ಗಾಂಧಿ ಹತ್ಯೆಯಿಂದ ಲಾಭವಾಗಿರುವುದು ಕಾಂಗ್ರೆಸಿಗೆ: ಉಮಾ ಭಾರತಿ
Team Udayavani, Oct 14, 2017, 9:40 AM IST
ಹೊಸದಿಲ್ಲಿ: ಮಹಾತ್ಮಾ ಗಾಂಧಿ ಹತ್ಯೆಯಿಂದ ಲಾಭವಾಗಿರುವುದು ಕಾಂಗ್ರೆಸಿಗೆ ಎಂದು ಕೇಂದ್ರ ಸಚಿವೆ ಉಮಾ ಭಾರತಿ ಇನ್ನೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯ ಸಿಕ್ಕಿದ ಬಳಿಕ ಕಾಂಗ್ರೆಸ್ ವಿಸರ್ಜನೆಯಾಗಬೇಕೆಂದು ಗಾಂಧೀಜಿ ಬಯಸಿದ್ದರು, ಅವರು ಆ ಕುರಿತು ಘೋಷಣೆಯನ್ನೂ ಮಾಡಿದ್ದರು. ಆದರೆ ಹತ್ಯೆಯಾದ ಕಾರಣ ಗಾಂಧೀಜಿ ಆಶಯ ಈಡೇರದೆ ಕಾಂಗ್ರೆಸ್ಗೆ ಲಾಭವಾಯಿತು ಎಂದಿದ್ದಾರೆ.
ಮಹಾತ್ಮಾ ಗಾಂಧಿ ಹತ್ಯಾ ತನಿಖೆಯನ್ನು ಮರುಪ್ರಾರಂಭಿಸಲು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿರುವ ಕುರಿತು ಪ್ರತಿಕ್ರಿಯಿಸಿದ ಉಮಾ ಭಾರತಿ , ನಿಜವಾಗಿ ನೋಡಿದರೆ ಗಾಂಧಿ ಹತ್ಯೆಯಿಂದ ಆರ್ಎಸ್ಎಸ್ ಮತ್ತು ಬಿಜೆಪಿಗೆ ಹೆಚ್ಚು ಹಾನಿಯಾಗಿದೆ. ನಾವು ಜೈಲಿಗೆ ಹೋದೆವು ಹಾಗೂ ಈಗಲೂ ನಾವು ಅದರ ಪರಿಣಾಮವನ್ನು ಅನುಭವಿಸುತ್ತಿದ್ದೇವೆ. ದೇಶಕ್ಕೂ ಭಾರೀ ಹಾನಿಯಾಗಿದೆ. ಆದರೆ ಕಾಂಗ್ರೆಸ್ ಭರಪೂರ ಲಾಭ ಮಾಡಿತು. ವಿಸರ್ಜನೆಯಾಗಬೇಕಾದ ಪಕ್ಷ 6 ದಶಕ ಅಧಿಕಾರ ಅನುಭವಿಸಿತು ಎಂದಿದ್ದಾರೆ. ಗಾಂಧಿ ದೇಹದಲ್ಲಿದ್ದ ನಾಲ್ಕನೇ ಗುಂಡಿನ ಕುರಿತು ತನಿಖೆ ನಡೆಸಲು ಆಗ್ರಹಿಸಿ ಪಂಕಜ್ ಫಡ್ನಿಸ್ ಸುಪ್ರೀಂ ಕೋರ್ಟಿಗೆ ಮನವಿ ಮಾಡಿದ್ದು ಈ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ