ಕೋವಿಡ್ 19 : ಸೋಂಕು ನಿವಾರಣೆಗೆ ಏಳು ದಿನ ಲಕ್ಷದ್ವೀಪದಲ್ಲಿ ಲಾಕ್ ಡೌನ್ ವಿಸ್ತರಣೆ   


Team Udayavani, May 31, 2021, 9:22 PM IST

Complete shutdown in Lakshadweep extended by seven more days

ಕೊಚ್ಚಿ: ಕೋವಿಡ್ ಸೋಂಕಿನ ಪ್ರಮಾಣ ಹಠಾತ್ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಕ್ಷದ್ವೀಪದಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ವಿಸ್ತರಿಸಲಾಗಿದೆ.

ದ್ವೀಪಗಳಲ್ಲಿ ಹೆಚ್ಚುತ್ತಿರುವ ಕೋವಿಡ್ 19  ಸೋಂಕಿನ ಪ್ರಕರಣಗಳನ್ನು ಪರಿಗಣಿಸಿ ಲಕ್ಷದ್ವೀಪ ಆಡಳಿತವು ಇಂದಿನಿಂದ(ಸೋಮವಾರ, ಮೇ 31) ಏಳು ದಿನಗಳವರೆಗೆ ಸಂಪೂರ್ಣ ಲಾಕ್‌ ಡೌನ್ ನನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ : 50ಕ್ಕೂ ಹೆಚ್ಚು ಪಾಸಿಟಿವ್‌ ಪ್ರಕರಣಗಳಿರುವ ಗ್ರಾಮ 5ದಿನ ಲಾಕ್‌ಡೌನ್‌: ಉಡುಪಿ ಜಿಲ್ಲಾಧಿಕಾರಿ

ಕಳೆದ ಸೋಮವಾರ(ಮೇ 24)ದಂದು ಒಂದು ವಾರ ಸಂಪೂರ್ಣ ಲಾಕ್‌ ಡೌನ್ ನನ್ನು ಲಕ್ಷ ದ್ವೀಪ ಆಡಳಿತ  ಘೋಷಣೆ ಮಾಡಿ ನಿರ್ಬಂಧಗಳನ್ನು ಹೇರಿತ್ತು.

ದ್ವೀಪಗಳಲ್ಲಿ ಸೋಂಕು ಹೆಚ್ಚಾಗಿ ಕಣಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಲಕ್ಷದ್ವೀಪದ ಜಿಲ್ಲಾಧಿಕಾರಿ ಎಸ್. ಅಸ್ಕರ್ ಅಲಿ,  ಕಿಲ್ತಾನ್, ಚೆಟ್ಲಾಥ್, ಬಿತ್ರಾ, ಕದ್ಮಠ್ ಮತ್ತು ಅಗಟ್ಟಿ ಸೇರಿದಂತೆ ಐದು ದ್ವೀಪಗಳಲ್ಲಿ ರಾತ್ರಿ ಕರ್ಫ್ಯೂ ಘೋಷಣೆ ಮಾಡಿದ್ದಾರೆ.

ಲಾಕ್ ಡೌನ್ ನನ್ನು ವಿಸ್ತರಣೆ ಮಾಡಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ಸೋಂಕನ್ನು ನಿಯಂತ್ರಣ ಮಾಡಲು , ಜನರ ಅನಗತ್ಯ ಓಡಾಟವನ್ನು ನಿಲ್ಲಿಸಲು, ಕೋವಿಡ್ ಟೆಸ್ಟಿಂಗ್ ಸಾಮರ್ಥವನ್ನು ಏರಿಕೆ ಮಾಡಲು, ಗೃಹ ಸಚಿವಾಲಯದ ಕೋವಿಡ್ 19 ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಪ್ರಸ್ತುತ ಪರಿಸ್ಥಿತಿಯು ಅಗತ್ಯವಾಗಿದೆ ಎಂದವರು ಹೇಳಿದ್ದಾರೆ.

‘ನೀರು ಸರಬರಾಜು, ಅಗ್ನಿಶಾಮಕ, ವಿದ್ಯುತ್, ಪೊಲೀಸ್, ಆರೋಗ್ಯ, ವಿಪತ್ತು ನಿರ್ವಹಣೆ, ಹಡಗು ಸಾಗಣೆ, ಅತಿಥಿ ಗೃಹ, ಬಿಎಸ್‌ಎನ್‌ಎಲ್, ಕೋವಿಡ್-19 ಅನ್ನು ನಿರ್ವಹಿಸುವ ಜನರು, ಭಾರತೀಯ ನೌಕಾಪಡೆ ಮತ್ತು ಕರಾವಳಿ ಪಡೆ ಸೇರಿದಂತೆ ಹಲವು ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಇವರೆಲ್ಲರಿಗೂ ಗುರುತಿನ ಚೀಟಿ ಹಾಗೂ ಕೋವಿಡ್ ನೆಗೆಟಿವ್ ರಪೋರ್ಟ್ ಅಗತ್ಯ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇನ್ನು, ಲಾಕ್ ಡೌನ್ ನ ‘ನಿಯಮ ಉಲ್ಲಂಘನೆಯನ್ನು ಪ್ರಾಧಿಕಾರವು ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2015 ಮತ್ತು ಭಾರತೀಯ ದಂಡ ಸಂಹಿತೆಗೆ ಸಂಬಂಧಿತ ವಿಭಾಗಗಳ ಪ್ರಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು’ ಎಂದು ಹೇಳಿದೆ.

ದ್ವೀಪಗಳಲ್ಲಿ 2,006 ಸಕ್ರಿಯ ಪ್ರಕರಣಗಳಿವೆ. ಕವರಟ್ಟಿ, ಕಲ್ಪೇನಿ, ಆಂಡ್ರೊತ್, ಅಮಿನಿ ಮತ್ತು ಮಿನಿಕೋಯ್‌ ಗಳಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಳ ಇರುವುದರಿಂದ.  ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಪಾಸಿಟಿವಿಟಿ ರೇಟ್ ಶೇ.5ರೊಳಗೆ ಬರುವವರೆಗೆ ಲಾಕ್ ಡೌನ್ ಮುಂದುವರಿಸಲು ಸಿದ್ದರಾಮಯ್ಯ ಆಗ್ರಹ

ಟಾಪ್ ನ್ಯೂಸ್

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.