“ಅನರ್ಹಗೊಳಿಸುವಾಗ ಇದ್ದ ವೇಗ ಈಗಲೂ ಇರಬೇಕು…”: ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಚಾಟಿ
Team Udayavani, Aug 5, 2023, 5:03 PM IST
ಹೊಸದಿಲ್ಲಿ: ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿದರೂ ರಾಹುಲ್ ಗಾಂಧಿ ಅವರ ಸಂಸದ ಸ್ಥಾನದ ಅನರ್ಹತೆಯನ್ನು ಇನ್ನೂ ರದ್ದು ಮಾಡದ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಲೋಕಸಭೆಯ ಸ್ಪೀಕರ್ ಮತ್ತು ಪ್ರಧಾನ ಕಾರ್ಯದರ್ಶಿ ಈ ವಿಚಾರದಲ್ಲಿ ವಿಳಂಬ ತಂತ್ರಗಳನ್ನು ಅನುಸರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.
“ರಾಹುಲ್ ಗಾಂಧಿಯವರ ಶಿಕ್ಷೆಗೆ ತಡೆ ನೀಡುತ್ತಿರುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಅದರ ಅರ್ಥವೇನು? ಅಂದರೆ ಅವರು ಮತ್ತೆ ಸಂಸತ್ ಕಲಾಪದಲ್ಲಿ ಭಾಗವಹಿಸುವ ಅವಕಾಶ ಪಡೆಯುತ್ತಿದ್ದಾರೆ ಎಂದು ಅರ್ಥವಲ್ಲವೆ? ಯಾವ ವೇಗದಲ್ಲಿ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ್ದರೋ, ಅದೇ ವೇಗದಲ್ಲಿ ಅವರ ಅನರ್ಹತೆಯನ್ನು ರದ್ದು ಮಾಡಬೇಕು” ಎಂದು ಚೌಧರಿ ಹೇಳಿದ್ದಾರೆ.
ಶುಕ್ರವಾರ ರಾತ್ರಿ ಸ್ಪೀಕರ್ ಅವರಿಗೆ ಕರೆ ಮಾಡಿ ಈ ವಿಚಾರವನ್ನು ಪ್ರಸ್ತಾಪಿಸಿದಾಗ ಸ್ಪೀಕರ್ ಅವರನ್ನು ಇಂದು ಭೇಟಿಯಾಗುವಂತೆ ಸೂಚಿಸಿದ್ದರು. ಆದರೆ ಇಂದಿನ ಸಭೆಯಲ್ಲಿ ಈ ವಿಷಯವನ್ನು ಪ್ರಧಾನ ಕಾರ್ಯದರ್ಶಿಯನ್ನು ಭೇಟಿಯಾಗಲು ಸೂಚಿಸಿದ್ದಾರೆ. ಹೀಗಾಗಿ ಅವರು ವಿಳಂಬ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.
ಇದನ್ನೂ ಓದಿ:ಕೋವಿಡ್ ಬಳಿಕ ಬಿಟೌನ್ ಬಾಕ್ಸ್ ಆಫೀಸ್ನಲ್ಲಿ ಮೋಡಿ ಮಾಡಿದ ರೊಮ್ಯಾಂಟಿಕ್ ಸಿನಿಮಾಗಳು
“ಸ್ಪೀಕರ್ ಅವರ ಸಲಹೆಯಂತೆ ಇಂದು ಬೆಳಗ್ಗೆ ಮತ್ತೆ ಕರೆ ಮಾಡಿದೆ. ಆಗ ಅವರು ಪ್ರಧಾನ ಕಾರ್ಯದರ್ಶಿ ಅವರ ಬಳಿ ಮಾತನಾಡಲು ಹೇಳಿದರು. ಮತ್ತು ದಾಖಲೆಗಳ ನ್ನು ಒಪ್ಪಿಸಲು ಹೇಳಿದರು. ಪ್ರಧಾನ ಕಾರ್ಯದರ್ಶಿಯವರಿಗೆ ಕರೆ ಮಾಡಿದರೆ, ಅವರು ತನ್ನ ಕಚೇರಿ ಇಂದು ಮುಚ್ಚಿದೆ. ಹೀಗಾಗಿ ದಾಖಲೆಗಳನ್ನು ಸ್ಪೀಕರ್ ಗೆ ತಲುಪಿಸಿ ಎಂದರು. ನಾನು ಪತ್ರವನ್ನು ಪೋಸ್ಟ್ ಮೂಲಕ ಕಳುಹಿಸಿದ್ದೇನೆ. ಅವರು ಅದಕ್ಕೆ ಸಹಿ ಹಾಕಿದ್ದಾರೆ ಆದರೆ ಸ್ಟಾಂಪ್ ಹಾಕಿಲ್ಲ. ಕಲಾಪ ನಡೆಯಬೇಕು ಮತ್ತು ರಾಹುಲ್ ಗಾಂಧಿ ಅವರು ಮತ್ತೆ ಸದನದಲ್ಲಿ ಭಾಗವಹಿಸಬೇಕು. ನ್ಯಾಯಾಲಯದಿಂದ ಅವರಿಗೆ ಪರಿಹಾರ ದೊರೆತ ನಂತರ, ಅವರು ಹಿಂತಿರುಗಲು ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ನಾವು ಸ್ಪೀಕರ್ ಗೆ ವಿನಂತಿಸುತ್ತೇವೆ”ಎಂದು ಚೌಧರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು