ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸುಳ್ಳಿನ ಕಂತೆ : ಯೋಗಿ ಆದಿತ್ಯನಾಥ್
Team Udayavani, Apr 2, 2019, 6:59 PM IST
ಗೋರಖ್ಪುರ, ಉತ್ತರ ಪ್ರದೇಶ : ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸುಳ್ಳಿನ ಕಂತೆ ಎಂದು ಹೇಳಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ರಾಷ್ಟ್ರೀಯ ಭದ್ರತೆಯನ್ನು ನಿರ್ವಹಿಸುವಲ್ಲಿ ವಿರೋಧ ಪಕ್ಷಗಳು ಹೊಣೆಗೇಡಿಗಳಂತೆ ವರ್ತಿಸುತ್ತಿವೆ ಎಂದು ಕಟುವಾಗಿ ಟೀಕಿಸಿದ್ದಾರೆ.
ಬಿಜೆಪಿ ಯುವ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು ಪುಲ್ವಾಮಾ ಉಗ್ರ ದಾಳಿ ಮತ್ತು ಅದಕ್ಕೆ ಪ್ರತೀಕಾರವಾಗಿ ಭಾರತೀಯ ವಾಯು ಪಡೆಯಿಂದ ನಡೆದಿದ್ದ ಪಾಕ್ ಬಾಲಾಕೋಟ್ ಉಗ್ರ ಶಿಬಿರಗಳ ಮೇಲಿನ ಬಾಂಬ್ ದಾಳಿಯನ್ನು ಉಲ್ಲೇಖೀಸಿದರು.
ವಿರೋಧ ಪಕ್ಷಗಳು ಈ ಬಗ್ಗೆ ನೀಡುತ್ತಿರುವ ದೇಶ ವಿರೋಧಿ ಹೇಳಿಕೆಗಳನ್ನು ಪಾಕಿಸ್ಥಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ಪರವಾಗಿ ಬಳಸಿಕೊಳ್ಳುತ್ತಿದೆ; ಈ ಬಗ್ಗೆ ಪ್ರತಿಪಕ್ಷಗಳು ದೇಶದ ಹಿತಾಸಕ್ತಿಯಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಇಂದು ಮಂಗಳವಾರ ಬಿಡುಗಡೆಗೊಳಿಸಿರುವ 55 ಪುಟಗಳ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತನ್ನ 55 ವರ್ಷಗಳ ಆಡಳಿತೆಯ ವೈಫಲ್ಯಗಳನ್ನು ವ್ಯಕ್ತಪಡಿಸಿದೆ ಎಂದು ಯೋಗಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆಯ ವಿಷಯದಲ್ಲಿ ಶೂನ್ಯ ಸಹನೆಯ ನೀತಿಯನ್ನು ಅನುಸರಿಸುತ್ತಿರುವುದು ದೇಶದ ಭದ್ರತಾ ಹಿತಾಸಕ್ತಿಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಯೋಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ