ತೆಲಂಗಾಣ: ಮತಗಟ್ಟೆಯೊಳಗೆ ಕಾಂಗ್ರೆಸ್ ಲಂಚ: ಓವೈಸಿ ಆರೋಪ
Team Udayavani, Dec 7, 2018, 12:17 PM IST
ಹೈದರಾಬಾದ್ : 2018ರ ತೆಲಂಗಾಣ ಅಸೆಂಬ್ಲಿ ಚುನಾವಣೆ ಸಂಬಂಧ ಇಂದು ಶುಕ್ರವಾರ ಮತದಾನ ನಡೆಯುತ್ತಿದ್ದು ಎಐಎಂಐಎಂ ನ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಅವರು ಕಾಂಗ್ರೆಸ್ ಪಕ್ಷ ಮತಗಟ್ಟೆಯೊಳಗೆ ಮತದಾರರಿಗೆ ಲಂಚ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ನ ನಂಪಳ್ಳಿ ಅಭ್ಯರ್ಥಿ ಮತಗಟ್ಟೆಯೊಳಗೆ ಮತದಾರರಿಗೆ ಲಂಚ ನೀಡುತ್ತಿದ್ದಾರೆ ಎಂದು ಓವೈಸಿ ತಮ್ಮ ಟ್ವೀಟ್ ನಲ್ಲಿ ಆರೋಪಿಸಿದ್ದಾರೆ. ಕಾಂಗ್ರೆಸ್ ನಿಂದ ಈ ಬಗ್ಗೆ ಈ ತನಕ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಚುನಾವಣೆಗಳಲ್ಲಿ ಹಣ ಮತ್ತು ಹೆಂಡ ವ್ಯಾಪಕವಾಗಿ ಹರಿಯುವುದು ದೇಶದ್ಯಾಂತ ಸಾಮಾನ್ಯ ಸಂಗತಿಯಾಗಿರುವ ಹೊರತಾಗಿಯೂ ಶಾಂತಿಯುತ ಮತ್ತು ಶಿಸ್ತುಬದ್ಧ ಚುನಾವಣೆಗಳು ನಡೆಯುತ್ತಿರುವುದು ಸಮಾಧಾನದ ಸಂಗತಿಯಾಗಿದೆ.
ಶಾಂತಿಯುತವಾಗಿ ನಡೆಯತ್ತಿರುವ ತೆಲಂಗಾಣ ಮತದಾನ ಪ್ರಕ್ರಿಯೆಯಲ್ಲಿ ಇಂದು 2.80 ಕೋಟಿ ಮತದಾರರು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಿದ್ದಾರೆ. ಬೆಳಗ್ಗೆ 7 ಗಂಟೆಗೇ ಮತದಾನ ಆರಂಭವಾಗಿದ್ದು ಸಂಜೆ 5 ಗಂಟೆಗೆ ಮುಗಿಯಲಿದೆ.
ರಾಜ್ಯದಲ್ಲಿ ಟಿಆರ್ಎಸ್, ಕಾಂಗ್ರೆಸ್ ನೇತೃತ್ವದ ವಿಪಕ್ಷ ಮೈತ್ರಿ ಕೂಟ ಮತ್ತು ಬಿಜೆಪಿ ನಡುವೆ ತ್ರಿಕೋಣ ಸ್ಪರ್ಧೆ ನಡೆಯುತ್ತಿದೆ. ಕಣದಲ್ಲಿ 1,821 ಅಭ್ಯರ್ಥಿಗಳಿದ್ದಾರೆ. ರಾಜ್ಯದಲ್ಲಿ ಒಟ್ಟು 119 ಅಸೆಂಬ್ಲಿ ಸೀಟುಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ