ಸೋನ್ ಭದ್ರಾ ಭೇಟಿಗೆ ಪ್ರಿಯಾಂಕಾಗೆ ಅಧಿಕಾರಿಗಳ ತಡೆ
Team Udayavani, Jul 19, 2019, 2:05 PM IST
ವಾರಣಾಸಿ: ಭೂವಿವಾದಕ್ಕೆ ಸಂಬಂಧಿಸಿದಂತೆ ಗ್ರಾಮ ಮುಖ್ಯಸ್ಥನ ಗುಂಡೇಟಿಗೆ ಬಲಿಯಾದ 10 ವ್ಯಕ್ತಿಗಳ ಕುಟುಂಬ ಸದಸ್ಯರನ್ನು ಭೇಟಿಯಾಗುವ ಉದ್ದೇಶದಿಂದ ಸೋನ್ ಭದ್ರಾಗೆ ಹೊರಟಿದ್ದ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಧ್ರಾ ಅವರಿಗೆ ಗ್ರಾಮಕ್ಕೆ ಪ್ರವೆಶಿಸದಂತೆ ಮಾರ್ಗ ಮಧ್ಯದಲ್ಲೇ ಅಧಿಕಾರಿಗಳು ತಡೆಯೊಡ್ಡಿರುವ ಘಟನೆ ವರದಿಯಾಗಿದೆ. ಇದಕ್ಕೂ ಮೊದಲು ವಾರಣಾಸಿಗೆ ತೆರಳಿ ಪ್ರಿಯಾಂಕಾ ಗಾಂಧಿ ವಾಧ್ರಾ ಅವರು ಈ ದುರ್ಘಟನೆಯಲ್ಲಿ ಗಾಯಗೊಂಡವರನ್ನು ಭೇಟಿಯಾಗಿ ಅವರ ಕ್ಷೇಮ ವಿಚಾರಿಸಿದರು.
ಪ್ರಿಯಾಂಕಾ ಅವರು ಪ್ರಯಾಣಿಸುತ್ತಿದ್ದ ವಾಹನವನ್ನು ಸ್ಥಳೀಯ ಅಧಿಕಾರಿಗಳು ಮಿರ್ಝಾಪುರದ ಬಳಿ ನಾರಾಯಣಪುರ ಎಂಬಲ್ಲಿ ತಡೆದು ನಿಲ್ಲಿಸಲಾಯಿತು. ಅಧಿಕಾರಿಗಳ ಈ ಕ್ರಮವನ್ನು ವಿರೋಧಿಸಿ ಪ್ರಿಯಾಂಕ ಅವರು ತಮ್ಮ ವಾಹನದಿಂದ ಇಳಿದು ಬೆಂಬಲಿಗರೊಂದಿಗೆ ಸ್ಥಳದಲ್ಲೇ ಧರಣಿಗೆ ಕೂತರು.
ಈ ಸಂದರ್ಭದಲ್ಲಿ ಯಾವುದೇ ರೀತಿಯ ಘರ್ಷಣೆಗಳನ್ನು ತಪ್ಪಿಸುವ ಸಲುವಾಗಿ ಇಲ್ಲಿನ ಪೊಲೀಸ್ ಅಧೀಕ್ಷಕರು ಬಿಗು ಪೊಲೀಸ್ ಬಂದೋಬಸ್ತ್ ನಿಯೋಜಿಸಿದ್ದರು.
ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬದವರನ್ನು ಭೇಟಿಯಾಗಲು ನಾಲ್ವರೊಂದಿಗೆ ತೆರಳಬಹುದೆಂಬ ಭರವಸೆಯನ್ನು ನನಗೆ ಸ್ಥಳೀಯಾಡಳಿತವು ಅನುಮತಿ ನೀಡಿತ್ತು. ಆದರೆ ಇದೀಗ ನಮ್ಮನ್ನು ಅಲ್ಲಿಗೆ ಹೋಗದಂತೆ ತಡೆಯಲಾಗುತ್ತಿದೆ ಎಂದು ಪ್ರಿಯಾಂಕ ಅವರು ಸುದ್ದಿಗಾರರಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ