ರಫೇಲ್‌ ವಿವಾದ: ಬಹಿರಂಗ ಚರ್ಚೆ, ಕೂಲಂಕಷ ತನಿಖೆಗೆ ಕಾಂಗ್ರೆಸ್‌ ಆಗ್ರಹ


Team Udayavani, Aug 25, 2018, 7:16 PM IST

chidambaram-press-700.jpg

ಹೊಸದಿಲ್ಲಿ : ಸುಮಾರು 16,000 ಕೋಟಿ ರೂ. ಲಂಚ ಹಗರಣ ನಡೆದಿದೆ ಎಂದು ಆರೋಪಿಸಲಾಗಿರುವ ರಫೇಲ್‌ ಫೈಟರ್‌ ಜೆಟ್‌ ವಿಮಾನಗಳ ವಿವಾದಾತ್ಮಕ ವಹಿವಾಟಿನ ಬಗ್ಗೆ ಬಹಿರಂಗ ಚರ್ಚೆ ನಡೆಯಬೇಕು; ಫ್ರಾನ್ಸ್‌ ಜತೆಗಿನ ಈ ವ್ಯವಹಾರದಲ್ಲಿ ನಡೆದಿರುವ ರಹಸ್ಯ ವಿದ್ಯಮಾನಗಳ ಬಗ್ಗೆ ಕೂಲಂಕಷ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್‌ ಪಕ್ಷ ಇಂದು ಶನಿವಾರ ಮತ್ತೆ ಪ್ರಧಾನಿ ನರೇಂದ್ರ ಮೋದಿ ಸರಕಾರವನ್ನು ಆಗ್ರಹಿಸಿದೆ.

ಫ್ರಾನ್ಸ್‌ ಜತೆಗಿನ ರಫೇಲ್‌ ಫೈಟರ್‌ ಜೆಟ್‌ ವ್ಯವಹಾರವನ್ನು ಹಿಂದಿನ ಯುಪಿಎ ಸರಕಾರ ಕುದುರಿಸಿದ್ದಾಗಿನ ದರಕ್ಕಿಂತ ಮೂರು ಪಟ್ಟು ಅಧಿಕ ದರದಲ್ಲಿ ಇದೇ ವಹಿವಾಟನ್ನು ಮೋದಿ ಸರಕಾರ, ರಕ್ಷಣಾ ಖರೀದಿ ಪ್ರಕ್ರಿಯೆಗಳನ್ನು ಕಡೆಗಣಿಸಿ, ಹಿರಿಯ ಸಚಿವರನ್ನು ಕತ್ತಲಲ್ಲಿರಿಸಿ, ಶಂಕಾಸ್ಪದವಾಗಿ ಕುದುರಿಸಿದೆ ಎಂದು ಕಾಂಗ್ರೆಸ್‌ ಪಕ್ಷ ಆರೋಪಿಸಿದೆ. 

ಕೋಲ್ಕತಾದಲ್ಲಿ ಇಂದು ಸುದ್ದಿ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್‌ನ ಹಿರಿಯ ನಾಯಕ ಪಿ ಚಿದಂಬರಂ ಅವರು “ಹಿಂದಿನ ಯುಪಿಎ ಸರಕಾರ ಅಂತಿಮಗೊಳಿಸಿದ್ದ ದರಕ್ಕಿಂತ ಮೂರು ಪಟ್ಟ ಅಧಿಕ ದರಲ್ಲಿ ಮೋದಿ ಸರಕಾರ ರಫೇಲ್‌ ಫೈಟರ್‌ ಜೆಟ್‌ ಖರೀದಿ ವ್ಯವಹಾರ ನಡೆಸಿರುವುದು ಶಂಕಾಸ್ಪದವಾಗಿದೆ’ ಎಂದು ಆರೋಪಿಸಿದರು.

“ನಮ್ಮ ದೃಷ್ಟಿಯಲ್ಲಿ ಇದೊಂದು ಗಂಭೀರ ವಿಷಯವಾಗಿದೆ; ಈ ಬಗ್ಗೆ  ಸಾರ್ವಜನಿಕ ಚರ್ಚೆ ನಡೆಯುವ ಅಗತ್ಯವಿದೆ; ಕೂಲಂಕಷ ತನಿಖೆ ನಡೆಯುವ ಅಗತ್ಯವೂ ಇದೆ; ಆದುದರಿಂದಲೇ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಪಕ್ಷದವರು ಈ ವಿಷಯವನ್ನು ಸದನದ ಒಳಗೂ ಹೊರಗೂ ಎತ್ತಿದ್ದಾರೆ’ ಎಂದು ಚಿದಂಬರಂ ಅವರು ಪಶ್ಚಿಮ ಬಂಗಾಲ ಪ್ರದೇಶ ಕಾಂಗ್ರೆಸ್‌ ಪ್ರಧಾನ ಕಾರ್ಯಾಲಯದಲ್ಲಿ ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು. 

ಯುಪಿಎ ಸರಕಾರ ಫ್ರಾನ್ಸ್‌ ಜತೆಗೆ 126 ರಫೇಲ್‌ ಫೈಟರ್‌ ಜೆಟ್‌ಗಳ ಪೂರೈಕೆಗೆ ಒಪ್ಪಂದ ಮಾಡಿಕೊಂಡಿತ್ತು. ಆ ಪ್ರಕಾರ ಮೊದಲ 18 ಯುದ್ಧ ವಿಮಾನಗಳನ್ನು ಹಾರಾಟ ಸ್ಥಿತಿಯಲ್ಲಿ ಪೂರೈಸುವುದು, ಉಳಿದ 108 ವಿಮಾನಗಳನ್ನು ಬೆಂಗಳೂರಿನ ಹಿಂದುಸ್ಥಾನ್‌ ಏರೋನ್ಯಾಟಿಕ್ಸ್‌ ಲಿಮಿಟೆಡ್‌ನ‌ಲ್ಲಿ ತಂತ್ರಜ್ಞಾನ ವರ್ಗಾವಣೆ ನೆಲೆಯಲ್ಲಿ ಉತ್ಪಾದಿಸುವುದು ಒಪ್ಪಂದದ ಭಾಗವಾಗಿತ್ತು ಎಂದು ಚಿದಂಬರಂ ಹೇಳಿದರು.  

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.