ಮತಯಂತ್ರ: ಕಾಂಗ್ರೆಸ್ ಅಪಸ್ವರ
Team Udayavani, Mar 18, 2018, 6:00 AM IST
ಹೊಸದಿಲ್ಲಿ: ವಿದ್ಯುನ್ಮಾನ ಮತ ಯಂತ್ರಗಳ ಬಗ್ಗೆ ಕಾಂಗ್ರೆಸ್ ಅಧಿವೇಶನದಲ್ಲೂ ಅಪಸ್ವರ ಕೇಳಿಬಂತು.”ಮುಂದಿನ ದಿನಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳು ಬೇಡವೇ ಬೇಡ. ಅದರ ಬದಲಾಗಿ ಮತ ಪತ್ರದ ವಿಧಾನವನ್ನು ಪುನಃ
ಜಾರಿಗೊಳಿಸಬೇಕು’ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ. ಈ ಮೂಲಕ ಮತ್ತೆ ಇವಿಎಂ “ರಾಗ’ಕ್ಕೆ ಕಾಂಗ್ರೆಸ್ ಅಂಟಿ ಕೊಳ್ಳುತ್ತಿರುವುದು ಸ್ಪಷ್ಟ. ಜತೆಗೆ ಲೋಕಸಭೆ ಮತ್ತು ವಿಧಾನಸಭೆಗೆ ಒಂದೇ ಬಾರಿ ಚುನಾವಣೆ ನಡೆಸುವ ಬಿಜೆಪಿ ಪ್ರಸ್ತಾವ ವನ್ನೂ ವಿರೋಧಿಸುವುದಾಗಿ ಹೇಳಿದ್ದಾರೆ.
“ಇವೆಲ್ಲದರ ಸಾಧಕ-ಬಾಧಕಗಳನ್ನು ಅರಿತು ತೀರ್ಮಾನ ಕೈಗೊಳ್ಳಬೇಕು. ಇದರಿಂದ ಹಲವು ರೀತಿಯ ಪರಿಣಾಮ ಉಂಟಾಗುವ ಸಾಧ್ಯತೆ ಇರುತ್ತದೆ. ಈ ಎರಡೂ ವಿಚಾರಗಳಿಗೆ ಗೊತ್ತುವಳಿ ಅಂಗೀಕರಿಸಲಾಗಿದೆ. ಧರ್ಮ ಮತ್ತು ರಾಜಕೀಯವನ್ನು ಮಿಶ್ರಗೊಳಿಸಬಾರದು. ಆರೆಸ್ಸೆಸ್ ಮತ್ತು ಬಿಜೆಪಿ ಜನರ ಭಾವನೆ ಗಳನ್ನು ಕೆರಳಿಸಲು ಧರ್ಮವನ್ನು ಬಳಸಿ ಕೊಳ್ಳುತ್ತಿವೆ’ ಎಂದಿದ್ದಾರೆ. ಧರ್ಮವನ್ನು ರಾಜಕೀಯಕ್ಕಾಗಿ ಬಳಸುತ್ತಿದೆ ಎಂದು ಗೊತ್ತುವಳಿಯಲ್ಲಿ ಆರೋಪಿಸಲಾಗಿದೆ ಎನ್ನುವ ಬಗ್ಗೆಯೂ ಈ ವೇಳೆ ಮಾಹಿತಿ ನೀಡಿದರು.
“ಮೋದಿ ನೇತೃತ್ವದ ಸರಕಾರದಿಂದ ದೇಶ ಬಳಲಿದೆ. ಭಾರತವನ್ನು ರಕ್ಷಿಸಲು ಕಾಂಗ್ರೆಸ್ನಿಂದ ಮಾತ್ರ ಸಾಧ್ಯ. ಕಾಂಗ್ರೆಸ್ನ ಕೈ ಚಿಹ್ನೆ ಜನರನ್ನು ಅಭಿವೃದ್ಧಿಯತ್ತ ಕೊಂಡೊಯ್ಯ ಬಹುದು’ ಎಂದು ರಾಹುಲ್ ಹೇಳಿದ್ದಾರೆ. ದಿಲ್ಲಿಯಲ್ಲಿ ಶುಕ್ರವಾರ ಪಕ್ಷದ ಅಧಿ ವೇಶನದಲ್ಲಿ ಅವರು ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ