಯಿಂದ ಹೊಸ ತಂತ್ರಜ್ಞಾನ
Team Udayavani, Oct 18, 2021, 10:58 AM IST
ಹೊಸದಿಲ್ಲಿ: ಹೆದ್ದಾರಿ ಮತ್ತು ರಸ್ತೆಗಳಲ್ಲಿ ಸಾಗುವ ವಾಹನಗಳ ಚಾಲಕರಿಗೆ ಆ ರಸ್ತೆಯ ಸ್ಥಿತಿಗತಿಗಳು ಹಾಗೂ ರಸ್ತೆಗಳಿರುವ ಭೌಗೋಳಿಕ ಸನ್ನಿವೇಶಗಳಿಗೆ ಅನುಸಾರವಾಗಿ ಯಾವ ವೇಗದಲ್ಲಿ ಸಾಗಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿ ಅವರನ್ನು ಎಚ್ಚರಿಸುವ “ಸ್ಮಾರ್ಟ್ ಸ್ಪೀಡ್ ವಾರ್ನಿಂಗ್ ಸಿಸ್ಟಂ’ ಎಂಬ ಹೊಸ ಬಗೆಯ ತಂತ್ರಜ್ಞಾನವನ್ನು ವಿವಿಧ ಐಐಟಿಗಳ ಸಂಶೋಧಕರು ಸಿದ್ಧಪಡಿಸುತ್ತಿದ್ದಾರೆ.
ಏನಿದು ತಂತ್ರಜ್ಞಾನ?: ಇದೊಂದು ಡಿಸ್ಪ್ಲೇ ಪರಿಕರ ವಾಗಿದ್ದು ಇದನ್ನು ವಾಹನಗಳಲ್ಲಿ ಅಳವಡಿಸಲಾಗುತ್ತದೆ. ಇದು ವಾಹನ ಸಾಗುತ್ತಿರುವ ರಸ್ತೆಯ ಗುಣಮಟ್ಟ ಹಾಗೂ ಆ ಭೌಗೋಳಿಕ ಪ್ರದೇಶದಲ್ಲಿನ ಜನರು, ವಾಹನ ಸಂಚಾರ ಹಾಗೂ ಇನ್ನಿತರ ಮಾಹಿತಿಗಳನ್ನು ಆಧಾರಿಸಿ, ಆ ನಿರ್ದಿಷ್ಟ ರಸ್ತೆಯಲ್ಲಿ ಯಾವ ವೇಗದಲ್ಲಿ ವಾಹನವನ್ನು ಚಲಾಯಿಸಬೇಕು ಎಂದು ಡಿಸ್ಪ್ಲೇ ಪರದೆಯಲ್ಲಿ ಸೂಚಿಸುತ್ತದೆ. ನಿಗದಿತ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ವಾಹನ ಸಾಗುತ್ತಿದ್ದರೆ ಚಾಲಕರಿಗೆ ಆ ಬಗ್ಗೆ ಅಲರ್ಟ್ ನೀಡುತ್ತದೆ.
ಇದನ್ನೂ ಓದಿ:ಐಪಿಎಲ್ ಇಲೆವೆನ್: ಕೆ.ಎಲ್. ರಾಹುಲ್ ಕೀಪರ್
ಎಲ್ಲ ವಾಹನಗಳಿಗೂ ಸೂಕ್ತವಾಗಿ ಅಳವಡಿಸಬಹುದಾದ ಆಕಾರದಲ್ಲಿ ಈ ಡಿಸ್ಪ್ಲೇ ಪರದೆಯನ್ನು ರೂಪಿಸಲಾಗುತ್ತದೆ.ಕೇಂದ್ರದ ಉದ್ದೇಶಕ್ಕೆ ಐಐಟಿಗಳ ಸಾಥ್: ದೇಶದಲ್ಲಿ ವಾರ್ಷಿಕವಾಗಿ ಸಂಭವಿಸುವ ಒಟ್ಟು ಅಪಘಾತಗಳಲ್ಲಿ ಶೇ. 70ರಷ್ಟು ಅಪಘಾತಗಳು ಅತೀ ವೇಗದ ಚಾಲನೆ ಯಿಂದಲೇ ಸಂಭವಿಸುತ್ತಿರುವುದನ್ನು ಮನಗಂಡಿರುವ ಕೇಂದ್ರ ರಸ್ತೆ, ಸಾರಿಗೆ, ಹೆದ್ದಾರಿ ಸಚಿವಾಲಯ, ಆಯಕಟ್ಟಿನ ಸ್ಥಳಗಳಲ್ಲಿ ಅಳವಡಿಸಲಾಗುವ ಡಿಸ್ಪ್ಲೇ ಪಲಕಗಳಲ್ಲಿ ಮೂಡುವ ಸಂದೇಶದ ಮೂಲಕ ಎಚ್ಚರಿ ಸುವ ವ್ಯವಸ್ಥೆ ಯನ್ನು ದೇಶದ ಎಲ್ಲೆಡೆ ಅಳವಡಿಸಲು ನಿರ್ಧರಿಸಿತ್ತು. “ಸ್ಮಾರ್ಟ್ ಸ್ಪೀಡ್ ವಾರ್ನಿಂಗ್ ಸಿಸ್ಟಂ’ ತಂತ್ರಜ್ಞಾನವನ್ನು ಸಿದ್ಧಪಡಿಸಲು ಐಐಟಿ ಗುವಾಹಾಟಿ ಹಾಗೂ ಐಐಟಿ ಬಾಂಬೆಯ ತಜ್ಞರು ಶ್ರಮಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?
Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ