ಹಿಮಾಚಲ ಪ್ರದೇಶ ರಾಜ್ಯಪಾಲರನ್ನೇ ಅಡ್ಡಗಟ್ಟಿ ಎಳೆದಾಡಿದ ಕಾಂಗ್ರೆಸ್ ಶಾಸಕರು! ಐವರು ಅಮಾನತು
ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಕೇವಲ ಒಂದು ವಾಕ್ಯವನ್ನು ಓದಿ ಬಜೆಟ್ ಭಾಷಣ ಕೊನೆಗೊಳಿಸಿದ್ದರು.
Team Udayavani, Feb 26, 2021, 4:10 PM IST
ನವದೆಹಲಿ: ವಿಧಾನಸಭೆಯಲ್ಲಿ ಬಜೆಟ್ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿ ತೆರಳುವ ವೇಳೆ ಹಿಮಾಚಲ್ ಪ್ರದೇಶದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಕೆಲವು ಕಾಂಗ್ರೆಸ್ ಶಾಸಕರು ಹಿಡಿದು ಎಳೆದಾಡಿರುವ ಘಟನೆ ಶುಕ್ರವಾರ(ಫೆ.26, 2021) ನಡದಿದೆ.
ಇದನ್ನೂ ಓದಿ:ಮೈದಾನಕ್ಕೆ ಸರ್ದಾರ್ ಪಟೇಲ್ ಹೆಸರು ಬದಲಾಯಿಸಿ ಮೋದಿ ಹೆಸರಿಟ್ಟಿದ್ದು ಸರಿಯಲ್ಲ: ಉಗ್ರಪ್ಪ
ಅಧಿವೇಶನ ಮುಗಿಸಿ ತಮ್ಮ ವಾಹನದತ್ತ ತೆರಳುತ್ತಿದ್ದ ರಾಜ್ಯಪಾಲ ಬಂಡಾರು ಅವರನ್ನು ಕಾಂಗ್ರೆಸ್ ಶಾಸಕರು ಹಿಡಿದು ಎಳೆದಾಡಿದ್ದು, ಶಿಸ್ತುಕ್ರಮದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿಪಕ್ಷ ನಾಯಕ ಮುಕೇಶ್ ಅಗ್ನಿಹೋತ್ರಿ, ಶಾಸಕರಾದ ಹರ್ಷ್ ವರ್ಧನ್ ಚೌಹಾಣ್, ಸುರೇಂದರ್ ಸಿಂಗ್ ಠಾಕೂರ್, ಸತ್ಪಾಲ್ ರೈಝಾದಾ ಮತ್ತು ವಿನಯ್ ಕುಮಾರ್ ಅವರನ್ನು ಬಜೆಟ್ ಕಲಾಪದಿಂದ ಅಮಾನತುಗೊಳಿಸಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಭಾರದ್ವಾಜ್ ತಿಳಿಸಿದ್ದಾರೆ.
ರಾಜ್ಯಪಾಲರನ್ನು ಹಿಡಿದೆಳೆದ ಘಟನೆ ನಂತರ ಹಿಮಾಚಲ್ ಪ್ರದೇಶ ವಿಧಾನಸಭೆ ಕಲಾಪವನ್ನು ಸೋಮವಾರ(ಮಾರ್ಚ್ 01, 2021) ಮಧ್ಯಾಹ್ನ 2ಗಂಟೆವರೆಗೆ ಮುಂದೂಡಲಾಗಿದೆ. ಇದಕ್ಕೂ ಮುನ್ನ ಕಲಾಪದಲ್ಲಿ ಐವರು ಶಾಸಕರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಭಾರದ್ವಾಜ್ ಗೊತ್ತುವಳಿ ಮಂಡಿಸಿದ್ದರು.
ಶುಕ್ರವಾರ ಬಜೆಟ್ ಅಧಿವೇಶನ ಆರಂಭಗೊಂಡ ಕೂಡಲೇ ಕಾಂಗ್ರೆಸ್ ಸದಸ್ಯರು ತೀವ್ರ ಗದ್ದಲ, ಕೋಲಾಹಲ ನಡೆಸಿದ ಪರಿಣಾಮ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಕೇವಲ ಒಂದು ವಾಕ್ಯವನ್ನು ಓದಿ ಬಜೆಟ್ ಭಾಷಣ ಕೊನೆಗೊಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ