ಕಾಂಗ್ರೆಸ್ನದ್ದು ಮೊಸಳೆ ಕಣ್ಣೀರು: ಅನಂತ್
Team Udayavani, Jul 22, 2017, 7:00 AM IST
ಹೊಸದಿಲ್ಲಿ: ಲೋಕಸಭೆಯಲ್ಲಿ ಶುಕ್ರವಾರ ರೈತರ ಆತ್ಮಹತ್ಯೆ ವಿಚಾರದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಭಾರೀ ವಾಗ್ಯುದ್ಧ ನಡೆಯಿತು. ರೈತರ ಆತ್ಮಹತ್ಯೆ ತಡೆಗೆ ಸರಕಾರ ಏನೇನೂ ಮಾಡಿಲ್ಲ ಎಂದು ವಿಪಕ್ಷ ಕಾಂಗ್ರೆಸ್ ಆರೋಪಿ ಸಿದರೆ, ವಿಪಕ್ಷಗಳು ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಬಿಜೆಪಿ ಆರೋಪಿಸಿತು.
ಕಲಾಪದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ದೀಪೇಂದರ್ ಹೂಡಾ, ಆಂಧ್ರ, ಹರಿಯಾಣ, ಮಧ್ಯಪ್ರದೇಶ ದಲ್ಲಿ ರೈತರೆಲ್ಲ ಬೀದಿಗಿಳಿದಿದ್ದಾರೆ. ಆದರೂ, ಸರಕಾರ ಅವರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಜತೆಗೆ, ರೈತರು 3 ವರ್ಷಗಳಲ್ಲಿ ಹೆಚ್ಚು ಕಷ್ಟ ಅನುಭವಿಸುತ್ತಿದ್ದಾರೆ ಎಂದರು. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಅನಂತ್ಕುಮಾರ್, “ಬುಧವಾರ ನಾವೆಲ್ಲರೂ ರೈತರ ಸಮಸ್ಯೆಗಳ ಕುರಿತು ಚರ್ಚಿಸುವಾಗ ವಿಪಕ್ಷ ಕಾಂಗ್ರೆಸ್ ಸಭಾತ್ಯಾಗ ಮಾಡಿದ್ದೇಕೆ, ಬುಧವಾರದ ಚರ್ಚೆ ವೇಳೆ ಸೋನಿಯಾ ಗಾಂಧಿ, ರಾಹುಲ್ಗಾಂಧಿ ಎಲ್ಲಿದ್ದರು, ನೀವೆಲ್ಲಿದ್ದಿರಿ? ಈಗ ನೀವು ಮೊಸಳೆ ಕಣ್ಣೀರು ಸುರಿಸುತ್ತಿದ್ದೀರಿ. ರೈತರ ಬಗ್ಗೆ ನಾಟಕೀಯವಾಗಿ ಕರುಣೆ ತೋರಿಸುತ್ತಿದ್ದೀರಿ. ಮೋದಿ ಸರಕಾರವು ಕಳೆದ 3 ವರ್ಷಗಳಲ್ಲಿ ರೈತರಿಗಾಗಿ ಮಾಡಿದ ಕೆಲಸವನ್ನು ಈವರೆಗೆ ಯಾವ ಸರಕಾರವೂ ಮಾಡಿಲ್ಲ’ ಎಂದರು.
19 ಸಾವಿರ ಕೋ. ರೂ. ಕಪ್ಪುಹಣ
ಇದೇ ವೇಳೆ, ಸ್ವಿಸ್ನಲ್ಲಿರುವ ಎಚ್ಎಸ್ಬಿಸಿ ಬ್ಯಾಂಕ್ನ ಖಾತೆದಾರರ ಕುರಿತ ತನಿಖೆ ವೇಳೆ ಐಟಿ ಇಲಾಖೆಯು 19 ಸಾವಿರ ಕೋಟಿ ರೂ.ಮೊತ್ತದ ಕಪ್ಪುಹಣವನ್ನು ಪತ್ತೆ ಮಾಡಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟಿÉ ಲೋಕಸಭೆಗೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ದೀರ್ಘಕಾಲದಿಂದ ಯಾವುದೇ ಚಟುವಟಿಕೆ ನಡೆಸದೇ ಇದ್ದ 1.62 ಲಕ್ಷ ಶೆಲ್ ಕಂಪನಿಗಳ ನೋಂದಣಿ ರದ್ದು ಮಾಡಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್