ಕಾಂಗ್ರೆಸ್, ಎನ್ ಸಿಪಿ ಕೂಡಾ ನಮ್ಮ ಸಂಪರ್ಕದಲ್ಲಿದೆ; ಶಿವಸೇನಾ ಮುಖಂಡ ಸಂಜಯ್
Team Udayavani, Oct 31, 2019, 6:28 PM IST
ಮುಂಬೈ: ಮಹಾರಾಷ್ಟ್ರದಲ್ಲಿ ಸರಕಾರ ರಚನೆಗೆ ಸಂಬಂಧಿಸಿದಂತೆ ಬಿಜೆಪಿ-ಶಿವಸೇನಾ ನಡುವೆ ಹಗ್ಗ ಜಗ್ಗಾಟ ಮುಂದುವರಿದಿರುವ ನಡುವೆಯೇ , ತಮ್ಮ ಪಕ್ಷದ ಜತೆ ಕಾಂಗ್ರೆಸ್, ಎನ್ ಸಿಪಿ ಪಕ್ಷಗಳೂ ಕೂಡಾ ಸಂಪರ್ಕದಲ್ಲಿದೆ ಎಂದು ಶಿವಸೇನಾ ಮುಖಂಡ, ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ತಿಳಿಸಿದ್ದಾರೆ.
ಮತ್ತೊಂದೆಡೆ ನೂತನವಾಗಿ ಆಯ್ಕೆಯಾದ ಪಕ್ಷದ ಶಾಸಕರ ಜತೆಗಿನ ಮಾತುಕತೆ ವೇಳೆ ಪಕ್ಷದ ವರಿಷ್ಠ ಉದ್ಧವ್ ಠಾಕ್ರೆ, ಯಾವುದೇ ಕಾರಣಕ್ಕೂ ಊಹಾಪೋಹಗಳನ್ನು ನಂಬಲು ಹೋಗಬೇಡಿ ಎಂದು ತಿಳಿಸಿದ್ದರು.
ನಮಗೆ ಬೇರೆ ರಾಜಕೀಯ ಪಕ್ಷಗಳ ಆಫರ್ ಇನ್ನಷ್ಟೇ ಬರಬೇಕಾಗಿದೆ. ಆದರೆ ಕೆಲವು ಪಕ್ಷಗಳು ಮಾಧ್ಯಮಗಳ ಮೂಲಕ ತಮ್ಮ ಪ್ರಸ್ತಾಪವನ್ನು ಮಂಡಿಸುತ್ತಿದ್ದಾರೆ. ಅಲ್ಲದೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕಾರ ಹಂಚಿಕೆಯ 50;50 ಸೂತ್ರವನ್ನು ಈಡೇರಿಸಲಿದ್ದಾರೆ ಎಂದು ಉದ್ಧವ್ ಈ ಸಂದರ್ಭದಲ್ಲಿ ವಿಶ್ವಾಸವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣೆಗೂ ಮುನ್ನ ನಡೆದ ಮಾತುಕತೆ ವೇಳೆ 50;50 ಸೂತ್ರದ ಬಗ್ಗೆ ಒಪ್ಪಿಗೆ ಸೂಚಿಸಿರುವುದಾಗಿ ಉದ್ಧವ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.
ಈ ಮೂಲಕ ಮುಖ್ಯಮಂತ್ರಿ ಸ್ಥಾನದಲ್ಲಿ ಎರಡೂವರೆ ವರ್ಷ ಬಿಜೆಪಿಯ ಫಡ್ನವೀಸ್ ಗೆ ಹಾಗೂ ಉಳಿದ ಎರಡೂವರೆ ವರ್ಷ ಶಿವಸೇನಾದ ಆದಿತ್ಯ ಠಾಕ್ರೆಗೆ ನೀಡಬೇಕೆಂಬುದು ಶಿವಸೇನಾದ ಆಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?