ಮತ್ತಿಬ್ಬರು ಶಾಸಕರ ರಾಜೀನಾಮೆ…ಬಹುಮತ ಸಾಬೀತು ಮುನ್ನವೆ ಸಿಎಂ ನಾರಾಯಣಸ್ವಾಮಿಗೆ ಆಘಾತ
Team Udayavani, Feb 21, 2021, 7:10 PM IST
ಪುದುಚೇರಿ : ನಾಳೆ (ಫೆ.22) ಬಹುಮತ ಸಾಬೀತುಪಡಿಸಲು ಸಿದ್ಧತೆ ನಡೆಸಿರುವ ಸಿಎಂ ವಿ.ನಾರಾಯಣಸ್ವಾಮಿ ಅವರಿಗೆ ದೊಡ್ಡ ಆಘಾತವಾಗಿದೆ. ತಮ್ಮ ಮೈತ್ರಿ ಸರ್ಕಾರದ ಕಾಂಗ್ರೆಸ್ ಹಾಗೂ ಡಿಎಂಕೆಯ ಇಬ್ಬರು ಶಾಸಕರು ತಮ್ಮ ಸ್ಥಾನಕ್ಕೆ ಇಂದು ( ಫೆ.21) ರಾಜೀನಾಮೆ ಸಲ್ಲಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ಪುದುಚೇರಿಯಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದೆ. ಕಾಂಗ್ರೆಸ್ ಹಾಗೂ ಡಿಎಂಕೆ ಮೈತ್ರಿ ಸರ್ಕಾರ ಪತನವಾಗುವ ಲಕ್ಷಣ ಗೋಚರಿಸುತ್ತಿವೆ. ಈಗಾಗಲೇ ಆಡಳಿತಾರೂಢದ ಉಭಯ ಪಕ್ಷಗಳ ಕೆಲ ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಪಾಳಯಕ್ಕೆ ಜಿಗಿದಿದ್ದಾರೆ. ಈ ಪಕ್ಷಾಂತರ ಪರ್ವ ಇನ್ನೂ ಮುಂದುವರೆದಿದ್ದು, ಇಂದೂ ಕೂಡ ಕಾಂಗ್ರೆಸ್ ಹಾಗೂ ಡಿಎಂಕೆಯ ಇಬ್ಬರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ಕೆ. ಲಕ್ಷ್ಮೀನಾರಾಯಣನ್ ಹಾಗೂ ಡಿಎಂಕೆಯ ವೆಂಕಟೇಶನ್ ತಮ್ಮ ರಾಜೀನಾಮೆ ಪತ್ರವನ್ನು ವಿಧಾನಸಭೆಯ ಸ್ಪೀಕರ್ ವಿಪಿ ಶಿವಕೊಂಜ್ಹುಂಡು ಅವರಿಗೆ ಸಲ್ಲಿಸಿದ್ದಾರೆ. ಇವರೂ ಸಹ ಬಿಜೆಪಿ ಪಕ್ಷ ಸೇರುವ ಸಾಧ್ಯತೆ ಕೇಳಿ ಬರುತ್ತಿದೆ.
ಇನ್ನು ಫೆ.22 ರಂದು ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಬಹುಮತ ಸಾಬೀತುಪಡಿಸಬೇಕಿದೆ. ಈಗಾಗಲೇ ಅವರ ಸರ್ಕಾರ ಅಲ್ಪಮತಕ್ಕೆ (11 ಶಾಸಕರು) ಕುಸಿದಿದ್ದು, ಪತನವಾಗುವುದು ಪಕ್ಕಾ ಎನ್ನಲಾಗುತ್ತಿದೆ. ವಿರೋಧ ಪಕ್ಷದ ಶಾಸಕರ ಸಂಖ್ಯೆ 14 ಇದೆ.
Congress MLA K Lakshminarayanan hands over his resignation letter to Puducherry Assembly Speaker VP Sivakozhundu. pic.twitter.com/5hJVABW06s
— ANI (@ANI) February 21, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!