G20; ಭಾರತ್ ಮಂಟಪ ಜಲಾವೃತವಾಗಿರುವ ವಿಡಿಯೋ ಹಂಚಿಕೊಂಡ ಕಾಂಗ್ರೆಸ್
2,700 ಕೋಟಿ ರೂ. ಒಂದೇ ಮಳೆಯಲ್ಲಿ ಕಳೆದುಹೋಗಿದೆ...
Team Udayavani, Sep 10, 2023, 4:30 PM IST
ಹೊಸದಿಲ್ಲಿ: ದೆಹಲಿಯಲ್ಲಿ ಎರಡು ದಿನಗಳ ಭಾರೀ ಮಳೆಯ ನಂತರ, ಭಾರತದ ಅಧ್ಯಕ್ಷತೆಯ ಜಿ 20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದ ಜಲಾವೃತವಾಗಿರುವ ದೃಶ್ಯಗಳು ವೈರಲ್ ಆಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಆಹ್ವಾನ ನೀಡದಿರುವ ಕುರಿತು ನಡೆಯುತ್ತಿರುವ ಸಂಘರ್ಷದ ನಡುವೆ ಕಾಂಗ್ರೆಸ್ ಪಕ್ಷಕ್ಕೆ ಈ ಸಮಸ್ಯೆ ಟೀಕೆಗೆ ಹೊಸ ಅಸ್ತ್ರವಾಗಿ ದೊರಕಿದೆ.
ಜಿ 20 ಶೃಂಗಸಭೆಯ ಸ್ಥಳವಾದ ಹೊಸದಾಗಿ ನಿರ್ಮಿಸಲಾದ ಭಾರತ್ ಮಂಟಪದ ಸ್ಥಳವೊಂದು ಜಲಾವೃತವಾಗಿರುವ ವಿಡಿಯೋವನ್ನು ಕಾಂಗ್ರೆಸ್ ಭಾನುವಾರ X ನಲ್ಲಿ ಹಂಚಿಕೊಂಡಿದ್ದು, ‘ಇದು ಮೋದಿ ಸರಕಾರದ ಅಡಿಯಲ್ಲಿ “ಟೊಳ್ಳು ಅಭಿವೃದ್ಧಿ” ಯನ್ನು ಬಹಿರಂಗಪಡಿಸಿದೆ ಎಂದು ಟೀಕಿಸಿದೆ.
खोखले विकास की पोल खुल गई
G20 के लिए भारत मंडपम तैयार किया गया। 2,700 करोड़ रुपए लगा दिए गए।
एक बारिश में पानी फिर गया… pic.twitter.com/jBaEZcOiv2
— Congress (@INCIndia) September 10, 2023
ವಿಡಿಯೋ ಲ್ಲಿ, ಜನರು ಜಲಾವೃತ ಕಾರಿಡಾರ್ನಲ್ಲಿ ನಡೆಯುತ್ತಿರುವುದು ಕಾಣಬಹುದಾಗಿದೆ. “ಟೊಳ್ಳು ಅಭಿವೃದ್ಧಿ ಬಹಿರಂಗವಾಗಿದೆ. ಭಾರತ್ ಮಂಟಪವನ್ನು ಜಿ 20 ಗಾಗಿ ಸಿದ್ಧಪಡಿಸಲಾಗಿದೆ. 2,700 ಕೋಟಿ ರೂ. ಒಂದೇ ಮಳೆಯಲ್ಲಿ ಕಳೆದುಹೋಗಿದೆ…” ಎಂದು ಕಾಂಗ್ರೆಸ್ ಪೋಸ್ಟ್ನಲ್ಲಿ ಬರೆದುಕೊಂಡಿದೆ.
ಪಕ್ಷದ ವಕ್ತಾರೆ ಸುಪ್ರಿಯಾ ಶ್ರೀನಾಥೆ ”ಯಂತ್ರಗಳ ಮೂಲಕ ನೀರು ತೆಗೆಯುವ ಪ್ರಯತ್ನಗಳು ನಡೆಯುತ್ತಿವೆ. ಮಳೆ ಕೂಡ ಅಂತಾರಾಷ್ಟ್ರೀಯ ರಾಷ್ಟ್ರವಿರೋಧಿ ಪಿತೂರಿಯ ಭಾಗವಾಗಿದೆ. “ಇಷ್ಟು ಹಣ ಕದ್ದು ಇಂತಹ ಕಳಪೆ ಕೆಲಸ ಮಾಡಿದ ಭ್ರಷ್ಟರು ಯಾರು?” ಎಂದು ಎಕ್ಸ್ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.
ರಾಜಸ್ಥಾನದ ಟೋಂಕ್ ಜಿಲ್ಲೆಯ ನಿವಾಯ್ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಜಲಾವೃತವಾಗಿರುವ ವಿಚಾರ ಪ್ರಸ್ತಾವಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜಿ20 ಶೃಂಗಸಭೆಯು ಭಾರತ್ ಮಂಟಪದಲ್ಲಿ ಶನಿವಾರ ಆರಂಭಗೊಂಡಿದ್ದು, ಭಾನುವಾರ ಮುಕ್ತಾಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ