ಶಿವಸೇನೆ ಶಾಸಕರಿಗೆ ಬಿಜೆಪಿ ವತಿಯಿಂದ 50 ಕೋಟಿ ರೂ. ಆಫರ್: ವಾಡೆಟ್ಟಿವಾರ್
Team Udayavani, Nov 8, 2019, 8:00 PM IST
ಮುಂಬಯಿ: ಸದ್ಯ ಕರ್ನಾಟಕದಂತೆ ಮಹಾರಾಷ್ಟ್ರದ ರಾಜಕೀಯದಲ್ಲಿ ಕುದುರೆ ವ್ಯಾಪಾರ ನಡೆಯುತ್ತಿರುವ ಆರೋಪಗಳು ಕೇಳಿ ಬರಲಾರಂಭಿಸಿದೆ. ಶಿವಸೇನೆ ಶಾಸಕರನ್ನು ಖರೀಧಿಸಲು ಬಿಜೆಪಿಯು 50 ಕೋಟಿ ರೂ.ಗಳ ಆಫರ್ ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕ ವಿಜಯ್ ವಾಡೆಟ್ಟಿವಾರ್ ಹೇಳಿದ್ದಾರೆ.
ಕಾಂಗ್ರೆಸ್ನ ಕೆಲವು ಶಾಸಕರಿಗೆ ಬಿಜೆಪಿಯಿಂದ ಕರೆಗಳು ಬಂದಿದೆ. ನಮ್ಮ ಶಾಸಕರನ್ನು ವಿಭಜಿಸಲು ಬಿಜೆಪಿ ಪ್ರಯತ್ನಿಸಿದೆ. ಆದರೆ, ನಮ್ಮ ಶಾಸಕರನ್ನು ಸುರಕ್ಷಿತರಾಗಿದ್ದಾರೆ. ನಮ್ಮ ಯಾವುದೇ ಶಾಸಕರು ವಿಭಜನೆಯಾಗುವುದಿಲ್ಲ ಎಂದು ವಿಜಯ್ ವಾಡೆಟ್ಟಿವಾರ್ ವಿಶ್ವಾಸ ವ್ಯಕ್ತಪಡಿಸಿದರು.
ಇಗತ್ಪುರಿಯ ಕಾಂಗ್ರೆಸ್ ಶಾಸಕ ಹಿರ್ಮಾನ್ ಖೋಸ್ಕರ್ ಅವರು ಮಾಧ್ಯಮದ ಮೂಲಕ ನನಗೆ ಬಿಜೆಪಿಯಿಂದ ಕರೆ ಬಂದಿದೆ ಎಂದು ಮಾಹಿತಿ ನೀಡಿದರು. ಕೆಲವು ಕಾರ್ಯಕರ್ತರು ಮನೆಗೆ ಭೇಟಿ ನೀಡಲು ಬಂದಿದ್ದರು, ಆದರೆ ನಾನು ಮನೆಯಿಂದ ಹೊರಗೆ ಬಂದಿದ್ದೇನೆ. ಬಿಜೆಪಿ ನಮ್ಮನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಖೋಸ್ಕರ್ ಆರೋಪಿಸಿದರು. ಹೀಗಾಗಿ, ಬಿಜೆಪಿಯ ವತಿಯಿಂದ ಕರೆ ಬಂದರೆ, ಫೋನ್ಗಳನ್ನು ಟ್ಯಾಪ್ ಮಾಡಿ, ಅವರ ವಿರುದ್ಧ ಸಾಕ್ಷ್ಯಗಳನ್ನು ಸಂಗ್ರಹಿಸಿ ಬಹಿರಂಗಪಡಿಸಬೇಕು ಎಂದು ಶಾಸಕರಿಗೆ ಸೂಚನೆ ನೀಡಿದ್ದೇವೆ ಎಂದು ವಾಡೆಟ್ಟಿವಾರ್ ಹೇಳಿದರು. ನಮ್ಮ ಶಾಸಕರು ರಾಜ್ಯದಲ್ಲಿ ಸುರಕ್ಷಿತರಾಗಿದ್ದಾರೆ ಮತ್ತು ಯಾರನ್ನೂ ಜೈಪುರಕ್ಕೆ ಕಳುಹಿಸಲಾಗಿಲ್ಲ ಎಂದು ವಾಡೆಟ್ಟಿವಾರ್ ಹೇಳಿದ್ದಾರೆ.
ತಮ್ಮ ಕುಟುಂಬ ಸದಸ್ಯರೊಂದಿಗೆ ಕೆಲವು ಶಾಸಕರು ವೈಯಕ್ತಿಕವಾಗಿ ಜೈಪುರ ಪ್ರವಾಸ ಕೈಗೊಂಡಿರಬಹುದು. ಚುನಾವಣಾ ಅವಧಿಯಲ್ಲಿ ಎಲ್ಲ ಶಾಸಕರು ದಣಿದಿದ್ದರಿಂದ, ಅವರು ವಾತಾವರಣದ ಬದಲಾವಣೆಗಾಗಿ ಜೈಪುರಕ್ಕೆ ಹೋಗಿರಬಹುದು ಎಂದು ವಾಡೆಟ್ಟಿವಾರ್ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯು ಇತರ ಪಕ್ಷಗಳ ನಾಯಕರನ್ನು ವಿಭಜಿಸುವ ಕಾರ್ಯದಲ್ಲಿ ತೊಡಗಿತ್ತು. ಹಾಗೆಯೇ ಪ್ರಸಕ್ತ ನಮ್ಮ ಶಾಸಕರನ್ನು ವಿಭಜನೆ ಆದರೆ, ಅಂತಹ ಶಾಸಕರ ವಿರುದ್ಧ ಕ್ರಮಕೈಗೊಳ್ಳುವುದಾಗಿ ವಾಡೆಟ್ಟಿವಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
Hong Kong ಎವರೆಸ್ಟ್, ಎಂಡಿಎಚ್ ಮಸಾಲೆ ಬ್ಯಾನ್
MUST WATCH
ಹೊಸ ಸೇರ್ಪಡೆ
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ