ರಾಹುಲ್ ಮೆಂಟಲೀ ಅನ್ಫಿಟ್ ಎಂದ ಬರ್ಖಾ ಕಾಂಗ್ರೆಸ್ನಿಂದ ಉಚ್ಚಾಟನೆ
Team Udayavani, Apr 21, 2017, 12:08 PM IST
ಹೊಸದಿಲ್ಲಿ : ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷವನ್ನು ನಡೆಸಲು ಮೆಂಟಲೀ ಅನ್ಫಿಟ್ ಎಂದು ದೂಷಿಸಿದ ಒಂದು ದಿನದ ತರುವಾಯ ದಿಲ್ಲಿ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಬರ್ಖಾ ಸಿಂಗ್ ಶುಕ್ಲಾ ಅವರನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ.
ದಿಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಪದಕ್ಕೆ ನಿನ್ನೆ ಗುರುವಾರ ರಾಜೀನಾಮೆ ನೀಡಿದ್ದ ಬರ್ಖಾ ಅವರು ಪಕ್ಷವನ್ನು ತೊರೆದಿರಲಿಲ್ಲ. ಆದರೆ ಇಂದು ಬೆಳಗ್ಗೆ ಕಾಂಗ್ರೆಸ್ ಬರ್ಖಾ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಆರು ವರ್ಷಗಳ ಅವಧಿಗೆ ಪಕ್ಷದಿಂದಲೇ ಉಚ್ಚಾಟಿಸಿತು.
ಮಾಜಿ ಸಚಿವ ನರೇಂದ್ರ ನಾಥ್ ಅವರ ಅಧ್ಯಕ್ಷತೆಯ ರಾಜ್ಯ ಘಟಕದ ಶಿಸ್ತು ಸಮಿತಿಯು ಇಂದು ಬರ್ಖಾ ಅವರನ್ನು ಪಕ್ಷದಿಂದ ಉಚ್ಚಾಟಿಸುವ ನಿರ್ಧಾರವನ್ನು ಕೈಗೊಂಡಿತು.
ಡಿಪಿಸಿಸಿ ಶಿಸ್ತು ಸಮಿತಿಯು ತನ್ನ ಸಭೆಯಲ್ಲಿ ಬರ್ಖಾ ಸಿಂಗ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಂಡಿತು ಎಂದು ಪಕ್ಷದ ಪ್ರಕಟನೆ ತಿಳಿಸಿದೆ. ಎಂಸಿಡಿ ಚುನಾವಣೆಗೆ ಕೆಲವೇ ದಿನಗಳು ಇರುವಾಗ ನಡೆದಿರುವ ಈ ಉಚ್ಚಾಟನೆ ಕಾಂಗ್ರೆಸ್ಗೆ ಮಾರಕವಾಗಲಿದೆ ಎಂದು ತಿಳಿಯಲಾಗಿದೆ.
ಈ ಉಚ್ಚಾಟನಾ ಕ್ರಮಕ್ಕೆ ಪ್ರತಿಕ್ರಿಯಿಸಿರುವ ಬರ್ಖಾ ಸಿಂಗ್ ಅವರು ಟ್ವೀಟ್ ಮಾಡಿ ‘#RahulGandhiMuktCongress’ ಎನ್ನುವುದು ಹೊಸ ಘೋಷಣೆಯಾಗಲಿದೆ ಎಂದು ಹೇಳಿದ್ದಾರೆ.
“ನಾನು ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ; ಪಕ್ಷದೊಳಗೆ ಇದ್ದುಕೊಂಡೇ ನನ್ನ ಹೋರಾಟವನ್ನು ಮುಂದುವರಿಸುವೆ; ನನ್ನ ಕಾನೂನುಬಾಹಿರ ಉಚ್ಚಾಟನೆಯನ್ನು ಪ್ರಶ್ನಿಸಿ ನಾನು ಕೋರ್ಟಿಗೆ ಹೋಗುವೆ’ ಎಂದು ಬರ್ಖಾ ಗುಡುಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ