ಇಂಜಿನಿಯರ್ ಮೇಲೆ ಕೆಸರು ಸುರಿದ ಕಾಂಗ್ರೆಸ್ ಶಾಸಕ ನಿತೇಶ್ ರಾಣೆ
Team Udayavani, Jul 4, 2019, 3:59 PM IST
ಸಿಂಧದುರ್ಗ : ಬಿಜೆಪಿ ಶಾಸಕ ಆಕಾಶ್ ವಿಜಯವರ್ಗೀಯ ಸರ್ಕಾರಿ ಅಧಿಕಾರಿಗೆ ಬ್ಯಾಟ್ ಹಲ್ಲೆ ನಡೆಸಿದ ವಿಚಾರ ಭಾರೀ ಸದ್ದು ಮಾಡಿದ ಬೆನ್ನಲ್ಲೇ ಮಹಾರಾಷ್ಟ್ರದ ಕಾಂಗ್ರೆಸ್ ಶಾಸಕ ನಿತೇಶ್ ರಾಣೆ, ಹೆದ್ದಾರಿ ಇಂಜಿನಿಯರ್ ಮೇಲೆ ಮಣ್ಣು ಸುರಿದು ಇನ್ನೊಂದು ವಿವಾದ ಹುಟ್ಟು ಹಾಕಿದ್ದಾರೆ.
ಕಂಕಾವಲಿ ಪ್ರಾಂತ್ಯದಲ್ಲಿ 600 ಕಿ.ಮೀ ಉದ್ದದ ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ಘಟನೆ ನಡೆದಿದೆ. ಪಿಡಬ್ಲ್ಯೂ ಡಿ ಇಂಜಿನಿಯರ್ ಪ್ರಕಾಶ್ ಖಾಂಡೇಕರ್ ಅವರನ್ನು ಕರೆಸಿಕೊಂಡಿದ್ದ ರಾಣೆ, ಕಾಮಾಗಾರಿ ವಿಳಂಬ ಮತ್ತು ರಸ್ತೆಗಳಲ್ಲಿನ ಹೊಂಡಗಳ ಬಗ್ಗೆ ಪ್ರಶ್ನಿಸಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಅಸಮರ್ಪಕ ಕಾಮಗಾರಿ, ರಸ್ತೆಗಳ ಹೊಂಡಗಳ ಬಗ್ಗೆ ಪ್ರಶ್ನಿಸಿ ಬಕೆಟ್ ತೆಗೆದು ಕೊಂಡು ಕೆಸರು ನೀರನ್ನು ಇಂಜಿನಿಯರ್ ಮೈಮೇಲೆ ಸುರಿದಿದ್ದಾರೆ. ಅದೇ ಸ್ಥಿತಿಯಲ್ಲಿ ಎರಡು ಸೇತುವೆ ಮೇಲೆ ಕರೆದುಕೊಂಡು ಹೋಗಿ ಸಮಸ್ಯೆಗಳ ಬಗ್ಗೆ ಹೇಳಿದ್ದಾರೆ. ಶಾಸಕರ ಬೆಂಬಲಿಗರು ಇಂಜಿನಿಯರ್ರನ್ನು ಸೇತುವೆಗೆ ಕಟ್ಟಿ ಹಾಕಿ ದಬ್ಬಾಳಿಕೆ ತೋರಿದ್ದಾರೆ.
ಕೆಂಡಾಮಂಡಲರಾಗಿದ್ದ ರಾಣೆ 15 ದಿನಗಳೊಳಗೆ ಸಮಸ್ಯೆ ಬಗೆ ಹರಿಯಬೇಕು ಎಂದು ಇಂಜಿನಿಯರ್ಗೆ ಎಚ್ಚರಿಕೆ ನೀಡಿದ್ದಾರೆ.
ನಿತೇಶ್ ರಾಣೆ ಬಿಜೆಪಿ ಬೆಂಬಲಿತ ರಾಜ್ಯಸಭಾ ಸದಸ್ಯ, ಮಾಜಿ ಮಹಾರಾಷ್ಟ್ರ ಸಿಎಂ ನಾರಾಯಣ ರಾಣೆ ಅವರ ಪುತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ