ಭಾರತದಲ್ಲಿ ಕಾಂಗ್ರೆಸ್, ಜಾಗತಿಕವಾಗಿ ಕಮ್ಯೂನಿಷ್ಟ್ ನೆಲಕಚ್ಚಲಿದೆ: ಶಾ
Team Udayavani, May 6, 2017, 4:46 PM IST
ನವದೆಹಲಿ:ತ್ರಿಪುರಾದಲ್ಲಿನ ಮುಂದಿನ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರದ ಗದ್ದುಗೆ ಏರಲಿದೆ ಎಂಬ ವಿಶ್ವಾಸವಿದೆ. ಆದರೆ ಕಮ್ಯೂನಿಷ್ಟ್ ಪಕ್ಷ ಜಾಗತಿಕವಾಗಿ ನೆಲಕಚ್ಚಲಿದೆ, ಅದೇ ರೀತಿ ಕಾಂಗ್ರೆಸ್ ಪಕ್ಷ ಭಾರತದಲ್ಲಿ ಸಂಪೂರ್ಣವಾಗಿ ನಶಿಸಿ ಹೋಗಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭವಿಷ್ಯ ನುಡಿದಿದ್ದಾರೆ.
ತ್ರಿಪುರಕ್ಕಾ ಶನಿವಾರದಿಂದ 2 ದಿನಗಳ ಕಾಲ ಭೇಟಿ ನೀಡಿದ್ದ ಶಾ ಸುದ್ದಿಗಾರರ ಜೊತೆ ಮಾತನಾಡುತ್ತ ಕಾಂಗ್ರೆಸ್ ಮತ್ತು ಕಮ್ಯೂನಿಷ್ಟ್ ವಿರುದ್ಧ ವಾಗ್ದಾಳಿ ನಡೆಸಿದರು.
ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತ್ರಿಪುರಾದಲ್ಲಿ ಕಮ್ಯೂನಿಷ್ಟ್ ಸರ್ಕಾರವನ್ನು ಅಧಿಕಾರದ ಗದ್ದುಗೆಯಿಂದ ಕೆಳಗಿಳಿಸುವ ನಿಟ್ಟಿನಲ್ಲಿ ಶಾ ಅವರು ಪರಿವರ್ತನ್ ಯಾತ್ರಾಗೆ ಚಾಲನೆ ನೀಡಲಿದ್ದಾರೆ ಎಂದು ವರದಿ ತಿಳಿಸಿದೆ. ತ್ರಿಪುರಾ ರಾಜ್ಯದಲ್ಲಿ 1993ರಿಂದ ಕಮ್ಯೂನಿಷ್ಟ್ ಪಕ್ಷ ನಿರಂತರವಾಗಿ ಸರ್ಕಾರ ನಡೆಸುತ್ತಾ ಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸ ಇಟ್ಟು, ಬೆಂಬಲ ನೀಡುವ ಮೂಲಕ ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿಯೂ ಜನರು ಬಿಜೆಪಿ ಸರ್ಕಾರವನ್ನೇ ಅಧಿಕಾರಕ್ಕೆ ತಂದಿದ್ದಾರೆ. ನನ್ನ ಪ್ರಕಾರ ಸ್ವಾತಂತ್ರ್ಯ ನಂತರ ನರೇಂದ್ರ ಮೋದಿ ಜನಪ್ರಿಯ ನಾಯಕರಾಗುತ್ತಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆದ ಚುನಾವಣೆಗಳಲ್ಲಿಯೂ ಜನರು ಮೋದಿ ಅವರನ್ನೇ ಬೆಂಬಲಿಸುವ ನಿಟ್ಟಿನಲ್ಲಿ ಬಿಜೆಪಿ ಪಕ್ಷವನ್ನು ಆಯ್ಕೆ ಮಾಡಿದ್ದಾರೆ ಎಂದು ಶಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ