ರಾಜಸ್ಥಾನ: ಸಂಜೆಯೊಳಗೆ ಸಿಎಂ ಹೆಸರು ಅಂತಿಮ, ರಾಜ್ಯಪಾಲರ ಭೇಟಿ
Team Udayavani, Dec 12, 2018, 12:14 PM IST
ಜೈಪುರ : ರಾಜಸ್ಥಾನದ ಮುಂದಿನ ಮುಖ್ಯಮಂತ್ರಿಯನ್ನು ತೀರ್ಮಾನಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆ ಇದೀಗ ಇಲ್ಲಿನ ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯಾಲಯದಲ್ಲಿ ನಡೆಯುತ್ತಿದೆ.
ಪಿಸಿಸಿ ಅಧ್ಯಕ್ಷ ಸಚಿನ್ ಪೈಲಟ್ ಮತ್ತು ಮಾಜಿ ಮುಖ್ಯ ಮಂತ್ರಿ ಅಶೋಕ್ ಗೆಹಲೋತ್ ಅವರು ಸಿಎಂ ಹುದ್ದೆ ಆಕಾಂಕ್ಷಿಗಳಾಗಿದ್ದು, ಚುನಾವಣೆ ಗೆದ್ದು ಬಂದಿರುವ ಇವರಿಬ್ಬರೂ ಸಿಎಲ್ಪಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ನೂತನ ಮುಖ್ಯಮಂತ್ರಿ ಯಾರಾಗಬೇಕೆಂಬ ಬಗ್ಗೆ ಪ್ರತಿಯೋರ್ವ ಶಾಸಕರ ಅಭಿಪ್ರಾಯವನ್ನು ಪರಿಗಣಿಸಿ ಪಕ್ಷಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಅದನ್ನು ತಿಳಿಸಲಾಗುವುದು. ಅವರಿಂದ ಅಂತಿಮ ತೀರ್ಮಾನ ಗೊತ್ತಾದ ಬಳಿಕ ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರನ್ನು ಪಕ್ಷವು ಭೇಟಿಯಾಗಿ ನೂತನ ಸರಕಾರ ರಚನೆಯ ಹಕ್ಕನ್ನು ಮಂಡಿಸಲಿದೆ ಎಂದು ಎಐಸಿಸಿ ಪ್ರಧಾನಿ ಕಾರ್ಯದರ್ಶಿ ಅವಿನಾಶ್ ಪಾಂಡೆ ಮಾಧ್ಯಮಕ್ಕೆ ತಿಳಿಸಿದರು.