ಸೋನಿಯಾಗೆ ಇಡಿ ನೋಟಿಸ್ : ದಿಲ್ಲಿಯಲ್ಲಿ ನಾಳೆ ಕಾಂಗ್ರೆಸ್ ಶಕ್ತಿ ಪ್ರದರ್ಶನ ?
ದಿಲ್ಲಿಯಲ್ಲಿ ಬೀಡು ಬಿಟ್ಟ 700ಕ್ಕೂ ಹೆಚ್ಚು ನಾಯಕರು !
Team Udayavani, Jun 22, 2022, 1:23 PM IST
ಬೆಂಗಳೂರು : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಇಡಿ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು ನಾನಾ ರಾಜ್ಯಗಳಿಂದ ಬಂದ 700ಕ್ಕೂ ಹೆಚ್ಚು ನಾಯಕರು ದಿಲ್ಲಿಯಲ್ಲಿ ಬೀಡು ಬಿಟ್ಟಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸೇರಿದಂತೆ ರಾಜ್ಯದ ಘಟಾನುಘಟಿ ನಾಯಕರು ದಿಲ್ಲಿಗೆ ತೆರಳಿದ್ದಾರೆ. ಎಲ್ಲ ರಾಜ್ಯಗಳ ಕಾಂಗ್ರೆಸ್ ನಾಯಕರ ಜತೆ ಸೇರಿ ಪ್ರತಿಭ ಟನೆ ನಡೆಸಲು ನಿರ್ಧರಿಸಲಾಗಿದೆ. ಅಗ್ನಿಪಥ್ ಯೋಜನೆಯ ವಿರುದ್ಧವೂ ಈ ಸಂದರ್ಭದಲ್ಲಿ ಹೋರಾಟ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.
ಸಿದ್ದರಾಮಯ್ಯ ಆರೋಪ
ದಿಲ್ಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ, ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ. ಸೋನಿಯಾ ಹಾಗೂ ರಾಹುಲ್ ಗಾಂಧಿಯವರಿಗೆ ಕಿರುಕುಳ ನೀಡುವುದಕ್ಕಾಗಿಯೇ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ. ಕೇಂದ್ರ ಸರಕಾರದ ಈ ನೀತಿ ಖಂಡಿಸಿ ದೇಶಾದ್ಯಂತ ಹೋರಾಟ ನಡೆಸಲಾಗುವುದು ಎಂದು ಹೇಳಿದರು.