Elections: ಮಧ್ಯಪ್ರದೇಶ,ತೆಲಂಗಾಣ, ಛತ್ತೀಸ್‌ಗಢ ಚುನಾವಣೆ: ʼಕೈʼ ಮೊದಲ ಪಟ್ಟಿ ಬಿಡುಗಡೆ


Team Udayavani, Oct 15, 2023, 10:01 AM IST

Elections: ಮಧ್ಯಪ್ರದೇಶ,ತೆಲಂಗಾಣ, ಛತ್ತೀಸ್‌ಗಢ ಚುನಾವಣೆ: ʼಕೈʼ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ: ಇದೇ ವರ್ಷದಲ್ಲಿ ನಡೆಯಲಿರುವ  ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗಳಿಗೆ ಕಾಂಗ್ರೆಸ್‌ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ(ಅ.15 ರಂದು) ಬಿಡುಗಡೆ ಮಾಡಿದೆ.

ಮಧ್ಯಪ್ರದೇಶದ 144 ವಿಧಾನಸಭಾ ಕ್ಷೇತ್ರ, ಛತ್ತೀಸ್‌ಗಢದ 30 ಮತ್ತು ತೆಲಂಗಾಣದಲ್ಲಿ 55 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್‌ ಘೋಷಿಸಿದೆ.

ಕ್ಷೇತ್ರ ಮತ್ತು ಪ್ರಮುಖರ ಹೆಸರು..

ಮಧ್ಯ ಪ್ರದೇಶ: ಮಧ್ಯ ಪ್ರದೇಶದ 230 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ ಮೊದಲ ಪಟ್ಟಿಯಲ್ಲಿ 144 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ರಿವೀಲ್‌ ಮಾಡಿದೆ. ಮುಖ್ಯವಾಗಿ ಮಧ್ಯಪ್ರದೇಶದಲ್ಲಿ ಛಿಂದ್ವಾರಾ ಕ್ಷೇತ್ರದಿಂದ ಮಾಜಿ ಸಿಎಂ ಕಮಲ್ ನಾಥ್ ಅವರಿಗೆ ಟಿಕೆಟ್‌ ನೀಡಲಾಗಿದೆ. ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಅವರ ಸಹೋದರ ಲಕ್ಷ್ಮಣ್ ಸಿಂಗ್ ಅವರನ್ನು ಚಚೌರಾದಿಂದ ಕಣಕ್ಕಿಳಿಸಲಾಗಿದೆ.  ಮಾಜಿ ಸಿಎಂ ಪುತ್ರ ಜೈವರ್ಧನ್ ಸಿಂಗ್ ರಾಘೋಘರ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿ ಕಣಕ್ಕಿಳಿಸಿರುವ ಬುಧ್ನಿ ಕ್ಷೇತ್ರದಿಂದ ಕಾಂಗ್ರೆಸ್ ವಿಕ್ರಮ್ ಮಸ್ತಲ್ ಅವರನ್ನು ಕಣಕ್ಕಿಳಿಸಿದೆ. ಚುರ್ಹಾತ್ ನಿಂದ ಅಜಯ್ ಸಿಂಗ್ ರಾಹುಲ್, ರೌ ಕ್ಷೇತ್ರದಿಂದ ದಿಂದ ಜಿತು ಪಟ್ವಾರಿ, ಅತೆರ್ ನಿಂದ ಹೇಮಂತ್ ಕಟಾರೆ, ಝಬುವಾ ಕ್ಷೇತ್ರದಿಂದ ವಿಕ್ರಾಂತ್ ಭುರಿಯಾ ಅವರಿಗೆ ಟಿಕೆಟ್‌ ನೀಡಲಾಗಿದೆ.

ಚುನಾವಣೆ ಯಾವಾಗ?:  ನವೆಂಬರ್ 17 ರಂದು ವಿಧಾನಸಭಾ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

ಛತ್ತೀಸ್‌ಗಢ: 90 ವಿಧಾನ ಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 30 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಛತ್ತೀಸ್‌ಗಢದ ಉಪಮುಖ್ಯಮಂತ್ರಿ ಟಿಎಸ್ ಸಿಂಗ್ ದೇವ್ ಅವರು ತನ್ನ ಬಲಿಷ್ಠ ಕ್ಷೇತ್ರವಾದ ಅಂಬಿಕಾಪುರದಿಂದಲೇ ಈ ಬಾರಿಯೂ ಸ್ಪರ್ಧಿಸಲಿದ್ದಾರೆ. ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಪಟಾನ್‌ನಿಂದ ಸ್ಪರ್ಧಿಸಲಿದ್ದಾರೆ. ವಿಶೇಷವೆಂದರೆ 30 ಅಭ್ಯರ್ಥಿಗಳ ಪೈಕಿ 14 ಮಂದಿ ಎಸ್‌ಟಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ.ಇದಲ್ಲದೆ ಮೊದಲ ಪಟ್ಟಿಯಲ್ಲಿ ಮೂವರು ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ.

ಚುನಾವಣೆ ಯಾವಾಗ?:  ಛತ್ತೀಸ್‌ಗಢದಲ್ಲಿ ನವೆಂಬರ್ 7 ಮತ್ತು ನವೆಂಬರ್ 17 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

ತೆಲಂಗಾಣ: 119 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ ಮೊದಲ 55 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಮುಖ್ಯವಾಗಿ ಕೊಡಂಗಲ್‌ ಕ್ಷೇತ್ರದಿಂದ ಅನುಮುಲಾ ರೇವಂತ್‌ ರೆಡ್ಡಿ, ಹುಜೂರ್‌ನಗರದಿಂದ ಉತ್ತಮ್‌ಕುಮಾರ್‌ ರೆಡ್ಡಿ ಅವರಿಗೆ ʼಕೈʼ ಟಿಕೆಟ್‌ ನೀಡಿದೆ. ಇತರೆ ಪ್ರಮುಖ ಹೆಸರುಗಳೆಂದರೆ, ಮುಳುಗು ಕ್ಷೇತ್ರದಿಂದ ದಾಸರಿ ದಾಸರಿ ಸೀತಕ್ಕ ಅವರಿಗೆ ಟಿಕೆಟ್‌ ನೀಡಿದ್ದು, ಮೇದಕ್‌ನಿಂದ ಮೈನಂಪಳ್ಳಿ ರೋಹಿತ್‌ ರಾವ್‌ ಮತ್ತು ಮಲ್ಕಾಜ್‌ಗಿರಿಯಿಂದ ಮೈನಂಪಳ್ಳಿ ಹನುಮಂತರಾವ್‌ ಸ್ಪರ್ಧಿಸಲಿದ್ದಾರೆ.

ಚುನಾವಣೆ ಯಾವಾಗ?:  ತೆಲಂಗಾಣದಲ್ಲಿ ನವೆಂಬರ್ 30 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.