ಗುಜರಾತ್ ಸೋಲಲ್ಲೂ ಅಸಾಧಾರಣ ನಿರ್ವಹಣೆ: ಕೈ ಭವಿಷ್ಯ ಉಜ್ವಲ
Team Udayavani, Dec 18, 2017, 3:14 PM IST
ಹೊಸದಿಲ್ಲಿ : ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು; ಆದರೆ ಅದು ತೋರಿರುವ ಅಸಾಧಾರಣ ನಿರ್ವಹಣೆಯನ್ನು ಗಮನಿಸಿದರೆ ಮುಂಬರುವ ಕರ್ನಾಟಕ, ಛತ್ತೀಸ್ಗಢ ಮತ್ತು ರಾಜಸ್ಥಾನ ಚುನಾವಣೆಗಳಲ್ಲಿ ಮಾತ್ರವಲ್ಲದೆ 2019ರ ಮಹಾ ಚುನಾವಣೆಯಲ್ಲಿ ಇನ್ನೂ ಉತ್ತಮ ನಿರ್ವಹಣೆಯನ್ನು ದಾಖಲಿಸುವ ಸಾಧ್ಯತೆಗಳು ಈಗ ನಿಚ್ಚಳವಾಗಿದೆ. ಅಂತೆಯೇ ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷವೆನಿಸಿರುವ ಕಾಂಗ್ರೆಸ್ ಮರಳಿ ತನ್ನ ಗತ ವೈಭವವನ್ನು ಪಡೆಯುವ ಸಾಧ್ಯತೆಗಳನ್ನೂ ತಳ್ಳಿ ಹಾಕುವಂತಿಲ್ಲ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಈ ಬಾರಿಯ ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತಗಳು ಶೇ.7ರಷ್ಟು ಹೆಚ್ಚಿವೆ. 2012ರಲ್ಲಿ ಶೇ.38 ಇದ್ದ ಮತ ಪ್ರಾಪ್ತಿ ಪ್ರಮಾಣ ಈ ಬಾರಿ ಶೇ.45ಕ್ಕೇರಿದೆ. ಗುಜರಾತ್ನಲ್ಲಿ ಆಂಶಿಕವಾಗಿ ಜನರು ಮತ್ತೆ ಕಾಂಗ್ರೆಸ್ನತ್ತ ವಾಲಿರುವುದು ಸ್ಪಷ್ಟವಿದೆ.
ಗುಜರಾತ್ ಚುನಾವಣೆಯಲ್ಲಿ ರಾಹುಲ್ ಗಾಂಧಿ ರೈತರ ಸಮಸ್ಯೆ, ನಿರುದ್ಯೋಗ ಮತ್ತು ಜಿಎಸ್ಟಿ ಅನುಷ್ಠಾನದಲ್ಲಿನ ಲೋಪದೋಷಗಳನ್ನು ಜನರ ಗಮನಕ್ಕೆ ತರುವಲ್ಲಿ ಸಫಲರಾಗುವ ಮೂಲಕ ಮತದಾರರ ಒಲವನ್ನು ಗಮನಾರ್ಹವಾಗಿ ಸಾಧಿಸಿದ್ದಾರೆ.
ಕಾಂಗ್ರೆಸ್ ವೋಟ್ ಶೇರ್ ಹೆಚ್ಚುವಲ್ಲಿ ಹಾರ್ದಿಕ್ ಪಟೇಲ್, ಅಲ್ಪೇಶ್ ಠಾಕೂಕ್ ಮತ್ತು ಜಿಗ್ನೇಶ್ ಮೇವಾನಿ ಅವರ ಕಾಣಿಕೆಯೂ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ