ಕಾಂಗ್ರೆಸ್, ಚೀನಾದ ಕಮ್ಯುನಿಷ್ಟ್ ಪಕ್ಷದಿಂದ ಫಂಡ್ ಪಡೆದಂತೆ ವರ್ತಿಸುತ್ತಿದೆ : ನೂಪುರ ಶರ್ಮಾ
Team Udayavani, Aug 3, 2021, 1:31 PM IST
ನವ ದೆಹಲಿ : ಭಾರತ ಹಾಗೂ ಚೀನಾ ಗಡಿ ವಿವಾಧಗಳಿಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆ(ಸೋಮವಾರ, ಆಗಸ್ಟ್ 2) ಮೋದಿ ಹಾಗೂ ಮತ್ತವರ ಗುಲಾಮರು ದೇಶ ಸಾವಿರಾರು ಕಿಲೋಮೀಟರ್ ನಷ್ಟು ಭೂಮಿಯನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ ಎಂಬ ಹೇಳಿಕೆಗೆ ಇಂದು(ಆಗಸ್ಟ್ 03) ಬಿಜೆಪಿ ತಿರುಗೇಟು ನೀಡಿದೆ.
ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ ನಾಯಕಿ ನೂಪುರ ಶರ್ಮಾ, ಕಾಂಗ್ರೆಸ್ ಪಕ್ಷ ಬೀಜಿಂಗ್ ನ ವಕ್ತಾರನಂತೆ ವರ್ತಿಸುತ್ತಿದೆ. ಮಾತ್ರವಲ್ಲದೇ, ಚೀನಾದ ಕಮ್ಯುನಿಷ್ಟ್ ಪಕ್ಷದಿಂದ ಫಂಡ್ ಪಡೆದಂತೆ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಇದನ್ನೂ ಓದಿ : ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?
ರಾಹುಲ್ ಗಾಂಧಿಯವರಿಗೆ ಜ್ಞಾನದ ಕೊರತೆಯಿದೆ. ಕಾಂಗ್ರೆಸ್ ಆಡಳಿತದಲ್ಲಿ 43,000 ಚದರ ಕಿಲೋಮೀಟರ್ ಭೂಮಿಯನ್ನು ಚೀನಾಗೆ ಹಸ್ತಾಂತರಿಸಲಾಗಿತ್ತು. ಯಾರು ‘ಹಿಂದಿ-ಚಿನಿ, ಭಾಯ್-ಭಾಯಿ ( ಭಾರತೀಯರು ಮತ್ತು ಚೀನಿಯರು ಸಹೋದರರಂತೆ)? ಎಂದು ಹೇಳಿದ್ದು ನೆನಪಿಲ್ಲವೇ..? “ಕಾಂಗ್ರೆಸ್ ಪಕ್ಷವು ಚೀನಾದ ಕಮ್ಯುನಿಸ್ಟ್ ಪಕ್ಷದಿಂದ ದೇಣಿಗೆ ಪಡೆಯುತ್ತದೆ. ಹಾಗಾಗಿ ಹೀಗೆ ಸುಖಾಸುಮ್ಮನೆ ಬಿಜೆಪಿ ವಿರುದ್ಧ ತಿರುಗಿ ಬೀಳುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಪಕ್ಷ ಕೋಟ್ಯಾಂತರ ರೂಪಾಯಿಗಳನ್ನು ಚೀನಾ ಸರಕಾರದಿಂದ ಪಡೆದಿದೆ. ರಾಜೀವ್ ಗಾಂಧಿ ಅಧಿಕಾರದಲ್ಲಿದ್ದಾಗ, ಕಾಂಗ್ರೆಸ್ ಪಕ್ಷ ಚೀನಾದ ಕಮ್ಯುನಿಷ್ಟ್ ಪಕ್ಷದಿಂದ ಫಂಡ್ ಪಡೆಯುತ್ತಿತ್ತು. ಕಾಂಗ್ರೆಸ್ ಪಕ್ಷ ದೇಶಕ್ಕಾಗಿ ದುಡಿಯುತ್ತಿದೆಯೋ ಅಥವಾ ಭಾರತದಲ್ಲಿದ್ದು, ಚೀನಕ್ಕಾಗಿ ಕೆಲಸ ಮಾಡುತ್ತಿದೆಯೋ ಎನ್ನುವುದು ಅರ್ಥವಾಗುತ್ತಿಲ್ಲ ಎಂದಿದ್ದಾರೆ.
ರಾಹುಲ್ ಗಾಂಧಿ, ನಿನ್ನೆ ಕೇಂದ್ರ ಸರ್ಕಾರದ ವಿರುದ್ಧ, ದೇಶದ ಸಾವಿರಾರು ಕಿಲೋಮೀಟರ್ ಭೂಮಿಯನ್ನು ಚೀನಾಗೆ ಬಿಟ್ಟುಕೊಟ್ಟಿದೆ ಎಂದು ಆರೋಪಿಸಿದ್ದರು.
ಇದನ್ನೂ ಓದಿ : ರಾಜ್ಯಸಭಾ ಸ್ಥಾನದ ಆಫರ್ ರಿಜೆಕ್ಟ್ ಮಾಡಿದರೆ ನಟ ಸೋನು ಸೂದ್ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ