Congress ಬ್ಯಾಂಕ್ ಖಾತೆ ನಿಷ್ಕ್ರಿಯ: ತಡೆಗೆ ಐಟಿ ನ್ಯಾಯಮಂಡಳಿ ನಕಾರ
Team Udayavani, Mar 9, 2024, 12:49 AM IST
ಹೊಸದಿಲ್ಲಿ: ಆದಾಯ ತೆರಿಗೆ ಇಲಾಖೆ ವಿಧಿಸಿರುವ 210 ಕೋಟಿ ರೂ. ದಂಡ ಹಾಗೂ ಬ್ಯಾಂಕ್ ಖಾತೆಗಳ ಮೇಲೆ ವಿಧಿಸಿರುವ ನಿರ್ಬಂಧ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಕಾಂಗ್ರೆಸ್ ಸಲ್ಲಿಸಿದ್ದ ಮನವಿಯನ್ನು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ಶುಕ್ರವಾರ ತಿರಸ್ಕರಿಸಿದೆ.
ಕಾಂಗ್ರೆಸ್ ಪರವಾಗಿ ಹಾಜರಾಗಿದ್ದ ವಕೀಲ ವಿವೇಕ್ ತಂಖಾ, ಈ ಆದೇಶವನ್ನು ಕನಿಷ್ಠ 10 ದಿನ ಗಳವರೆಗಾದರೂ ತಡೆ ಹಿಡಿಯಬೇಕು. ಇದರಿಂದ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪಕ್ಷಕ್ಕೆ ಅವ ಕಾಶ ದೊರೆಯುತ್ತದೆ ಎಂದು ವಾದಿಸಿದರು. ಆದರೆ ಈ ರೀತಿಯ ಆದೇಶ ನೀಡಲು ಸಾಧ್ಯವಿಲ್ಲ ಎಂದು ಹೇಳಿದ ನ್ಯಾಯಮಂಡಳಿ ಐಟಿ ಇಲಾ ಖೆಯ ಆದೇಶಕ್ಕೆ ತಡೆ ನೀಡಲು ನಿರಾಕರಿಸಿತು.
ಏನಿದು ಪ್ರಕರಣ: ತೆರಿಗೆ ವಂಚನೆ ಮಾಡಲಾಗಿದೆ ಎಂಬ ಕಾರಣಕ್ಕೆ ಆದಾಯ ತೆರಿಗೆ ಇಲಾಖೆ ನಮ್ಮ ಬ್ಯಾಂಕ್ ಖಾತೆಗಳನ್ನು ನಿಷ್ಕ್ರಿಯಗೊಳಿಸಿದೆ ಎಂದು ಫೆ.16ರಂದು ಕಾಂಗ್ರೆಸ್ ಆರೋಪಿಸಿತ್ತು. ಆದರೆ ಈ ಬಗ್ಗೆ ಐಟಿ ಇಲಾಖೆ ಅಧಿಕೃತ ಆದೇಶ ಹೊರಡಿಸದಿದ್ದರೂ, ತೆರಿಗೆ ವಂಚನೆ ಮಾಡಿದರೆ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಸಹಜ ಪ್ರಕ್ರಿಯೆ ಎಂದು ಹೇಳಿತ್ತು. ಇದಾದ 2 ದಿನದ ಬಳಿಕ ತಮ್ಮ ಖಾತೆಯಿಂದ 65 ಕೋಟಿ ರೂ.ಗಳನ್ನು ಐಟಿ ಇಲಾಖೆ ವಿತ್ಡ್ರಾ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !