ಕಾಂಗೆ‹ಸ್‌ ಮುಕ್ತ ಭಾರತ ನಮ್ಮ ಮಾತಲ್ಲ: ಭಾಗವತ್‌


Team Udayavani, Apr 2, 2018, 7:29 AM IST

11.jpg

ಪುಣೆ/ಹೊಸದಿಲ್ಲಿ: “ಕಾಂಗ್ರೆಸ್‌ ಮುಕ್ತ ಭಾರತ’ ಎನ್ನುವುದು ರಾಜಕೀಯ ಘೋಷ ವಾಕ್ಯ. ಅದು ಆರ್‌ಎಸ್‌ಎಸ್‌ನ ಭಾಷೆಯಲ್ಲ ಎಂದು ಸಂಘಟನೆಯ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ. “ಮುಕ್ತ’ ಪದ ರಾಜಕೀಯವಾಗಿ ಬಳಕೆ ಮಾಡಲಾಗುತ್ತದೆ. ಆದರೆ, ಸಂಘ ಪರಿವಾರದಲ್ಲಿ ಎಲ್ಲರನ್ನೂ ಜತೆಗೂಡಿಸಿಕೊಂಡು ಹೋಗುವ ಬಗ್ಗೆ ಮಾತನಾಡುತ್ತೇವೆ ಎಂದು ಪ್ರತಿಪಾದಿಸಿದ್ದಾರೆ.

ಮಹಾರಾಷ್ಟ್ರದ ಪುಣೆಯಲ್ಲಿ ರವಿವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸಂಘ ಪರಿವಾರ ಎಲ್ಲರನ್ನೂ ಒಟ್ಟುಗೂಡಿಸುವ ಮಾತನಾಡುತ್ತದೆ. ಮುಕ್ತ ಎಂಬ ಪದಪ್ರಯೋಗ ರಾಜಕೀಯಕ್ಕೆ ಸೀಮಿತ. ನಾವು ಯಾರನ್ನೂ ಹೊರಗಿಡುವಂಥ ಮಾತನ್ನು ಆಡುವುದಿಲ್ಲ. ದೇಶ ಕಟ್ಟುವ ಮತ್ತು ಅಭಿವೃದ್ಧಿ ಪ್ರಕ್ರಿಯೆಯಲ್ಲಿ ನಮ್ಮನ್ನು ವಿರೋಧಿಸುವವರನ್ನೂ ಕರೆದುಕೊಂಡು ಜತೆಗೂಡಿ ಸಾಗಬೇಕು’ ಎಂದು ಭಾಗವತ್‌ ಹೇಳಿದ್ದಾರೆ. 

ಧನಾತ್ಮಕ ಚಿಂತನೆ: ಯಾವುದೇ ರೀತಿಯ ಬದಲಾವಣೆ ತರಲು ಧನಾತ್ಮಕ ಚಿಂತನೆ ಬೇಕು. ಋಣಾತ್ಮಕ ಚಿಂತನೆ ಮಾಡುವವರಿಂದ ವಿಭಜನೆ ಮತ್ತು ಜಗಳವನ್ನು ಮಾತ್ರ ನಿರೀಕ್ಷಿಸಬಹುದು. ಅವರಿಂದ ದೇಶ ಕಟ್ಟುವಂಥ  ಯಾವುದೇ ಕೊಡುಗೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದಿ ದ್ದಾರೆ ಆರೆಸ್ಸೆಸ್‌ ಮುಖ್ಯಸ್ಥ. ಹಿಂದುತ್ವದ ಬಗ್ಗೆ ಮಾತ ನಾಡಿದ ಅವರು, ತನ್ನ ಬಗ್ಗೆ ವಿಶ್ವಾಸ ಹೊಂದಿರುವವನು ಕುಟುಂಬ ಮತ್ತು ದೇಶದ ಬಗ್ಗೆಯೂ ಅದೇ ಧೋರಣೆ ಹೊಂದಿ ರುತ್ತಾನೆ. ಅಂಥ ಮನಸ್ಥಿತಿ ಹೊಂದಿರುವ ವ್ಯಕ್ತಿಯಿಂ ದಲೇ ದೇಶ ಕಟ್ಟುವ ಪ್ರಕ್ರಿಯೆ ಶುರುವಾಗುತ್ತದೆ ಎಂದರು.

17ರಿಂದ ಆರ್‌ಎಸ್‌ಎಸ್‌ ಸಭೆ: ಇದೇ ವೇಳೆ, ಲೋಕ ಸಭೆ ಚುನಾವಣೆಗೆ ಸರಿಯಾಗಿ ಒಂದು ವರ್ಷ ಇರು ವಂತೆಯೇ ಆರೆಸ್ಸೆಸ್‌ ಕೂಡ ಪೂರ್ವ ಸಿದ್ಧತೆ ಆರಂಭಿ ಸಿದೆ. 17ರಿಂದ 21ರ ವರೆಗೆ ಪುಣೆಯಲ್ಲಿ ಬಿರುಸಿನ ಸಮಾಲೋಚನೆ ನಡೆಯಲಿದೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಡಗಳಲ್ಲಿ ಹಾಲಿ ಆಡಳಿತದಲ್ಲಿರುವ ಬಿಜೆಪಿ ಸರಕಾರಗಳ ವಿರುದ್ಧ ಜನಾಭಿಪ್ರಾಯ ರೂಪುಗೊಳ್ಳುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಹಾಗೂ ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನ, ಮಧ್ಯಪ್ರದೇಶಗಳ ಉಪಚುನಾವಣೆಗಳಲ್ಲಿ ಬಿಜೆಪಿಗೆ ಸೋಲು ಉಂಟಾಗಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ ಎಂದು ಆರೆಸ್ಸೆಸ್‌ನ ಹಿರಿಯ ನಾಯಕರೊಬ್ಬರನ್ನು ಉಲ್ಲೇಖೀಸಿ “ದ ಹಿಂದುಸ್ತಾನ್‌ ಟೈಮ್ಸ್‌’ ವರದಿ ಮಾಡಿದೆ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ನೇತೃತ್ವದಲ್ಲಿ ಈ  ಸಮಾಲೋಚನಾ ಸಭೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ, ಚುನಾವಣೆಗೆ ಸಂಬಂಧಿಸಿದಂತೆ ಸಿದ್ಧತೆ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆವ ಸಾಧ್ಯತೆ ಇದೆ. 21 ರಾಜ್ಯಗಳಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳ ಸರಕಾರ ಇದ್ದ ಹೊರತಾಗಿಯೂ ಉಪಚುನಾವಣೆಗಳಲ್ಲಿ ಪಕ್ಷಕ್ಕೆ ಸೋಲು ಉಂಟಾಗಿರುವುದು, ಗುಜರಾತ್‌ನಲ್ಲಿ ಬಿಜೆಪಿಯ ಸಂಖ್ಯಾ ಬಲ ಕುಸಿದಿರುವುದನ್ನೂ ಆರೆಸ್ಸೆಸ್‌ ಗಂಭೀರ ವಾಗಿ ಪರಿಗಣಿಸಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶ ಗಳಲ್ಲಿ ನಾಯಕತ್ವ ಬದಲಾಗುವ ಬಗ್ಗೆಯೂ ಪರಿಶೀಲನೆ ನಡೆಯಲಿದೆ ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ರಾಜಗುರು ಆರೆಸ್ಸೆಸ್‌ ಸ್ವಯಂ ಸೇವಕ
ಸ್ವಾತಂತ್ರ್ಯ ಹೋರಾಟಗಾರ ರಾಜಗುರು ಆರೆಸ್ಸೆಸ್‌ ಸ್ವಯಂಸೇವಕ. ಹೀಗೆಂದು ಹಿರಿಯ ಪತ್ರಕರ್ತ ನರೇಂದ್ರ ಸೆಹೆಗಲ್‌ ಬರೆದಿರುವ “ಭಾರತ್‌ ವರ್ಷ್‌ ಕಿ ಸರ್ವಾಂಗ್‌ ಸ್ವತಂತ್ರತಾ’ ಎಂಬ ಪುಸ್ತಕದಲ್ಲಿ ಉಲ್ಲೇಖೀಸಲಾಗಿದೆ.  1928ರಲ್ಲಿ ಬ್ರಿಟಿಷ್‌ ಪೊಲೀಸ್‌ ಅಧಿಕಾರಿ ಜೆ.ಪಿ. ಸ್ಯಾಂಡರ್ಸ್‌ರಿಗೆ ಗುಂಡು ಹಾರಿಸಿದ್ದಕ್ಕೆ ಭಗತ್‌ ಸಿಂಗ್‌, ಸುಖ್‌ದೇವ್‌ ಹಾಗೂ ರಾಜಗುರು ಅವರಿಗೆ ಗಲ್ಲುಶಿಕ್ಷೆ ವಿಧಿಸಲಾಗಿತ್ತು. “ಆರೆಸ್ಸೆಸ್‌ ಸ್ವಾತಂತ್ರ್ಯ ಹೋರಾಟ ಗಾರರು’ ಎಂಬ ಹೆಸರಿನ ಅಧ್ಯಾಯದಲ್ಲಿ ಈ ಅಂಶದ ಉಲ್ಲೇಖವಿದೆ. ಪುಸ್ತಕದ ಪ್ರತಿಯನ್ನು ಕಳೆದ ತಿಂಗಳು ನಾಗ್ಪುರದಲ್ಲಿ ನಡೆದಿದ್ದ ಅಖೀಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಹಂಚಲಾಗಿತ್ತು. ರಾಜಗುರು ಸಂಘದ ಸಂಸ್ಥಾಪಕ ಕೆ.ಬಿ.ಹೆಡಗೆವಾರ್‌ರನ್ನು ಭೇಟಿಯಾಗಿದ್ದರು ಎಂದು ಪುಸ್ತಕದಲ್ಲಿ ಉಲ್ಲೇಖೀಸಲಾಗಿದೆ.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.