ಪ್ರತಿಭಟನೆ ಲೂಟಿಯಲ್ಲಿ ಮುಕ್ತಾಯ: ಕಾಂಗ್ರೆಸ್ ಶಾಸಕನ ವಿರುದ್ಧ ಕೇಸು
Team Udayavani, Nov 12, 2022, 7:11 PM IST
ಭೋಪಾಲ್: ರಸಗೊಬ್ಬರ ನೀಡುವಂತೆ ಆಗ್ರಹಿಸಿ ನಡೆಸಲಾಗಿದ್ದ ಪ್ರತಿಭಟನೆ ಲೂಟಿಯಲ್ಲಿ ಮುಕ್ತಾಯಗೊಂಡಿದೆ. ಪ್ರಕರಣ ಸಂಬಂಧ ಕಾಂಗ್ರೆಸ್ನ ಶಾಸಕ ಮನೋಜ್ ಚಾವ್ಲಾ ಸೇರಿದಂತೆ ಹಲವರ ವಿರುದ್ಧ ಕೇಸು ದಾಖಲಾಗಿದೆ.
ರತ್ನಾಂ ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರ ಸರಿಯಾಗಿ ವಿತರಣೆಯಾಗುತ್ತಿಲ್ಲವೆಂದು ರೈತರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಅಲೋಟ್ ಕ್ಷೇತ್ರದ ಶಾಸಕ ಮನೋಜ್ ಚಾವ್ಲಾ ಮತ್ತು ಕಾಂಗ್ರೆಸ್ ಮುಖಂಡ ಯೋಗೇಂದ್ರ ಸಿಂಗ್ ಜಾಡೋನ್ ಮತ್ತು ಇತರರು ರಸಗೊಬ್ಬರ ವಿತರಣಾ ಕೇಂದ್ರಕ್ಕೆ ನುಗ್ಗಿ ಮನಬಂದಂತೆ ಬೇಕಾದವರಿಗೆ ಯೂರಿಯಾ ವಿತರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಎಸ್ಪಿ ಹೇಳಿದ್ದಾರೆ. ಅದಕ್ಕೆ ಸಂಬಂಧಿಸಿದ ವಿಡಿಯೋ ಕೂಡ ಸ್ಥಳೀಯ ಮಟ್ಟದಲ್ಲಿ ವೈರಲ್ ಆಗಿದೆ. ಈ ನಡುವೆ, ಜಿಲ್ಲಾಡಳಿತ ಪ್ರತಿಕ್ರಿಯೆ ನೀಡಿದ್ದು, ರಸಗೊಬ್ಬರದ ಕೊರತೆ ಇಲ್ಲವೆಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು