ಮಣಿಪುರದ ಉಖ್ರುಲ್ನಲ್ಲಿ ಕಾಂಗ್ರೆಸ್ ಸಮಾವೇಶದ ವೇಳೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
Team Udayavani, Mar 20, 2024, 8:55 AM IST
ಇಂಫಾಲ್: ಕಾಂಗ್ರೆಸ್ ನ ಸಾರ್ವಜನಿಕ ಸಭೆ ನಡೆಯುತ್ತಿದ್ದ ವೇಳೆ ಶಸ್ತ್ರಸಜ್ಜಿತ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆಸಿರುವ ಘಟನೆ ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ನಡೆದಿದೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಂಪಿಸಿಸಿ ಅಧ್ಯಕ್ಷ ಕೆ.ಮೇಘಚಂದ್ರ, ಚಿಂಗೈ ವಿಧಾನಸಭಾ ಕ್ಷೇತ್ರದ ಟೀನೆಮ್ ಗ್ರಾಮದಲ್ಲಿ ಮಂಗಳವಾರ ಸಭೆ ನಡೆಯುತ್ತಿದ್ದ ವೇಳೆ ಉಖ್ರುಲ್ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಆಲ್ಫ್ರೆಡ್ ಕಂಗಮ್ ಆರ್ಥರ್ ಮೇಲೆ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಹಲ್ಲೆ ನಡೆಸಿ ಗುಂಡಿನ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದ್ದಾರೆ.
ಮಾಜಿ ಶಾಸಕ ಆಲ್ಫ್ರೆಡ್ ಉಖ್ರುಲ್ನ ಪಯೋರಿ ಶಿರುಯಿ ಗ್ರಾಮದ ಟಿಕ್ ವುಡ್ಲ್ಯಾಂಡ್ ರೆಸಾರ್ಟ್ನಲ್ಲಿ ಸಭೆ ನಡೆಸಿದ ವೇಳೆ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಉಖ್ರುಲ್ ಜಿಲ್ಲೆಯ ಹೊರ ಕ್ಷೇತ್ರದ ಅಭ್ಯರ್ಥಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಮಣಿಪುರದ ಮುಖ್ಯ ಚುನಾವಣಾ ಅಧಿಕಾರಿ ಮತ್ತು ರಾಜ್ಯ ಸರ್ಕಾರವನ್ನು ಎಂಪಿಸಿಸಿ ಒತ್ತಾಯಿಸಿದೆ.
ಚುನಾವಣೆ ಹಿನ್ನೆಲೆಯಲ್ಲಿ ಆಲ್ಫ್ರೆಡ್ ಕಂಗಮ್ ಆರ್ಥರ್ ಅವರು ಕಳೆದ ಮೂರು ದಿನಗಳಿಂದ ಚುನಾವಣಾ ಪ್ರಚಾರದ ಭಾಗವಾಗಿ ಜನರನ್ನು ಭೇಟಿಯಾಗುತ್ತಿದ್ದಾರೆ ಇದರ ನಡುವೆ ಹಲ್ಲೆ ನಡೆದಿರುವುದು ಆತಂಕದ ಸಂಗತಿ ಎಂದು ಪಕ್ಷದ ಕಾರ್ಯಕರ್ತ ಮೇಘಚಂದ್ರ ಹೇಳಿದ್ದಾರೆ.
ಇದನ್ನೂ ಓದಿ: Tragedy: ಕೊಡಲಿಯಿಂದ ಕೊಚ್ಚಿ 2 ಮಕ್ಕಳ ಹತ್ಯೆ ಮಾಡಿದ ಕ್ಷೌರಿಕ ಎನ್ಕೌಂಟರ್ನಲ್ಲಿ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ